ದುರ್ವರ್ತನೆ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ಸಸ್ಪೆಂಡ್, ಇದೆ ಮೊದಲಾ?

Published : Jul 08, 2020, 06:36 PM ISTUpdated : Jul 08, 2020, 06:43 PM IST
ದುರ್ವರ್ತನೆ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ಸಸ್ಪೆಂಡ್, ಇದೆ ಮೊದಲಾ?

ಸಾರಾಂಶ

ಐಪಿಎಸ್‌ ಅಧಿಕಾರಿನ ಸಸ್ಪೆಂಡ್/ ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಿಯಾಗಿದ್ದವರು/ ಕಾಶ್ಮೀರ ಕೇಡರ್ ಅಧಿಕಾರಿ/ ದುರ್ವತನೆ ಕಾರಣಕ್ಕೆ ಸಸ್ಪೆಂಡ್

ನವದೆಹಲಿ(ಜು. 08)  ದುರ್ವತನೆ ಮತ್ತು ಕೆಟ್ಟ ನಡವಳಿಕೆ ತೋರಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಕೇಡರ್ ಐಪಿಎಸ್‌ ಅಧಿಕಾರಿ ಬಸಂತ್ ರಾತ್ ಅವರನ್ನು ಅಮಾನತು ಮಾಡಲಾಗಿದೆ.

ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಮಂಗಳವಾರ ಸಂಜೆ ಆದೇಶ ಹೊರಡಿಸಲಾಗಿದೆ. ಬಸಂತ್  2000 ನೇ ಇಸವಿಯ ಬ್ಯಾಚ್ ಅಧಿಕಾರಿ.

ನೆರೆಮನೆಯವರ ಮೇಲೆ ಐಪಿಎಸ್ ಅಧಿಕಾರಿ ಪತ್ನಿ ದೂರು

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ  ಕಾನೂನು ಮತ್ತು ಸುವ್ಯವಸ್ಥೆ ಐಜಿಯಾಗಿ ಬಸಂತ್  ನೇಮಕವಾಗಿದ್ದರು. ಜಮ್ಮು ಮತ್ತು ಕಾಶ್ಮೀರದ ಡೈರೆಕ್ಟರ್ ಜನರಲ್ ಅನುಮತಿ ಇಲ್ಲದೆ ಎಲ್ಲಿಯೂ ತೆರಳುವಂತಿಲ್ಲ ಎಂದು ತಿಳಿಸಲಾಗಿದೆ.

ದುಷ್ಟ ಶಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪವೂ ರಾತ್ ಮೇಲೆ ಕೇಳಿ ಬಂದಿತ್ತು.  ಕೆಟ್ಟ ವರ್ತನೆ ಕಾರಣ ನೀಡಿ ಅವರನ್ನು ಇದೀಗ ಅಮಾನತು ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ