ಹೆಂಡತಿ ಇಬ್ಬರು ಹೆಣ್ಣು ಮಕ್ಕಳಿಗೆ ಗುಂಡಿಕ್ಕಿ ಪೊಲೀಸ್ ಪೇದೆ ಸಾವಿಗೆ ಶರಣು

Published : Oct 05, 2023, 03:15 PM ISTUpdated : Oct 05, 2023, 03:23 PM IST
ಹೆಂಡತಿ ಇಬ್ಬರು ಹೆಣ್ಣು ಮಕ್ಕಳಿಗೆ ಗುಂಡಿಕ್ಕಿ ಪೊಲೀಸ್ ಪೇದೆ ಸಾವಿಗೆ ಶರಣು

ಸಾರಾಂಶ

ಹೆಂಡತಿ ಹಾಗೂ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿಗೆ ಗುಂಡಿಕ್ಕಿಗೆ ಪೊಲೀಸ್ ಪೇದೆಯೊಬ್ಬರು ಸಾವಿಗೆ ಶರಣಾದ ದಾರುಣ ಘಟನೆ ನೆರೆಯ ಆಂಧ್ರಪ್ರದೇಶದ ಕಡಪಾದಲ್ಲಿ ನಡೆದಿದೆ.

ಕಡಪಾ: ಹೆಂಡತಿ ಹಾಗೂ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿಗೆ ಗುಂಡಿಕ್ಕಿಗೆ ಪೊಲೀಸ್ ಪೇದೆಯೊಬ್ಬರು ಸಾವಿಗೆ ಶರಣಾದ ದಾರುಣ ಘಟನೆ ನೆರೆಯ ಆಂಧ್ರಪ್ರದೇಶದ ಕಡಪಾದಲ್ಲಿ ನಡೆದಿದೆ. ಮೊದಲಿಗೆ ಹೆಂಡತಿ ಹಾಗೂ ಮಕ್ಕಳಿಗೆ ಗುಂಡು ಹಾರಿಸಿದ ಪೊಲೀಸ್ ಪೇದೆ ಅವರ ಸಾವಿನ ಬಳಿಕ ತನಗೂ ಗುಂಡು ಹಾರಿಸಿಕೊಂಡು ಸಾವಿನ ದಾರಿ ಹಿಡಿದಿದ್ದಾರೆ.  ಹೆಂಡತಿ ಮಕ್ಕಳನ್ನು ಕೊಂದು ತಾನು ಸಾವಿಗೆ ಶರಣಾದ ಪೇದೆಯನ್ನು 55 ವರ್ಷದ ವೆಂಕಟೇಶ್ವರಲು ಎಂದು ಗುರುತಿಸಲಾಗಿದೆ. 

ಇವರು ಕಡಪಾ (Kadapa) ನಗರದ ಎರಡು ನಗರದ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು.  ಮೃತ ಪೇದೆಯ ಮನೆಯಲ್ಲಿ ಡೆತ್‌ನೋಟ್ ಕೂಡ ಸಿಕ್ಕಿದೆ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರ ರಾತ್ರಿ 11ಗಂಟೆಯವರೆಗೆ ವೆಂಕಟೇಶ್ವರಲು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದ್ದು, ಕೆಲಸ ಮುಗಿಸಿ ಮನೆಗೆ ಹೋಗುವ ವೇಳೆ ಠಾಣೆಯಲ್ಲಿದ್ದ ಪಿಸ್ತೂಲ್ ಹಾಗೂ ಗುಂಡುಗಳನ್ನು ತೆಗೆದುಕೊಂಡು ಹೋಗಿದ್ದರು ಎಂದು ಕಡಪಾ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಎಂ.ಎಡಿ ಶರೀಫ್ ಹೇಳಿದ್ದಾರೆ. 

ಮಗಳಿಗೆ ಬುದ್ಧಿ ಕಲಿಸಲು ಬರ್ತ್‌ಡೇಗೆ ಕೊಳಚೆ ನೀರು ಗಿಫ್ಟ್ ಕೊಟ್ಟ ಅಪ್ಪ

ವೆಂಕಟೇಶ್ವರಲು ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಹಣ ಕಳೆದುಕೊಂಡಿದ್ದರು, ಇದರ ಜೊತೆಗೆ ಕೌಟುಂಬಿಕ ವಿಚಾರಗಳು ಕೂಡ ಅವರನ್ನು ಬಾಧಿಸುತ್ತಿತ್ತು. ಇದರಿಂದ ನೊಂದು ಸಾವಿಗೆ ಶರಣಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. 

ತಾನೇ ಹೆಣೆದ ಬಲೆಗೆ ಬಿದ್ದ ಚೀನಾ ಸಬ್‌ಮರೀನ್‌: ಚೀನಾ ನೌಕಾಪಡೆಯ ಸಿಬ್ಬಂದಿ ಸೇರಿ 55 ಜನ ಬಲಿ 

ಸಹೋದ್ಯೋಗಿಗಳ ಹೆಸರು ಬರೆದಿಟ್ಟು ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಮತ್ತೊಂದೆಡೆ ಕೇರಳದಲ್ಲೂ ಪೊಲೀಸ್ ಅಧಿಕಾರಿಯೊಬ್ಬರು ಸಾವಿಗೆ ಶರಣಾಗಿದ್ದಾರೆ. ಕಲಮಸ್ಸೆರಿಯ ಎಆರ್‌ ಕ್ಯಾಂಪ್‌ನಲ್ಲಿರುವ ಮನೆಯಲ್ಲಿ ಜೊಬಿ ದಾಸ್‌ ಎಂಬ ಪೊಲೀಸ್ ನೇಣಿಗೆ ಶರಣಾಗಿದ್ದಾರೆ. ಇವರು ಪೊಲೀಸ್ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಾವಿಗೆ ಶರಣಾಗುವ ಮೊದಲು ಅವರು  ಡೆತ್‌ನೋಟು ಬರೆದಿಟ್ಟಿದ್ದು, ಅದರಲ್ಲಿ ಸಹೋದ್ಯೋಗಿಗಳ ಹೆಸರು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ. ಸಹೋದ್ಯೋಗಿಗಳು ಸಂಬಳ ಹೆಚ್ಚಾಗುವುದನ್ನು ತಡೆಯಲು ಸಂಚು ರೂಪಿಸಿದ್ದರು ಎಂದು ಅವರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್