ಒಂದು ದಿನ ಕರಾಚಿ ಕೂಡಾ ಹಿಂದೂಸ್ತಾನದಲ್ಲಿರುತ್ತದೆ: ವಿವಾದದ ನಡುವೆ ದೇವೇಂದ್ರನ ಭವಿಷ್ಯ!

Published : Nov 23, 2020, 12:15 PM ISTUpdated : Nov 23, 2020, 01:00 PM IST
ಒಂದು ದಿನ ಕರಾಚಿ ಕೂಡಾ ಹಿಂದೂಸ್ತಾನದಲ್ಲಿರುತ್ತದೆ: ವಿವಾದದ ನಡುವೆ ದೇವೇಂದ್ರನ ಭವಿಷ್ಯ!

ಸಾರಾಂಶ

ಕರಾಚಿ ಸ್ವೀಟ್ಸ್ ಹೆಸರು ಬದಲಾಯಿಸುವ ವಿಚಾರ| ಮಾಲೀಕರಿಗೆ ಹೆಸರು ಬದಲಾಯಿಸಲು ಸೂಚಿಸಿದ್ದ ಶಿವಸೇನೆ ನಾಯಕ| ಕರಾಚಿ ಮುಂದೊಂದು ದಿನ ಭಾರತದ ಭಾಗವಾಗಲಿದೆ ಎಂದ ಫಡ್ನವೀಸ್

ಮುಂಬೈ(ನ.23): ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಪಾಕಿಸ್ತಾನದ ಕರಾಚಿ ಮುಂದೊಂದು ದಿನ ಭಾರತದ ಭಾಗವಾಗಲಿದೆ ಎಂದಿದ್ದಾರೆ. 

ಹಮೀದ್ ಅನ್ಸಾರಿಗೆ ಹಿಂದುತ್ವದ ಅರ್ಥ ತಿಳಿಸಿದ ದೇವೇಂದ್ರ ಫಡ್ನವೀಸ್!

ಶಿವಸೇನೆಯ ನಾಯಕನೊಬ್ಬ ಮುಂಬೈನ ಬಾಂದ್ರಾದಲ್ಲಿರುವ ಕರಾಚಿ ಸ್ವೀಟ್ಸ್‌ ಶಾಪ್‌ ಮಾಲೀಕರಿಗೆ, ಅಂಗಡಿಯ ಹೆಸರಿನಲ್ಲಿರುವ ಕರಾಚಿ ಎಂಬ ಪದವನ್ನು ತೆಗೆದು ಹಾಕುವಂತೆ ಸೂಚಿಸಿದ್ದರು. ಈ ಘಟನೆ ಬೆನ್ನಲ್ಲೇ ಫಡ್ನವೀಸ್ ಇಂತಹುದ್ದೊಂದು ಹೇಳಿಕೆ ನೀಡಿದ್ದಾರೆ. ಇನ್ನು ತಮ್ಮ ಪಕ್ಷದ ನಾಯಕ ಇಂತಹುದ್ದೊಂದು ಹೇಳಿಕೆ ನೀಡಿರುವುದು ಪಕ್ಷದ ಅಧಿಕೃತ ಹೇಳಿಕೆಯಲ್ಲ ಎಂದಿದೆ.

ಶನಿವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫಡ್ನವೀಸ್, ನಾವು ಅಖಂಡ ಭಾರತದಲ್ಲಿ ವಿಶ್ವಾಸವಿರಿಸುತ್ತೇವೆ. ಮುಂದೊಂದು ದಿನ ಕರಾಚಿ ಕೂಡಾ ಭಾರತದ ಭಾಗವಾಗಲಿದೆ ಎಂಬುವುದು ನಮ್ಮ ಆಶಯ ಎಂದಿದ್ದಾರೆ.

ದೇವೇಂದ್ರ ಫಡ್ನ​ವೀಸ್‌ ಜತೆ ಜಾರ​ಕಿ​ಹೊಳಿ: ಕುತೂ​ಹಲ ಕೆರ​ಳಿ​ಸಿದ ಉಭಯ ನಾಯಕರ ಭೇಟಿ

ಕಳೆದ ವಾರ ಶಿವಸೇನೆ ನಾಯಕ ನಿತಿನ್ ನಂದಗಾಂವ್ಕರ್ ವಿಡಿಯೋ ಒಂದು ಭಾರೀ ವೈರಲ್ ಆಗಿತ್ತು. ಇದರಲ್ಲಿ ಕರಾಚಿ ಸ್ವೀಟ್ಸ್ ಮಾಲೀಕರಿಗೆ ಅಂಗಡಿ ಹೆಸರು ಬದಲಾಯಿಸುವಂತೆ ಆದೇಶಿಸಿದ್ದ ದೃಶ್ಯವಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್