ಕೇಂದ್ರ ಸಚಿವ ಗಿರಿರಾಜ್‌ಗೆ ನಡ್ಡಾ ಎಚ್ಚರಿಕೆ!

Published : Feb 17, 2020, 05:08 PM ISTUpdated : Feb 17, 2020, 05:10 PM IST
ಕೇಂದ್ರ ಸಚಿವ ಗಿರಿರಾಜ್‌ಗೆ ನಡ್ಡಾ ಎಚ್ಚರಿಕೆ!

ಸಾರಾಂಶ

ಕೇಂದ್ರ ಸಚಿವ ಗಿರಿರಾಜ್‌ಗೆ ನಡ್ಡಾ ಎಚ್ಚರಿಕೆ!| ದೇವ್‌ಬಂದ್‌ ಭಯೋತ್ಪಾದನೆ ಗಂಗೋತ್ರಿ ಎಂದಿದ್ದ ಸಚಿವ

ನವದೆಹಲಿ[ಫೆ.17]: ಉತ್ತರ ಪ್ರದೇಶದ ದೇವಬಂದ್‌ ಪಟ್ಟಣವು ಭಯೋತ್ಪಾದನೆಯ ಗಂಗೋತ್ರಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ಮಧ್ಯಾಹ್ನ ಪಕ್ಷದ ಕೇಂದ್ರ ಕಚೇರಿಗೆ ಬರುವಂತೆ ಸಿಂಗ್‌ಗೆ ಸೂಚನೆ ನೀಡಿದ್ದ ನಡ್ಡಾ, ಮುಂದಿನ ದಿನಗಳಲ್ಲಿ ಇಂಥ ಅವಹೇಳನಕಾರಿ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಕೇಂದ್ರ ಸಚಿವ ನಮಿಸಿದ ಅಂಬೇಡ್ಕರ್‌ ಪ್ರತಿಮೆ ಶುದ್ಧೀಕರಣ!

ದೆಹಲಿ ವಿಧಾನಸಭಾ ಚುನಾವಣೆ ಸೋಲಿಗೆ ಪಕ್ಷದ ಕೆಲ ನಾಯಕರ ಪ್ರಚೋದನಾಕಾರಿ, ಅವಹೇಳನಕಾರಿ ಹೇಳಿಕೆಗಳೂ ಕಾರಣ ಎಂಬ ಅಮಿತ್‌ ಶಾ ಹೇಳಿಕೆ ಬೆನ್ನಲ್ಲೇ ಸಿಂಗ್‌ಗೆ ಈ ಎಚ್ಚರಿಕೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಹಂತಗಳಲ್ಲಿ ನಡೆಯಲಿದೆ ಜನಗಣತಿ, 11,718 ಕೋಟಿ ಮೀಸಲಿಟ್ಟ ಸರ್ಕಾರ; ಇದೇ ಮೊದಲ ಬಾರಿಗೆ ಡಿಜಿಟಲ್‌ ಮೂಲಕ ಗಣತಿ!
ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಬಸ್ ಅಪಘಾತ, ಕಂದಕಕ್ಕೆ ಉರುಳಿ 9 ಸಾವು