ಕಣಿವೆರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳ ಮೈತ್ರಿ: ಜಮ್ಮುಕಾಶ್ಮೀರ ವಿಶೇಷ ಸ್ಥಾನಮಾನ ಹಿಂಪಡೆಯಲು ಪಣ

Suvarna News   | Asianet News
Published : Oct 16, 2020, 12:36 PM ISTUpdated : Oct 16, 2020, 01:51 PM IST
ಕಣಿವೆರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳ ಮೈತ್ರಿ: ಜಮ್ಮುಕಾಶ್ಮೀರ ವಿಶೇಷ ಸ್ಥಾನಮಾನ ಹಿಂಪಡೆಯಲು ಪಣ

ಸಾರಾಂಶ

ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಪಡೆಯಲು ಪಣ | ಒಗ್ಗಟ್ಟಾಗ ಕಣಿವೆ ರಾಜ್ಯದ ಪ್ರಾದೇಶಿಕ ಪಕ್ಷಗಳು

ಶ್ರೀನಗರ(ಅ.16): ಕಣಿವೆ ರಾಜ್ಯದ ಪ್ರಾದೇಶಿಕ ಪಕ್ಷಗಳು ಒಟ್ಟಾಗಿವೆ. ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯಲು  ಪಣತೊಟ್ಟಿವೆ. ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫರೂಕ್ ಅಬ್ದುಲ್ಲ ಅವರು ಗುರುವಾರ ಈ ಸಂಬಂಧ ಸಭೆ ನಡೆಸಿದ್ದಾರೆ.

ಸುಮಾರು 6 ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಸಭೆ ನಡೆಸಿದ್ದು, ಪೀಪಲ್ಸ್ ಎಲಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಷನ್ ಎಂಬ ಗುಂಪು ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನಕ್ಕಾಗಿ ಹೋರಾಡಲು ಕಳೆದ ವರ್ಷ ಅಗಸ್ಟ್‌ 4ರಂದು ಗುಪ್ಕಾರ್ ಡಿಕ್ಲರೇಷನ್‌ಗೆ ಸಹಿ ಮಾಡಲಾಗಿತ್ತು.

ಪಾಕ್‌ ಅಧಿಕಾರಿಯ ಪಾಳು ಬಿದ್ದ ಸಮಾಧಿ ದುರಸ್ತಿ ಮಾಡಿದ ಭಾರತೀಯ ಸೇನೆ..!

ನಮ್ಮ ಉದ್ದೇಶ ಜಮ್ಮು ಕಾಶ್ಮೀರದ ಸ್ಥಾನಮಾನವನ್ನು ಮರಳಿ ಪಡೆಯುವುದು. ಇದೊಂದು ಸಂವಿಧಾನಿಕ ಹೋರಾಟ. ಆರ್ಟಿಕಲ್ 370 ಅನುಷ್ಠಾನಕ್ಕೂ ಮುನ್ನ ಲಡಾಖ್ ಸೇರಿ ಜಮ್ಮು ಕಾಶ್ಮೀರದ ಜನರಿಗಿದ್ದ ಹಕ್ಕುಗಳನ್ನು ಹಿಂಪಡೆಯುವುದು ನಮ್ಮ ಹೋರಾಟದ ಉದ್ದೇಶ ಎಂದು ಮೂರು ಬಾರಿ ಸಿಎಂ ಅಬ್ದುಲ್ಲ ತಿಳಿಸಿದ್ದಾರೆ.

ಡಾ. ಅಬ್ದುಲ್ಲ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬ ಮುಫ್ತಿ, ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜದ್ ಲೋನ್, ಸಿಪಿಐಎಂ ಮುಖ್ಯಸ್ಥ ಎಂವೈ ತರಿಗಾಮಿ ಸಭೆಯಲ್ಲಿ ಭಾಗವಹಿಸಿದ್ದರು. 14 ತಿಂಗಳ ಗೃಹ ಬಂಧನದಿಂದ ಬಿಡುಗಡೆಯಾದ ಮೆಹಬೂಬ ಮುಫ್ತಿ ಗುರುವಾರ ಅವರ ತಂದೆಯ ಸಮಾಧಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌