
ಶ್ರೀನಗರ (ಆ. 03) ಕುಟುಂಬದೊಂದಿಗೆ ಈದ್ ಆಚರಣೆ ಮಾಡಲು ತೆರಳಿದ್ದ ಭಾರತೀಯ ಯೋಧ ಕಣ್ಮರೆಯಾಗಿದ್ದಾರೆ. ಜಮ್ಮುಕಾಶ್ಮೀರದ ಕುಲಗಾಂವ್ ಪ್ರದೇಶದಿಂದ ಭಾನುವಾರ ನಾಪತ್ತೆಯಾಗಿದ್ದಾರೆ. ಉಗ್ರರೇ ಯೋಧನ ಅಪಹರಣ ಮಾಡಿದ್ದಾರೆ ಎಂದು ಸೇನಾ ಮೂಲಗಳು ಹೇಳಿವೆ.
ನಾಪತ್ತೆಯಾಗಿರುವ ಯೋಧನಿಗಾಗಿ ಸೇನೆ ಹುಡುಕಾಟ ಶುರುಮಾಡಿದೆ. 162 ಬೆಟಾಲಿನ್ನ ರೈಫಲ್ಮೆನ್ ಶಕೀರ್ ಮಂಜೂರ್ ಭಾನುವಾರ ಸಂಜೆ 5ಗಂಟೆಯಿಂದಲೂ ನಾಪತ್ತೆಯಾಗಿದ್ದಾರೆ. ಕುಲಗಾಂವ್ ಬಳಿ ಅವರ ಕಾರು ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ.
ರಫೇಲ್ ಯುದ್ಧ ವಿಮಾನದ ವಿಶೇಷಗಳು ಏನು?
ಶಕೀರ್ ಈದ್ ಹಬ್ಬ ಆಚರಿಸಲೆಂದು ಶೋಪಿಯಾನ ಜಿಲ್ಲೆಯಲ್ಲಿರುವ ಮನೆಗೆ ಬಂದಿದ್ದರು. ಹಬ್ಬದ ನಿಮಿತ್ತ ನಿನ್ನೆ ಸಂಜೆ ಅವರು ಕುಟುಂಬದೊಂದಿಗೆ ಹೊರಗೆ ಹೊರಟವರು ನಂತರ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದಾರೆ
ಭದ್ರತಾ ಸಿಬ್ಬಂದಿ ಶೋಪಿಯಾನ್, ಕುಲಗಾಂವ್, ಅನಂತ್ನಾಗ್ ಜಿಲ್ಲೆಗಳಲ್ಲಿ ಕಳೆದು ಹೋದ ಯೋಧನಿಗಾಗಿ ಹುಡುಕಾಟ ನಡೆಸಿವೆ. ಪೊಲೀಸರು ಡ್ರೋನ್, ಸ್ನಿಫರ್ ಶ್ವಾನಗಳನ್ನು ಬಳಸಿ ಹುಡುಕುತ್ತಿದ್ದಾರೆ. ಯೋಧ ಸುರಕ್ಷಿತವಾಗಿ ಮನೆಗೆ ಬಂದು ಮತ್ತೆ ದೇಶ ಸೇವೆಯಲ್ಲಿ ತೊಡಗಿಕೊಳ್ಳಲಿ ಎಂಬುದೇ ಎಲ್ಲರ ಹಾರೈಕೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ