ಬಿಡಲಾಗದು ಇಲ್ಲಿಗೆ: ಅಯೋಧ್ಯೆ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!

By Web DeskFirst Published Dec 2, 2019, 6:09 PM IST
Highlights

ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದ| ಐತಿಹಾಸಿಕ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ| 217 ಪುಟಗಳ ಮೇಲ್ಮನವಿ ಸಲ್ಲಿಸಿದ ಜಮೈತ್- ಉಲಮಾ-ಇ- ಹಿಂದ್| ಸುಪ್ರೀಂ ತೀರ್ಪಿನಿಂದ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ ಎಂದ ಜಮೈತ್- ಉಲಮಾ-ಇ- ಹಿಂದ್|

ನವದೆಹಲಿ(ಡಿ.02): ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ  ಜಮೈತ್- ಉಲಮಾ-ಇ- ಹಿಂದ್ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿ ಜಮೈತ್- ಉಲಮಾ-ಇ- ಹಿಂದ್ 217 ಪುಟಗಳ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

ಅಯೋಧ್ಯೆ ತೀರ್ಪು ಮರುಪರಿಶೀಲನೆಗೆ ಮುಸ್ಲಿಂ ಪ್ರಮುಖರ ವಿರೋಧ!

ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿಯೇ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಜಮೈತ್- ಉಲಮಾ-ಇ- ಹಿಂದ್ ಸ್ಪಷ್ಟಪಡಿಸಿದೆ. 

ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾಗಿ ಜಮೈತ್- ಉಲಮಾ-ಇ- ಹಿಂದ್ ಪರ ವಕೀಲರು ತಿಳಿಸಿದ್ದಾರೆ.

ಅಯೋಧ್ಯೆ ವಿಚಾರದಲ್ಲಿ ಸುಪ್ರೀಂ ತೀರ್ಪು ಸರಿ ಇಲ್ಲ : ಪುರಿ ಸ್ವಾಮೀಜಿ ಅಸಮಾಧಾನ

ಆದರೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಇದುವರೆಗೂ ಮೇಲ್ಮನವಿ ಸಲ್ಲಿಸುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡಂತಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಡಳಿ ಪರ ವಕೀಲ ಜಫರಯಾಬ್ ಜಿಲಾನಿ, ಇಂದು ಮೇಲ್ಮನವಿ ಸಲ್ಲಿಸದಿರುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Zafaryab Jilani, All India Muslim Personal Law Board (AIMPLB): We are not going to file the review petition (in the Ayodhya case) before Supreme Court today. We have prepared the review petition and we can do it any day before 9th December. pic.twitter.com/wrujXqrQUc

— ANI (@ANI)

ಆದರೆ ಡಿ.09ರವೆರೆಗೆ ಸಮಯಾವಕಾಶವಿದ್ದು, ಶೀಘ್ರದಲ್ಲೇ ಈ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲಾನಿ ಸ್ಪಷ್ಟಪಡಿಸಿದ್ದಾರೆ.

ಮುಗಿದಿಲ್ಲ ಅಯೋಧ್ಯೆ ವಿಚಾರ: ಮರುಪರಿಶೀಲನೆಗೆ ಅರ್ಜಿ

click me!