ಮತ್ತೊಮ್ಮೆ ಮೋದಿ: ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಜೆ.ಪಿ. ನಡ್ಡಾ ಚಾಲನೆ; ರಾಜ್ಯದಲ್ಲೂ ಶುರು

Published : Jan 16, 2024, 08:04 AM IST
ಮತ್ತೊಮ್ಮೆ ಮೋದಿ: ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಜೆ.ಪಿ. ನಡ್ಡಾ ಚಾಲನೆ; ರಾಜ್ಯದಲ್ಲೂ ಶುರು

ಸಾರಾಂಶ

ದಿಲ್ಲಿಯ ಸ್ಥಳೀಯ ಮಾರುಕಟ್ಟೆಯಲ್ಲಿ ಪ್ರಚಾರದಲ್ಲಿ ಭಾಗವಹಿಸಿದ ನಡ್ಡಾ, ಏಪ್ರಿಲ್-ಮೇನಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ದೇಶಾದ್ಯಂತ ಪ್ರತಿ ಮತಗಟ್ಟೆಯಲ್ಲಿ ಇದೇ ರೀತಿಯ ಆಂದೋಲನ ಆಯೋಜಿಸಲಾಗುವುದು ಎಂದರು.

ನವದೆಹಲಿ (ಜನವರಿ 16, 2024): ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ನವದೆಹಲಿ ಯಲ್ಲಿ ತಮ್ಮ ಪಕ್ಷದ ಚುನಾವಣಾ ಚಿಹ್ನೆ ಕಮಲದ ಚಿತ್ರ ಹಾಗೂ 'ಏಕ್ ಬಾರ್ ಫಿರ್ ಸೇ ಮೋದಿ ಸರ್ಕಾ‌ರ್' ಎಂಬ ಘೋಷಣೆ ಯನ್ನು ಗೋಡೆ ಮೇಲೆ ಬರೆದು 'ಮತ್ತೊಮ್ಮೆ ಮೋದಿ ಸರ್ಕಾರ' ಗೋಡೆ ಬರಹ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದರು.

ದಿಲ್ಲಿಯ ಸ್ಥಳೀಯ ಮಾರುಕಟ್ಟೆಯಲ್ಲಿ ಪ್ರಚಾರದಲ್ಲಿ ಭಾಗವಹಿಸಿದ ನಡ್ಡಾ, ಏಪ್ರಿಲ್-ಮೇನಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ದೇಶಾದ್ಯಂತ ಪ್ರತಿ ಮತಗಟ್ಟೆಯಲ್ಲಿ ಇದೇ ರೀತಿಯ ಆಂದೋಲನ ಆಯೋಜಿಸಲಾಗುವುದು ಎಂದರು. ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಜಯಕ್ಕೆ ಶ್ರಮಿಸಲು ಜನರಿಗೆ ಮನವಿ ಮಾಡಿದರು. ‘ದೇಶದ ಅಭಿವೃದ್ಧಿ ಆಗುತ್ತಿದೆ. ಭಾರತಕ್ಕೆ ಜಾಗತಿಕ ಮನ್ನಣೆ ಸಿಗುತ್ತಿದೆ. ಜನರು ಸ್ಥಿರ ಮತ್ತು ಎಲ್ಲರನ್ನೂ ಒಳಗೊಂಡ ಸರ್ಕಾರವನ್ನು ಆಯ್ಕೆ ಮಾಡುತ್ತಾರೆ ಮತ್ತು ಮೋದಿಯವರ ನಾಯಕತ್ವದಲ್ಲಿ ಅಭಿವೃದ್ಧಿಯ ಸಂಕಲ್ಪ ಸಾಕಾರವಾಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿ: ಉತ್ತರ ಕನ್ನಡಕ್ಕಾಗಿ ಅನಂತ ಕುಮಾರ್ ಹೆಗಡೆ ಏನು ಮಾಡಿದ್ದಾರೆ?: ಸಿಎಂ ಸಿದ್ದರಾಮಯ್ಯ

ಪ್ರತಿ ಬೂತ್‌ನಲ್ಲಿ 5 ಕಡೆ ಬರಹ
ಮೋದಿ ಅವರು 3ನೇ ಬಾರಿ ಪ್ರಧಾನಿಯಾಗುವ ಮೂಲಕ 2047ರಲ್ಲಿ ವಿಕಸಿತ ಭಾರತದ ಕನಸು ನನಸಾಗಬೇಕು. ಈ ನಿಮಿತ್ತ ನಡ್ಡಾ ಅವರ ಸೂಚನೆ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಲಾಗಿದೆ. ಪ್ರತಿ ಬೂತ್‌ನಲ್ಲಿ 5 ಕಡೆ ಬರಹ ಬರೆಯಲಾಗುತ್ತದೆ.

- ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಅನಂತಕುಮಾರ್‌ ಹೆಗಡೆ ಮಾನಸಿಕ ಆರೋಗ್ಯದ ಕಡೆ ಗಮನ ನೀಡಲಿ: ಡಿಕೆಶಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ