
ನವದೆಹಲಿ [ಮಾ.20]: ಜ್ಯೋತಿರಾಧಿತ್ಯ ಸಿಂಧಿತಾ ಬಣದ ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಬಿಕ್ಕಟ್ಟಿಗೆ ಸಿಲುಕಿದ್ದ ಮಧ್ಯ ರಾಜಕೀಯ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ವಿಶ್ವಾಸಮತ ಸಾಬಿತುಪಡಿಸುವ ಬದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಪ್ರೀಂಕೋರ್ಟ್ ಮಾರ್ಚ್ 20ರ ಸಂಜೆ 5 ಗಂಟೆಯ ಒಳಗೆ ಸರ್ಕಾರ ತನ್ನ ವಿಶ್ವಾಸಮತ ಸಾಬೀತು ಮಾಡಬೇಕು ಎಂದು ಸಭಾಪತಿ ಸೂಚಿಸಿದ್ದರು.
ಮಧ್ಯಪ್ರದೇಶ, ಕಮಲ್ ನಾಥ್ ಸರ್ಕಾರ ಉಳಿಸಲು ಮುಂದಾದ ಈ 13ರ ಪೋರ ಯಾರು?...
ಆದರೆ ಕಮಲನಾಥ್ ಅವರು ವಿಶ್ವಾಸಮತ ಸಾಬಿತುಪಡಿಸುವ ಬದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಮುಖ್ಯಮಂತ್ರಿ ಹುದ್ದೆ ತೊರೆದಿದ್ದಾರೆ.
ಕೊರೋನಾ ಭೀತಿಯಲ್ಲೂ ಮಧ್ಯೆಪ್ರದೇಶ ರಾಜಕೀಯ ಹೈಡ್ರಾಮಕ್ಕೆ ಕೊನೆ ಮೊಳೆ ಹೊಡೆದ ಸುಪ್ರೀಂ.
ಒಟ್ಟು 230 ಸಂಖ್ಯಾಬಲದ ಮಧ್ಯ ಪ್ರದೇಶದಲ್ಲಿ ಬಹುಮತಕ್ಕೆ 112 ಸ್ಥಾನಗಳು ಅಗತ್ಯವಿತ್ತು. ಆದರೆ ಕಾಂಗ್ರೆಸಿನಿಂದ 22 ಮಂದಿ ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಕಾಂಗ್ರೆಸ್ 99 ಪ್ಲಸ್ ಸ್ಥಾನಗಳು ಉಳಿದಿದ್ದು, ಈ ನಿಟ್ಟಿನಲ್ಲಿ ಕಮಲ್ ನಾಥ್ ತಮ್ಮ ಸ್ಥಾನ ತೊರೆದಿದ್ದಾರೆ.
2018ರ ಡಿಸೆಂಬರ್ 17 ರಂದು ಕಮಲ್ ನಾಥ್ ಮಧ್ಯಪ್ರದೇಶದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ವಿಶ್ವಾಸ ಮತ ಸಾಬೀತು ಮುನ್ನವೇ ಸ್ಥಾನ ತೊರೆದು ಕೆಳಕ್ಕೆ ಇಳಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ