
ರಾಂಚಿ (ಡಿ.23): ರಾಜಸ್ತಾನ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿಯ ಸೋಲಿನ ಸರಣಿ ಮುಂದುವರಿದಿದೆ.
ಇಂದು (ಸೋಮವಾರ) ಪ್ರಕಟವಾದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಮುಗ್ಗರಿಸಿದ್ದು, ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.
ನ.23ರಿಂದ 6 ಹಂತಗಳಲ್ಲಿ 81 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದೆ. ಬಿಜೆಪಿಯು 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಜಾರ್ಖಂಡ್ ಮುಕ್ತಿ ಮೋರ್ಚಾ- ಕಾಂಗ್ರೆಸ್ ಮೈತ್ರಿಕೂಟವು 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ | ಅರ್ಹ ಶಾಸಕರ ಪ್ರಮಾಣವಚನ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ...
ಅಧಿಕಾರ ಹಿಡಿಯಲು 41 ಮ್ಯಾಜಿಕ್ ನಂಬರ್ ಆಗಿದ್ದು, ಕಾಂಗ್ರೆಸ್-ಜೆಎಂಎಂ-ಆರ್ಜೆಡಿ ಮೈತ್ರಿಕೂಟ ಸರಳ ಬಹುಮತವನ್ನು ಪಡೆದಿದೆ. ಈಗ ಲಭ್ಯವಿರುವ ಮಾಹಿತಿ ಪ್ರಕಾರ, ಬಿಜೆಪಿ 24, ಜೆವಿಎಂ 29 ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಮುಂದಿದೆ.
ಇನ್ನುಳಿದಂತೆ, ಕಳೆದ ಬಾರಿ 8 ಸ್ಥಾನಗಳನ್ನು ಪಡೆದಿದ್ದ ಜಾರ್ಖಂಡ್ ವಿಕಾಸ್ ಮೋರ್ಚಾ (JVM) ಈ ಬಾರಿ 3 ಸೀಟುಗಳಿಗೆ ಸೀಮಿತವಾಗಿದೆ. ಆಲ್ ಜಾರ್ಖಂಡ್ ಸ್ಟುಡೆಂಟ್ಸ್ ಯೂನಿಯನ್ (AJSU) 3 ಸೀಟುಗಳನ್ನು ಗೆದ್ದಿದೆ.
2014ರಲ್ಲಿ ಬಿಜೆಪಿಯು 37 ಸ್ಥಾನ, ಜಾರ್ಖಂಡ್ ಮುಕ್ತಿ ಮೋರ್ಚಾ 19, ಕಾಂಗ್ರೆಸ್ 6 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ ಸಿಎಂ ರಘುಬರ್ ದಾಸ್ ಈಗಾಗಲೇ ಸೋಲನ್ನೊಪ್ಪಿಕೊಂಡಿದ್ದು, ಜನಾದೇಶವನ್ನು ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ.
JMM ಮುಖ್ಯಸ್ಥ ಶಿಬು ಸೊರೆನ್ ಪುತ್ರ, 44 ವರ್ಷ ಪ್ರಾಯದ ಹೇಮಂತ್ ಸೊರೆನ್ಗೆ ಮತ್ತೆ ಮುಖ್ಯಮಂತ್ರಿ ಭಾಗ್ಯ ಒಲಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ