ಕಾರ್ಮಿಕರಿಗೆ ಬಿಗ್ ಶಾಕ್: ಕೆಲಸದ ಬೆನ್ನಲ್ಲೇ, ಮನೆಯೂ ಕೊಚ್ಚಿಹೋಯ್ತು!

Published : May 22, 2020, 09:05 AM ISTUpdated : May 22, 2020, 11:11 AM IST
ಕಾರ್ಮಿಕರಿಗೆ ಬಿಗ್ ಶಾಕ್: ಕೆಲಸದ ಬೆನ್ನಲ್ಲೇ, ಮನೆಯೂ ಕೊಚ್ಚಿಹೋಯ್ತು!

ಸಾರಾಂಶ

ಕೆಲಸದ ಬೆನ್ನಲ್ಲೇ, ಮನೆಯೂ ಕೊಚ್ಚಿಹೋಯ್ತು!| ಬಂಗಾಳ, ಒಡಿಶಾಕ್ಕೆ ಮರಳಿದ್ದ ವಲಸಿಗ ಕಾರ್ಮಿಕರಿಗೆ ದೊಡ್ಡ ಶಾಕ್‌| ಅಂಫಾನ್‌ ಚಂಡಮಾರುತದಲ್ಲಿ ಮನೆ ಕಳೆದುಕೊಂಡವರ ಗೋಳು

ಕೋಲ್ಕತಾ(ಮೇ.22): ಮೊದಲು ಕೊರೋನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಇದ್ದ ಉದ್ಯೋಗವೂ ಹೋಗಿತ್ತು. ಈಗ ಅಂಫಾನ್‌ ಚಂಡಮಾರುತ ಇದ್ದ ಒಂದು ಪಟ್ಟಮನೆಯನ್ನೂ ನಾಶಪಡಿಸಿತು. ಇದು, ಬೆಂಗಳೂರಿನಿಂದ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಗೋಸಾಬಾ ಗ್ರಾಮಕ್ಕೆ ತೆರಳಿದ್ದ ವಲಸೆ ಕಾರ್ಮಿಕ ಜಮಾಲ್‌ ಮೊಂಡಾಲ್‌ (45) ಎಂಬಾತನ ನೋವಿನ ಕತೆ.

ಕೊರೋನಾ ಲಾಕ್‌ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡಿದ್ದ ಆತ, ಸೋಮವಾರವಷ್ಟೇತನ್ನ ಕುಟುಂಬ ಸದಸ್ಯರನ್ನು ಸೇರಿಕೊಂಡಿದ್ದ. ಆದರೆ, ಜಮಾಲ್‌ ಸಂತಸ ಹೆಚ್ಚು ಹೊತ್ತು ಇರಲಿಲ್ಲ. ಬುಧವಾರ ರಾತ್ರಿ ಅಂಫಾನ್‌ ಚಂಡ ಮಾರುತದಿಂದ ಜಮಾಲ್‌ ಮೊಂಡಲ್‌ನ ಮಣ್ಣಿನ ಮನೆ ಕುಸಿದುಬಿದ್ದಿತ್ತು. ಹೀಗಾಗಿ ಮೊಂಡಲ್‌ ಕುಟುಂಬ ಅತಂತ್ರಸ್ಥಿತಿಗೆ ಸಿಲುಕಿದೆ. ನಾಲ್ವರು ಮತ್ತು ಪತ್ನಿಯ ಜೊತೆ ಮೊಂಡಲ್‌ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.

‘ಅಂಫನ್‌’ ಚಂಡಮಾರುತ ವಿರುದ್ಧ ಗೆದ್ದ ಪಟ್ನಾಯಕ್‌: ಮಮತಾ ಫೇಲ್‌!

‘ಸೋಮವಾರ ನಾನು ಮನೆಗೆ ಹೋಗಿ ಮುಟ್ಟಿದಾಗ ನನ್ನ ಕಷ್ಟಗಳೆಲ್ಲವೂ ಮುಗಿದು ಹೋಯಿತೆಂದು ಅಂದುಕೊಂಡಿದ್ದೆ. ಆದರೆ, ಆಗಿದ್ದೇ ಬೇರೆ. ಚಂಡ ಮಾರುತದಿಂದ ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಮುಂದೇನು ಮಾಡುವುದು, ಕುಟುಂಬವನ್ನು ಹೇಗೆ ನಿಭಾಯಿಸುವುದು ಎಂದು ತೋಚದಂತಾಗಿದೆ’ ಎಂದು ಎಂದು ಜಮಾಲ್‌ ಮೊಂಡಲ್‌ ಮಾಧ್ಯಮದ ಮುಂದೆ ತಮ್ಮ ನೋವನ್ನು ಹೇಳಿಕೊಂಡಿದ್ದಾನೆ.

ಇದು ಜಮಾಲ್‌ ಒಬ್ಬನ ಕಥೆಯಲ್ಲ. ಲಾಕ್ಡೌನ್‌ನಿಂದ ಉದ್ಯೋಗ ಕಳೆದುಕೊಂಡು ಪಶ್ಚಿಮ ಬಂಗಾಳ ಮತ್ತು ಒಡಿಶಾಕ್ಕೆ ಮರಳಿದ್ದ ನೂರಾರು ವಲಸಿಗ ಕಾರ್ಮಿಕರ ಕಥೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?