ಮಾಂಸಕ್ಕಾಗಿ ಜಾನುವಾರು ಆಮದಿಗೆ ಗೋವಾ ಬಿಜೆಪಿ ಸರ್ಕಾರ ಅನುಮತಿ!

Published : Dec 24, 2020, 01:24 PM IST
ಮಾಂಸಕ್ಕಾಗಿ ಜಾನುವಾರು ಆಮದಿಗೆ ಗೋವಾ ಬಿಜೆಪಿ ಸರ್ಕಾರ ಅನುಮತಿ!

ಸಾರಾಂಶ

ಮಾಂಸಕ್ಕಾಗಿ ಜಾನುವಾರು ಆಮದಿಗೆ ಗೋವಾ ಬಿಜೆಪಿ ಸರ್ಕಾರ ಅನುಮತಿ| ಗೋಮಾಂಸ ಕೊರತೆ ಆಗದಂತೆ ನೋಡಿಕೊಳ್ಳಲು ಸಿಎಂ ಸೂಚನೆ

ಪಣಜಿ(ಡಿ.24): ಕರ್ನಾಟಕದಿಂದ ಪೂರೈಕೆ ಆಗುತ್ತಿದ್ದ ಗೋಮಾಂಸ ಕಳೆದ ಎಂಟು ದಿನಗಳಿಂದ ಸ್ಥಗಿತಗೊಂಡಿದ್ದರ ಪರಿಣಾಮವಾಗಿ ಗೋವಾದಲ್ಲಿ ಗೋಮಾಂಸದ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗೋಮಾಂಸದ ಕೊರತೆ ಆಗದಂತೆ ನೋಡಿಕೊಳ್ಳಲು ದಲ್ಲಾಳಿಗಳು ಬೇರೆ ರಾಜ್ಯಗಳಿಂದ ಜಾನುವಾರುಗಳನ್ನು ತರಿಸಿಕೊಳ್ಳುವುದಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅನುಮತಿ ನೀಡಿದ್ದಾರೆ.

ಗೋವಾದಲ್ಲಿನ ಅಲ್ಪಸಂಖ್ಯಾತರ ಪೈಕಿ ಶೇ.30ರಷ್ಟುಮಂದಿ ಗೋಮಾಂಸ ಸೇವನೆ ಮಾಡುತ್ತಿದ್ದಾರೆ. ಗೋಮಾಂಸಕ್ಕಾಗಿ ಗೋವಾ ರಾಜ್ಯ ಕರ್ನಾಟಕದ ಬೆಳಗಾವಿಯ ಮೇಲೆ ಹೆಚ್ಚು ಅವಲಂಬಿಸಿದೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡ ಬಳಿಕ ಪಶುವೈದ್ಯರು ಗೋಮಾಂಸ ಮತ್ತು ಜಾನುವಾರುಗಳ ಮಾರಾಟಕ್ಕೆ ಪ್ರಮಾಣಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ಗೋಮಾಂಸ ಹಾಗೂ ಜಾನುವಾರುಗಳು ಗೋವಾಕ್ಕೆ ಪೂರೈಕೆ ಸ್ಥಗಿತಗೊಂಡಿತ್ತು. ಈ ಮಧ್ಯೆ ಭಾನುವಾರದಿಂದ ಗೋವಾಕ್ಕೆ ಗೋಮಾಂಸ ಪೂರೈಕೆ ಆರಂಭವಾಗಿದ್ದರೂ, ಬೆಳಗಾವಿಯಿಂದ ಪೂರೈಕೆ ಆಗುತ್ತಿದ್ದ ಗೋಮಾಂಸದಲ್ಲಿ ಶೇ.75ರಷ್ಟುಇಳಿಕೆ ಆಗಿದೆ. ಹೀಗಾಗಿ ಮಾಂಸ ವ್ಯಾಪಾರಿಗಳು ದೆಹಲಿ ಹಾಗೂ ಕೇರಳದಿಂದ ರೈಲಿನಲ್ಲಿ ಮಾಂಸ ಆಮದು ಮಾಡಿಕೊಳ್ಳುವ ಬಗ್ಗೆಯೂ ಯತ್ನ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗೋಮಾಂಸದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಅನ್ಯ ರಾಜ್ಯಗಳಿಂದ ಜೀವಂತ ಜಾನುವಾರುಗಳನ್ನು ತರಿಸಿಕೊಳ್ಳಲು ದಲ್ಲಾಳಿಗಳಿಗೆ ಅನುಮತಿ ನೀಡುವಂತೆ ಪಶುಸಂಗೋಪನಾ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಾವಂತ್‌ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!