
ಕಾನ್ಪುರ: ರೈಲು ಹಳಿ ಮೇಲೆ ಎಲ್ಪಿಜಿ ಸಿಲಿಂಡರ್, ಪೆಟ್ರೋಲ್ ಬಾಟಲು ಹಾಗೂ ಬೆಂಕಿಪೊಟ್ಟಣ ಇರಿಸಿ ರೈಲನ್ನು ಹಳಿ ತಪ್ಪಿಸಲು ದುಷ್ಕರ್ಮಿಗಳು ಸೋಮವಾರ ಯತ್ನಿಸಿದ್ದಾರೆ. ಸುದೈವವಶಾತ್, ಕಾಳಿಂದಿ ಎಕ್ಸ್ಪ್ರೆಸ್ ರೈಲು ಸಿಲಿಂಡರ್ಗೆ ಡಿಕ್ಕಿ ಹೊಡೆದರೂ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಘಟನೆ ಭಿವಾನಿ ಮತ್ತು ಪ್ರಯಾಗ್ ರಾಜ್ ಮಾರ್ಗದಲ್ಲಿ ಘಟಿಸಿದೆ. ಭಾನುವಾರ ರಾತ್ರಿ 8.20ಕ್ಕೆ ಕಾಳಿಂದಿ ರೈಲು ಅತಿವೇಗದಲ್ಲಿ ಚಲಿಸುತ್ತಿದ್ದು, ಈ ವೇಳೆ ಹಳಿ ಮೇಲಿದ್ದ ಸಿಲಿಂಡರ್ ಅನ್ನು ಚಾಲಕ ಗಮನಿಸಿ ಎಮರ್ಜೆನ್ಸಿ ಬ್ರೇಕ್ ಹಾಕಿದ್ದಾನೆ. ಆದರೆ ರೈಲು ವೇಗದಲ್ಲಿದ್ದ ಕಾರಣ ತಕ್ಷಣಕ್ಕೆ ನಿಲ್ಲದೇ ಸಿಲಿಂಡರ್ಗೆ ಡಿಕ್ಕಿ ಹೊಡೆದಿದೆ. ಸುದೈವವಶಾತ್, ರೈಲಯ ಹಳಿ ತಪ್ಪದೇ ಸ್ವಲ್ಪ ದೂರ ಚಲಿಸಿ ರೈಲು ನಿಂತಿದೆ. ಘಟನೆ ಬಳಿಕ ಸುಮಾರು 20 ನಿಮಿಷಗಳ ಕಾಲ ರೈಲನ್ನು ನಿಲ್ಲಿಸಲಾಗಿತ್ತು. ನಂತರ ಪ್ರಯಾಣ ಮುಂದುವರಿಸಿತು.
ರೈಲಿಗೆ ಡಿಕ್ಕಿ ಆದ ಹೊಡೆತಕ್ಕೆ ಸಿಲಿಂಡರ್ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಪೆಟ್ರೋಲ್ ಬಾಟಲಿ, ಬೆಂಕಿಪೊಟ್ಟಣಗಳನ್ನು ವಶ ಪಡಿಸಿಕೊಂಡಿದ್ದಾರೆ. ರೈಲು ಅಪಘಾತ ನಡೆಸುವ ದುಷ್ಕೃತ್ಯಕ್ಕಾಗಿಯೇ ಕಿಡಿಗೇಡಿಗಳು, ಈ ರೀತಿ ವಸ್ತುಗಳನ್ನು ಇರಿಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಆ.17ರಂದು ಕಾನ್ಪುರ ಸನಿಹ ಸಾಬರಮತಿ ಎಕ್ಸ್ಪ್ರೆಸ್ ರೈಲನ್ನೂ ಇದೇ ರೀತಿ ಹಳಿಗಳ ಮೇಲೆ ಕಲ್ಲು, ಮುಂತಾದ ವಸ್ತು ಇಟ್ಟು ಹಳಿ ತಪ್ಪಿಸಲು ಯತ್ನಿಸಲಾಗಿತ್ತು.
ದೇಶದ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಟಾಪ್-5 ರೇಲ್ವೇ ನಿಲ್ದಾಣಗಳ ಲಿಸ್ಟ್ ಇಲ್ಲಿದೆ, ನೋಡಿ!
ಪಾಕ್ನಲ್ಲಿ ನೆಲೆಸಿರುವ ಉಗ್ರರ ಸಂಚು?
ಆರು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಸಂಭವಿಸಿದ ಕೆಫೆ ಬಾಂಬ್ ಸ್ಫೋಟದ ಸೂತ್ರಧಾರ ಎನ್ನಲಾದ ಪಾಕ್ನಲ್ಲಿ ನೆಲೆಸಿರುವ ಫರ್ಹತ್ತುಲ್ಲಾ ಘೋರಿ ಭಾರತದ ರೈಲ್ವೆ ಸಂಪರ್ಕ ಜಾಲಗಳು ಮತ್ತು ಹಿಂದೂ ನಾಯಕರ ಮೇಲೆ ಬಾಂಬ್ ದಾಳಿ ನಡೆಸುವಂತೆ ತನ್ನ ಸ್ಲೀಪರ್ ಸೆಲ್ಗಳಿಗೆ ಸೂಚನೆ ನೀಡಿದ್ದ ಎಂಬ ಸಂಗತಿ ಬೆಳಕಿಗೆ ಬಂದಿತ್ತು. ಅದರ ಬೆನ್ನಲ್ಲೇ ರೈಲು ಹಳಿ ಮೇಲೆ ಸಿಲಿಂಡರ್ ಇಟ್ಟು ದುಷ್ಕೃತ್ಯ ಎಸಗಿದ ಘಟನೆ ನಡೆದಿದೆ.
ರೈಲ್ವೇಯಿಂದ ಗುಡ್ ನ್ಯೂಸ್, ಹಿರಿಯ ನಾಗರೀಕರಿಗೆ ಶೇ.50 ರಷ್ಟು ಡಿಸ್ಕೌಂಟ್ ಯೋಜನೆ ಶೀಘ್ರದಲ್ಲೇ ಜಾರಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ