ಕಾನೂನು ಆಯೋಗ ಅಧ್ಯಕ್ಷರಾಗಿ ನ್ಯಾ ಅವಸ್ಥಿ ಅಧಿಕಾರ ಸ್ವೀಕಾರ

Published : Nov 10, 2022, 11:34 AM IST
ಕಾನೂನು ಆಯೋಗ ಅಧ್ಯಕ್ಷರಾಗಿ ನ್ಯಾ ಅವಸ್ಥಿ ಅಧಿಕಾರ ಸ್ವೀಕಾರ

ಸಾರಾಂಶ

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾ. ರಿತುರಾಜ್‌ ಅವಸ್ಥಿ ಅವರು ಭಾರತೀಯ ಕಾನೂನು ಆಯೋಗದ ನೂತನ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು.

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾ. ರಿತುರಾಜ್‌ ಅವಸ್ಥಿ ಅವರು ಭಾರತೀಯ ಕಾನೂನು ಆಯೋಗದ ನೂತನ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು. ಈ ಆಯೋಗವು ಸಂಕೀರ್ಣ ಕಾನೂನು ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಸಲಹೆ ನೀಡುತ್ತದೆ. ನ್ಯಾ ಕೆ.ಟಿ ಶಂಕರನ್‌ (KT Sankaran), ಪ್ರೊ ಆನಂದ್‌ ಪಾಲಿವಾಲ್‌(Anand Paliwal), ಪ್ರೊ ಡಿ.ಪಿ ವರ್ಮಾ(DP Verma), ಪ್ರೊ ರಾಕಾ ಆರ್ಯಾ, ಹಾಗೂ ಎಂ.ಕರುಣಾನಿಧಿ (Karunanidhi) ಆಯೋಗದ ಸದಸ್ಯರಾಗಿ ನೇಮಕವಾಗಿದ್ದಾರೆ. ಆಯೋಗವು ಬಹುಚರ್ಚಿತ ಏಕರೂಪ ನಾಗರಿಕ ಸಂಹಿತೆಯನ್ನು ಈ ಬಾರಿ ಕೈಗೆತ್ತಿಕೊಳ್ಳುವ ಸಾಧ್ಯತೆಗಳಿವೆ. ಸದ್ಯ 22ನೇ ಕಾನೂನು ಆಯೋಗ ಜಾರಿಯಲ್ಲಿದ್ದು ಇದನ್ನು 2021ರ ಫೆಬ್ರವರಿಯಲ್ಲಿ ರಚಿಸಲಾಗಿತ್ತು. ಈ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಅಧಿಕಾರಾವಧಿ 3 ವರ್ಷಗಳು. ರಾಜ್ಯದಲ್ಲಿ ಹಿಜಾಬ್‌ ತೀರ್ಪು ನೀಡಿದ್ದ ಪೀಠದ ನೇತೃತ್ವವನ್ನು ರಿತುರಾಜ್‌ ವಹಿಸಿಕೊಂಡಿದ್ದರು.

ಭಾರತದಲ್ಲಿ 10 ಲಕ್ಷ ಜನರಿಗೆ 19 ಜಡ್ಜ್‌ಗಳು

ಪದೇ ಪದೇ ಚುನಾವಣೆಗಳು ಬೇಡ - ಕಾನೂನು ಆಯೋಗದ ಕರಡು ವರದಿ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ