ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ನಿತ್ಯಾನಂದ, ಸ್ಫೋಟಕ ಮಾಹಿತಿ ಹಂಚಿಕೊಂಡ ಕೈಲಾಸ ಸ್ವಾಮಿ!

Published : Jan 21, 2024, 10:34 PM ISTUpdated : Jan 21, 2024, 10:37 PM IST
ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ನಿತ್ಯಾನಂದ, ಸ್ಫೋಟಕ ಮಾಹಿತಿ ಹಂಚಿಕೊಂಡ ಕೈಲಾಸ ಸ್ವಾಮಿ!

ಸಾರಾಂಶ

ಭಾರತದಿಂದ ಪರಾರಿಯಾಗಿರುವ ಬಿಡದಿಯ ನಿತ್ಯಾನಂದ ಸ್ವಾಮಿ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಠೆ ಕುರಿತು ಮಾತನಾಡಿದ್ದಾರೆ. ತನಗೂ ಆಹ್ವಾನ ಸಿಕ್ಕಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಕೈಲಾಸ ದೇಶದಿಂದ ನಿತ್ಯಾನಂದ ಆಯೋಧ್ಯೆಗೆ ಆಗಮಿಸುತ್ತಾರ ಅನ್ನೋ ಪ್ರಶ್ನೆ ಎದ್ದಿದೆ.

ಆಯೋಧ್ಯೆ(ಜ.21) ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನಿತ ಗಣ್ಯರು ಆಯೋಧ್ಯೆಗೆ ಆಗಮಿಸುತ್ತಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗಾಗಲೇ ಆಯೋಧ್ಯೆಯಲ್ಲಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ಸೆಲೆಬ್ರೆಟಿಗಳು ಈಗಾಗಲೇ ಆಯೋಧ್ಯೆಗೆ ಆಗಮಿಸಿದ್ದಾರೆ. ಹಲವು ಆಹ್ವಾನಿತ ಗಣ್ಯರು ನಾಳೆ ಬೆಳಗ್ಗೆ ಆಯೋಧ್ಯೆಗೆ ಆಗಮಿಸಲಿದ್ದಾರೆ. ಇದೀಗ ಪ್ರಾಣಪ್ರತಿಷ್ಠೆಗೆ ಕೈಲಾಸ ದೇಶದ ನಿತ್ಯಾನಂದ ಸ್ವಾಮಿ ಆಗಮಿಸುತ್ತಿದ್ದಾರೆ ಅನ್ನೋ ಮಾತುಗಳು ಹರಿದಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಖುದ್ದು ನಿತ್ಯಾನಂದ ಈ ಕುರಿತು ಮಾತನಾಡಿದ್ದಾರೆ. ತನಗೆ ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಯ ಅಧಿಕೃತ ಆಹ್ವಾನ ಬಂದಿದೆ. ಹೀಗಾಗಿ ಆಯೋಧ್ಯೆಗೆ ತೆರಳಿ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗುವುದಾಗಿ ಹೇಳಿಕೊಂಡಿದ್ದಾನೆ.

ಈ ಕುರಿತು ಮಹತ್ವದ ಸಂದೇಶ ರವಾನಿಸಿರುವ ನಿತ್ಯಾನಂದ, ಯಾರೂ ಕೂಡ ರಾಮಮಂದಿರ ಪ್ರಾಣಪ್ರತಿಷ್ಠೆ ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ. ಭಗವಾನ್ ರಾಮಲಲ್ಲಾ ಮೂರ್ತಿಯನ್ನು ಭವ್ಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನನಗೆ ರಾಮ ಮಂದಿರ ಪ್ರಾಣಪ್ರತಿಷ್ಠೆಯ ಅಧಿಕೃತ ಆಹ್ವಾನ ಬಂದಿದೆ. ನಾನು ಆಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುವುದಾಗಿ ನಿತ್ಯಾನಂದ ಹೇಳಿಕೊಂಡಿದ್ದಾನೆ.

ಭಗವಾನ್ ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಾಟ, ಹಲವರಿಗೆ ಗಾಯ!

ಕೈಲಾಸ ದೇಶದಲ್ಲಿ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಮನೆ ಮಾಡಿದೆ. ಕೈಲಾಸದಲ್ಲೂ ಪ್ರಾಣಪ್ರತಿಷ್ಠೆ ಸಂಭ್ರಮ ಆಚರಿಸಲಾಗುತ್ತದೆ. ವಿಶೇಷ ಶ್ರೀರಾಮ ಪೂಜೆ ಆಯೋಜಿಸಲಾಗಿದೆ. ಅಖಂಡ ರಾಮ ಜಪ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ ಎಂದು ನಿತ್ಯಾನಂತ ಅಧಿಕೃತ ಟ್ವಿಟರ್ ಖಾತೆ ಮೂಲಕ ಹೇಳಲಾಗಿದೆ.

ನಿತ್ಯಾನಂದ ಖುದ್ದು ಆಯೋಧ್ಯೆಗೆ ಆಗಮಿಸುವುದಾಗಿ ಹೇಳಿಕೊಂಡಿರುವ ಬೆನ್ನಲ್ಲೇ ಇದೀಗ ಪರ ವಿರೋಧಗಳು ವ್ಯಕ್ತವಾಗುತ್ತಿದೆ. 2019ರಲ್ಲಿ ಭಾರತದಿಂದ ಪರಾರಿಯಾಗಿರುವ ನಿತ್ಯಾನಂದ ಮತ್ತೆ ಭಾರತಕ್ಕೆ ಮರಳುತ್ತಾರಾ ಅನ್ನೋ ಚರ್ಚೆಗಳು ನಡೆಯುತ್ತಿದೆ. 2019ರಲ್ಲಿ ಪರಾರಿಯಾದ ನಿತ್ಯಾನಂದ ಹಲವು ದಿನಗಳ ಕಾಲ ಯಾವುದೇ ಸುಳಿವಿರಲಿಲ್ಲ. ಬಳಿಕ ದ್ವೀಪವೊಂದನ್ನು ಖರೀದಿಸಿ ಕೈಲಾಸ ದೇಶ ಮಾಡಿಕೊಂಡಿರುವುದಾಗಿ ಘೋಷಿಸಿದ್ದ. ಆದರೆ ಈ ಕೈಲಾಸ ಎಲ್ಲಿದೆ ಅನ್ನೋದರ ನಿಖರ ಮಾಹಿತಿಗಳು ಇದುವರೆಗೂ ಲಭ್ಯವಾಗಿಲ್ಲ.

ಪ್ರಾಣಪ್ರತಿಷ್ಠೆಗೆ ಹೂವುಗಳಿಂದ ಕಂಗೊಳಿಸುತ್ತಿದೆ ಆಯೋಧ್ಯೆ ರಾಮ ಮಂದಿರ, ಇಲ್ಲಿದೆ ಫೋಟೋ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ