'ಡಬಲ್ ಎಂಜಿನ್ ಸರ್ಕಾರ ಮೇಕೆದಾಟು ಶುರು ಮಾಡಲಿ'

Published : Jul 13, 2021, 09:10 PM IST
'ಡಬಲ್ ಎಂಜಿನ್ ಸರ್ಕಾರ ಮೇಕೆದಾಟು ಶುರು ಮಾಡಲಿ'

ಸಾರಾಂಶ

* ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ * ಮೇಕೆದಾಟು ಯೋಜನೆಹೆ ಸಿಎಂ ಶುಭಗಳಿಗೆ ಫಿಕ್ಸ್ ಮಾಡಲಿ *  ಗುದ್ದಲಿ ಪೂಜೆ ಆರಂಭಿಸಲಿ.. ಕೆಲವೊಮ್ಮೆ ಟೆಂಡರ್ ಕರೆಯದೇ ಗುದ್ದಲಿ ಪೂಜೆ ಮಾಡಿದ ಉದಾರಣೆಗಳಿವೆ * ಡಬಲ್ ಎಂಜಿನ್ ಸರ್ಕಾರ ಮೊದಲು ಕೆಲಸ ಮಾಡಲಿ

ಬೆಂಗಳೂರು(ಜು. 13 ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೆಕಾವತ್ ರಾಜ್ಯಕ್ಕೆ ಬಂದಿದ್ದಾರೆ. ಸಿಎಂ ಜೊತೆ ಮಾತನಾಡಿದ್ದಾರೆ. ಮೇಕೆದಾಟು ಯೋಜನೆಗೆ ಸಿಎಂ ಶುಭಗಳಿಗೆ ಫಿಕ್ಸ್ ಮಾಡಲಿ. ಟೆಂಡರ್ ಕೊಟ್ಟು ಕೆಲಸ ಆರಂಭ ಮಾಡಲಿ  ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಗುದ್ದಲಿ ಪೂಜೆ ಆರಂಭಿಸಲಿ.. ಕೆಲವೊಮ್ಮೆ ಟೆಂಡರ್ ಕರೆಯದೇ ಗುದ್ದಲಿ ಪೂಜೆ ಮಾಡಿದ ಉದಾರಣೆಗಳಿವೆ... ಏನು ಅಡೆ ತಡೆ ಇದ್ರು ಅದನ್ನು ಬಗೆಹರಿಸಲಿ. ಆದಷ್ಟು ಬೇಗ ಭೂಮಿ‌ ಪೂಜೆ ಮಾಡಲಿ ಎಂದು ಆಗ್ರಹಿಸಿದರು.

ಹದಿನೇಳು ಜನರ ಬಗ್ಗೆ ಡಿಕೆಶಿ ಹೇಳಿದ್ದೇನು?

ಉತ್ತರ ಪ್ರದೇಶ ಮಾದರಿ ಜನಸಂಖ್ಯೆ ‌ನಿಯಂತ್ರಣ ಕಾಯ್ದೆಯನ್ನು  ರಾಜ್ಯದಲ್ಲಿ ಜಾರಿ ಮಾಡ್ತೆವಿ ಅಂತ ಸಿಟಿ ರವಿ ಹೇಳಿಕೆಗೆ ಡಿಕೆಶಿ ವ್ಯಂಗ್ಯವಾಡಿದರು. ಸಿ.ಟಿ ರವಿ ರಾಷ್ಟ್ರೀಯ ನಾಯಕರು. ತುಂಬಾ ದೊಡ್ಡವರು.. ದೇಶದ ಬಗ್ಗೆ ದೊಡ್ಡ ದೊಡ್ಡ ಮಾತಾಡ್ತಾರೆ. ನಾನು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ. ಅವರು ಏನ್ ಹೇಳಿದ್ರು ನಡೆಯುತ್ತೆ. ಜನಸಂಖ್ಯೆ ನಿಯಂತ್ರಣ ಕಾಯ್ದೆ ಮೊದಲು ಅಸೆಂಬ್ಲಿಯಲ್ಲಿ ಮಂಡನೆ ಮಾಡಲಿ. ಅಲ್ಲಿ ಅದಕ್ಕೆ ಉತ್ತರ ಕೊಡ್ತೇವೆ ಎಂದರು.

ಡಬಲ್ ಇಂಜಿನ್ ಸರ್ಕಾರ ಅಂತಾರೆ. ಮೇಕೆದಾಟು ಯೋಜನೆ ಜಾರಿ ಮಾಡುವಲ್ಲಿ ಡಬಲ್ ಇಂಜಿನ್ ತೋರಿಸಲಿ. ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿದ್ದಾರೆ. ಬೇರೆ ರಾಜ್ಯಗಳಿಗೆ ಮಾಡಿದ ಕೆಲಸ ಕೇಂದ್ರ ಮಾಡಲಿ. ಬಿಜೆಪಿ ಸಂಸದರು ಬಾಯಿ ಮುಚ್ಚಿಕೊಂಡಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
India Latest News Live: ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!