ನವದೆಹಲಿ(ಡಿ.02): ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಜಮೈತ್- ಉಲಮಾ-ಇ- ಹಿಂದ್ ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿ ಜಮೈತ್- ಉಲಮಾ-ಇ- ಹಿಂದ್ 217 ಪುಟಗಳ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.
ಅಯೋಧ್ಯೆ ತೀರ್ಪು ಮರುಪರಿಶೀಲನೆಗೆ ಮುಸ್ಲಿಂ ಪ್ರಮುಖರ ವಿರೋಧ!
ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿಯೇ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಜಮೈತ್- ಉಲಮಾ-ಇ- ಹಿಂದ್ ಸ್ಪಷ್ಟಪಡಿಸಿದೆ.
ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾಗಿ ಜಮೈತ್- ಉಲಮಾ-ಇ- ಹಿಂದ್ ಪರ ವಕೀಲರು ತಿಳಿಸಿದ್ದಾರೆ.
ಅಯೋಧ್ಯೆ ವಿಚಾರದಲ್ಲಿ ಸುಪ್ರೀಂ ತೀರ್ಪು ಸರಿ ಇಲ್ಲ : ಪುರಿ ಸ್ವಾಮೀಜಿ ಅಸಮಾಧಾನ
ಆದರೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಇದುವರೆಗೂ ಮೇಲ್ಮನವಿ ಸಲ್ಲಿಸುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡಂತಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಡಳಿ ಪರ ವಕೀಲ ಜಫರಯಾಬ್ ಜಿಲಾನಿ, ಇಂದು ಮೇಲ್ಮನವಿ ಸಲ್ಲಿಸದಿರುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಆದರೆ ಡಿ.09ರವೆರೆಗೆ ಸಮಯಾವಕಾಶವಿದ್ದು, ಶೀಘ್ರದಲ್ಲೇ ಈ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲಾನಿ ಸ್ಪಷ್ಟಪಡಿಸಿದ್ದಾರೆ.
ಮುಗಿದಿಲ್ಲ ಅಯೋಧ್ಯೆ ವಿಚಾರ: ಮರುಪರಿಶೀಲನೆಗೆ ಅರ್ಜಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ