
ನವದೆಹಲಿ: ಖಾಸಗಿ ಆಸ್ತಿಗಳ ಕುರಿತ ತೀರ್ಪಿನಲ್ಲಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ದಿ.ವಿ.ಆರ್. ಕೃಷ್ಣ ಅಯ್ಯರ್ ಕುರಿತು ಹಾಲಿ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ ಟೀಕೆ ಮಾಡಿದ್ದಾರೆ. ಇದಕ್ಕೆ ನ್ಯಾ.ನಾಗರತ್ನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
1978ರ ಕರ್ನಾಟಕ ರಾಜ್ಯ ವರ್ಸಸ್ ರಂಗನಾಥ ರೆಡ್ಡಿ, ಪ್ರಕರಣದಲ್ಲಿ ನ್ಯಾ. ಅಯ್ಯರ್ ಕೆಲವು ಅಭಿಪ್ರಾಯ ವ್ಯಕ್ತಪಡಿಸಿ ರಾಜ್ಯಗಳು ಖಾಸಗಿ ಆಸ್ತಿ ಮೇಲೆ ನಿಯಂತ್ರಣ ಹೊಂದಿವೆ ಎಂದಿದ್ದರು. ಆದರೆ 'ಇದು ಸೈದ್ಧಾಂತಿಕವಾಗಿ ತಪ್ಪು' ಎಂದು ನ್ಯಾ.ಚಂದ್ರಚೂಡ್ ತಮ್ಮ ತೀರ್ಪಿನಲ್ಲಿ ಟೀಕಿಸಿದರು. ಇದಕ್ಕೆ ತಮ್ಮ ಭಿನ್ನ ತೀರ್ಪಿನಲ್ಲಿ ಆಕ್ಷೇಪಿಸಿದ ನ್ಯಾ.ನಾಗರತ್ನ, 'ಒಬ್ಬ ನ್ಯಾಯಾಧೀಶರಿಗಿಂತ ಸುಪ್ರೀಂಕೋರ್ಟ್ ಎಂಬ ಸಾಂವಿಧಾನಿಕ ಸಂಸ್ಥೆ ದೊಡ್ಡದು. ಜಡ್ಜ್ ಒಂದೊಂದು ಕಾಲ ಘಟ್ಟದಲ್ಲಿ ನ್ಯಾಯಾಲಯದ ಭಾಗವಾಗಿರುತ್ತಾರೆ ಅಷ್ಟೇ. ಹೀಗಾಗಿ ಖಾಸಗಿ ಆಸ್ತಿಗಳ ಕುರಿತ ಕುರಿತನ ನ್ಯಾ. ಅಯ್ಯರ್ ಸೈದ್ಧಾಂತಿಕವಾಗಿ ತಪ್ಪು ಎಸಗಿದ್ದಾರೆ ಎಂಬ ಮುಖ್ಯ ನ್ಯಾಯಮೂರ್ತಿಗಳ ಅಭಿಪ್ರಾಯವನ್ನು ನಾನು ಒಪ್ಪಲ್ಲ. ತೀರ್ಪಿನಲ್ಲಿ ಇಂಥ ವಿಷಯಗಳ ಪ್ರಸ್ತಾಪದ ಅಗತ್ಯವೂ ಇರಲಿಲ್ಲ ಮತ್ತು ಅದನ್ನು ಸಮರ್ಥಿಸಲೂ ಆಗದು' ಎಂದು ಹೇಳಿದರು.
'ಅಂದಿನ ಕಾಲಘಟ್ಟಕ್ಕೆ ಯಾವುದು ಸೂಕ್ತವೋ ಅದನ್ನು ಪರಿಗಣಿಸಿ ನ್ಯಾಯಮೂರ್ತಿಗಳು ತೀರ್ಪು ನೀಡಿರುತ್ತಾರೆ. ಅಂದಿಗೂ ಇಂದಿಗೂ ನಮ್ಮ ದೃಷ್ಟಿಕೋನದಲ್ಲಿ ಅಜಗಜಾಂತರ ಇದೆ ಎನ್ನುವ ಕಾರಣಕ್ಕೆ ನಿವೃತ್ತ ನ್ಯಾಯಾಧೀಶರನ್ನು ಕಟುನುಡಿಗಳಲ್ಲಿ ಖಂಡಿಸುವುದು ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ ಎಂಬಂತೆ ದೂರುವುದು ತರವಲ್ಲ. ಮುಂದಿನ ದಿನಗಳಲ್ಲಿ ಯಾರೂ ಕೂಡಾ ಹೀಗೆ ನಿವೃತ್ತ ಜಡ್ಜ್ಗಳನ್ನು ಟೀಕಿಸಬಾರದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ