ಜಾರ್ಖಂಡ್‌ನಲ್ಲಿ ಹಾವಿನಿಂದ ಕಚ್ಚಿಸಿಕೊಳ್ಳುವ ವಿಶಿಷ್ಟಹಬ್ಬ!

Published : Oct 21, 2019, 12:35 PM IST
ಜಾರ್ಖಂಡ್‌ನಲ್ಲಿ ಹಾವಿನಿಂದ ಕಚ್ಚಿಸಿಕೊಳ್ಳುವ ವಿಶಿಷ್ಟಹಬ್ಬ!

ಸಾರಾಂಶ

ಇದೆಂಥಾ ವಿಚಿತ್ರ! ಹಾವುಗಳಿಂದ ಕಚ್ಚಿಸಿಕೊಳ್ಳುತ್ತಾರೆ ಈ ಗ್ರಾಮದ ಜನ | ಸಾರೋಟು ಓಡಿಸುತ್ತಾ ಹಾವಿನಿಂದ ಕಚ್ಚಿಸಿಕೊಳ್ಳುತ್ತಾರೆ. ಪೂಜೆಯ ವೇಳೆ ಸಾರೋಟಿನ ಮೇಲೆ ಕುಳಿತಾಗ ಹಾವು ಕಚ್ಚಿದರೂ ಏನೂ ಆಗುವುದಿಲ್ಲ!  

ರಾಂಚಿ (ಅ. 21): ವಿಷಕಾರಿ ಹಾವು ಕಡಿದರೆ ಬದುಕಿ ಉಳಿಯುವುದೇ ಅನುಮಾನ. ಆದರೆ, ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಹಾವಾಡಿಗರು ಸರ್ಪದಂತಹ ವಿಷಕಾರಿ ಹಾವಿನಿಂದ ಕಚ್ಚಿಸಿಕೊಳ್ಳುವ ವಿಚಿತ್ರ ಸಂಪ್ರದಾಯ ಪಾಲಿಸುತ್ತಿದ್ದಾರೆ. ಹಾವಿನಿಂದ ಕಚ್ಚಿಸಿಕೊಂಡರೆ ವಿಷದಿಂದ ಪ್ರತಿರಕ್ಷಣೆ ದೊರೆಯಲಿದೆ ಎಂಬುದು ಅವರ ನಂಬಿಕೆ.

ಶಂಕರ್ದ ಎಂಬ ಗ್ರಾಮದಲ್ಲಿ ಹಾವಾಡಿಗರು ಉರಗ ದೇವತೆಯಾದ ಮಾನಸಾ ದೇವಿಯನ್ನು ಮೆಚ್ಚಿಸಲು ಪ್ರತಿವರ್ಷ ಈ ಸಂಪ್ರದಾಯವನ್ನು ಪಾಲಿಸುತ್ತಿದ್ದಾರೆ. ಕಳೆದ 100 ವರ್ಷಗಳಿಂದಲೂ ಇಲ್ಲಿನ ಬುಡಕಟ್ಟು ಜನಾಂಗ ಸರ್ಪಗಳನ್ನು ಹಿಡಿದು ಅವುಗಳನ್ನು ಪ್ರದರ್ಶಿಸುವುದನ್ನೇ ಜೀವನೋಪಾಯವನ್ನಾಗಿಸಿಕೊಂಡಿದ್ದಾರೆ.

ಗೋವಾದಲ್ಲಿವೆ ನಾನ್ ವೆಜ್ ಹಸುಗಳು! ಸಸ್ಯಾಹಾರ ತಿನ್ನಲು ಹಿಂದೇಟು

ಸರ್ಪ ದೈವತ್ವ ಮತ್ತು ಸಾಂಪ್ರದಾಯಿಕ ವಿಧಾನಗಳಿಗೆ ಹೆಸರಾದ ಈ ಪೂಜೆಯಲ್ಲಿ ನೂರಾರು ಸಂಖ್ಯೆಯ ಹಾವಾಡಿಗರು ಪಾಲ್ಗೊಂಡು, ಹಾವಿನಿಂದ ಕಚ್ಚಿಸಿಕೊಳ್ಳುತ್ತಾರೆ. ಮಾನಸಾ ದೇವಿಯ ಪೂಜೆಯ ವೇಳೆ ಹಾವಾಡಿಗರು ಸಾರೋಟಿನ ಮೇಲೆ ಕುಳಿತು ದೇವಿಗೆ ಪೂಜೆ ನೆರವೇರಿಸುತ್ತಾರೆ.

ಸಾರೋಟು ಓಡಿಸುತ್ತಾ ಹಾವಿನಿಂದ ಕಚ್ಚಿಸಿಕೊಳ್ಳುತ್ತಾರೆ. ಪೂಜೆಯ ವೇಳೆ ಸಾರೋಟಿನ ಮೇಲೆ ಕುಳಿತಾಗ ಹಾವು ಕಚ್ಚಿದರೂ ಏನೂ ಆಗುವುದಿಲ್ಲ. ಹಾವಿನಿಂದ ಕಚ್ಚಿಸಿಕೊಳ್ಳುವುದರಿಂದ ವಿಷದಿಂದ ಪ್ರತಿರಕ್ಷಣೆ ದೊರೆಯಲಿದೆ ಮತ್ತು ರೋಗಗಳು ವಾಸಿಯಾಗಲಿದೆ ಎಂದು ಸ್ಥಳೀಯರು ಭಾವಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು