ಪಕ್ಷಗಳನ್ನು ಒಡೆಯುವುದು ಅಮಿತ್ ಶಾಗೆ ಗೊತ್ತು: ಕಪಿಲ್ ಸಿಬಲ್!

Published : Nov 14, 2019, 04:59 PM IST
ಪಕ್ಷಗಳನ್ನು ಒಡೆಯುವುದು ಅಮಿತ್ ಶಾಗೆ ಗೊತ್ತು: ಕಪಿಲ್ ಸಿಬಲ್!

ಸಾರಾಂಶ

'ಪಕ್ಷಗಳನ್ನು ಒಡೆಯುವುದು ಹೇಗೆ ಎಂದು ಅಮಿತ್ ಶಾಗೆ ಗೊತ್ತು'| ಗೃಹ ಸಚಿವರ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ನಾಯಜಕ ಕಪಿಲ್ ಸಿಬಲ್| ಮಹಾರಾಷ್ಟ್ರ ರಾಜಕೀಯ ಸಂಘರ್ಷಕ್ಕೆ ಅಮಿತ್ ಶಾ ಕಾರಣ ಎಂದ ಕಪಿಲ್ ಸಿಬಲ್| 'ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಅಮಿತ್ ಶಾ ಹೆಣೆದ ಬಲೆ'| 

ನವದೆಹಲಿ(ನ.14): ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ  ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಮಧ್ಯೆ ಮಹಾರಾಷ್ಟ್ರ ರಾಜಕೀಯ ಸಂಘರ್ಷಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣ ಎಂದಿರುವ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಪಕ್ಷಗಳನ್ನು ಒಡೆಯುವ ಕಲೆ ಅಮಿತ್ ಶಾ ಅವರಿಗೆ ಚೆನ್ನಾಗಿ ಗೊತ್ತು ಎಂದು ಹರಿಹಾಯ್ದಿದ್ದಾರೆ.

ಮಹಾರಾಷ್ಟ್ರದಲ್ಲಿ ಟ್ರೈ-ಆ್ಯಂಗಲ್ ಸರ್ಕಾರ?: ಬಿಜೆಪಿ ತಲೆ ಗಿರಗಿರ!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಅಮಿತ್ ಶಾ ಹೆಣೆದ ಬಲೆ ಎಂದು ಆರೋಪಿಸಿರುವ ಕಪಿಲ್ ಸಿಬಲ್, ಪಕ್ಷಗಳನ್ನು ಒಡೆದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕಲೆ ಗೃಹ ಸಚಿವರಿಗೆ ಚೆನ್ನಾಗಿ ಗೊತ್ತು ಎಂದು ಕಿಡಿಕಾರಿದ್ದಾರೆ.

ಮೌನ ಮುರಿದ ಅಮಿತ್ ಶಾ, ಠಾಕ್ರೆಗೆ ತಿರುಗೇಟು!

ತಮ್ಮ ರಾಜಕೀಯ ಲಾಭಕ್ಕಾಗಿ ಪಕ್ಷಗಳನ್ನಿ ಒಡೆಯುವ, ಒಟ್ಟುಗೂಡಿಸುವ ಕಲೆ ಅಮಿತ್ ಶಾಗೆ ಗೊತ್ತು ಎಂದಿರುವ ಕಪಿಲ್ ಸಿಬಲ್, ಗೋವಾ ಹಾಗೂ ಕರ್ನಾಟಕದಲ್ಲಿ ಅಮಿತ್ ಶಾ ಮಾಡಿದ್ದು ಇದನ್ನೇ ಎಂದು ಚುಚ್ಚಿದ್ದಾರೆ.

'ಮುಚ್ಚಿದ ಕೋಣೆಯಲ್ಲಾದ ಒಪ್ಪಂದ ಅಮಿತ್ ಶಾ ಪಿಎಂ ಮೋದಿಯಿಂದ ಮುಚ್ಚಿಟ್ರು'

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ