Kamal Haasan Controversy: ಜಗತ್ತಿಗೆ ಗೊತ್ತಿರೋದನ್ನೇ ಕಮಲ್ ಹಾಸನ್ ಹೇಳಿದ್ದಾರೆ, ಚೆನ್ನೈನಲ್ಲಿ ಪೋಸ್ಟರ್ ವೈರಲ್!

Kannadaprabha News   | Kannada Prabha
Published : Jun 04, 2025, 07:37 AM ISTUpdated : Jun 04, 2025, 09:58 AM IST
Kamal Hassan

ಸಾರಾಂಶ

ಕನ್ನಡ ಭಾಷೆ ಕುರಿತ ಹೇಳಿಕೆ ವಿವಾದದ ಹಿನ್ನೆಲೆಯಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷವು ಕಮಲಹಾಸನ್ ಬೆಂಬಲಕ್ಕೆ ನಿಂತಿದೆ. 'ಸತ್ಯಕ್ಕೆ ಕ್ಷಮೆಯ ಅಗತ್ಯವಿಲ್ಲ' ಎಂಬ ಪೋಸ್ಟರ್‌ಗಳನ್ನು ಚೆನ್ನೈನಲ್ಲಿ ಹಾಕಲಾಗಿದೆ.

ಚೆನ್ನೈ (ಜೂ.4): ಕನ್ನಡ ಭಾಷೆ ಕುರಿತ ಹೇಳಿಕೆಯು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಮಕ್ಕಳ್ ನೀಧಿ ಮೈಯಂ ಪಕ್ಷ (ಎಂಎನ್‌ಎಂ)ವು ತನ್ನ ಅಧ್ಯಕ್ಷ ಕಮಲಹಾಸನ್‌ ಬೆಂಬಲಕ್ಕೆ ನಿಂತಿದೆ. ನಟನನ್ನು ಬೆಂಬಲಿಸಿ ''''ಸತ್ಯಕ್ಕೆ ಕ್ಷಮೆಯ ಅಗತ್ಯವಿಲ್ಲ'''' ಎಂಬ ಪೋಸ್ಟರ್‌ಗಳನ್ನು ಚೆನ್ನೈನೆಲ್ಲೆಡೆ ಮಂಗಳವಾರ ಹಾಕಲಾಗಿದೆ.

ಈಗಾಗಲೇ ಜಗತ್ತಿಗೆ ಗೊತ್ತಿರುವುದನ್ನು ಕಮಲಹಾಸನ್‌ ಅವರು ಹೇಳಿದ್ದಾರೆ. ಎರಡು ಭಾಷೆಗಳ ನಡುವಿನ ಸಂಬಂಧ ಏನಿದೆ ಎಂಬುದನ್ನು ಅವರು ತಿಳಿಸಿದ್ದಾರೆ. ಪ್ರೀತಿಯು ಯಾವತ್ತಿಗೂ ಕ್ಷಮೆ ಕೋರುವುದಿಲ್ಲ ಮತ್ತು ಸತ್ಯವು ಯಾವತ್ತೂ ತನ್ನ ತಲೆ ಬಾಗಿಸುವುದಿಲ್ಲ ಎಂಬ ಒಕ್ಕಣೆಯ ಪೋಸ್ಟರ್‌ಗಳನ್ನು ಕಮಲ ಹಾಸನ್‌ರಿಂದಲೇ ಸ್ಥಾಪಿತ ಎಂಎನ್‌ಎಂ ಪಕ್ಷದ ಕಾರ್ಯಕರ್ತರು ಚೆನ್ನೈನಾದ್ಯಂತ ಹಾಕಿದ್ದಾರೆ.

ಕರ್ನಾಟಕದಲ್ಲಿ ಕಮಲಹಾಸನ್ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಕರ್ನಾಟಕ ಫಿಲ್ಮ್‌ ಚೇಂಬರ್ಸ್‌ ಆಫ್‌ ಕಾಮರ್ಸ್‌ನ ಮಹತ್ವದ ಸಭೆಗೂ ಮುನ್ನ ಈ ಪೋಸ್ಟರ್‌ಗಳು ತಮಿಳುನಾಡಿನಾದ್ಯಂತ ಪ್ರತ್ಯಕ್ಷವಾಗಿವೆ.

ಕನ್ನಡವು ತಮಿಳಿನಿಂದ ಹುಟ್ಟಿದೆ ಎಂಬ ಹೇಳಿಕೆಗೆ ಸಂಬಂಧಿಸಿ ಕಮಲ್‌ ಹಾಸನ್‌ ಅವರು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣರಾಗಿದ್ದರು. ಈ ಹೇಳಿಕೆಗೆ ಕ್ಷಮೆಕೋರಬೇಕು, ಇಲ್ಲದಿದ್ದರೆ ಅವರ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಸಂಘಟನೆಗಳು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಎಂಎನ್‌ಎಂಪಕ್ಷದ ಕಾರ್ಯಕರ್ತರು ನಾವು ನಟ ಕಮಲ್‌ ಜತೆಗಿದ್ದೇವೆ. ಅವರು ಯಾವುದೇ ಕಾರಣಕ್ಕೂ ತಮ್ಮ ಹೇಳಿಕೆ ಸಂಬಂಧ ಕ್ಷಮೆ ಕೋರಬೇಕೆಂದೇನಿಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲಕ್ನೋ: ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹೂಕುಂಡಗಳ ಲೂಟಿ; ವಿಡಿಯೋ ವೈರಲ್
ಆಪರೇಷನ್ ಸಿಂದೂರ್ ವೇಳೆ ಯೋಧರಿಗೆ ನೆರವಾದ ಬಾಲಕನಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ 2026