
ಬೆಂಗಳೂರು(ಅ.20): ಮುಸ್ಲಿಂ ಮದುವೆಯ ಬಳಿಕ ನಡೆಯುವ ತಲಾಖ್ ಅಥವಾ ವಿಚ್ಚೇದನ ಸಮಸ್ಯೆಯ ಗಂಭೀರತೆಯನ್ನು ಅರಿತ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಮಸೂದೆ ಜಾರಿಗೆ ತಂದಿದೆ. ಇದು ಮುಸ್ಲಿಂ ಹೆಣ್ಣುಮಕ್ಕಳ ಜೀವನಕ್ಕೆ ನೆರವಾಗಿದೆ. ಆದರೆ ತ್ರಿವಳಿ ತಲಾಖ್ ಮಸೂದೆ ಜಾರಿಗೆ ಬರುವ ಮುನ್ನ ಕೋರ್ಟ್ ಮೆಟ್ಟಿಲೇರಿದ ಹಲವು ಪ್ರಕರಣಗಳು ಇನ್ನು ಇತ್ಯರ್ಥಗೊಂಡಿಲ್ಲ. ಈ ಕುರಿತು ಪ್ರಕರಣ ಒಂದರ ತೀರ್ಪು ನೀಡುವಾಗಿ ಮುಸ್ಲಿಂ ಮದುವೆ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಹಿಂದೂ ವಿವಾಹದ ರೀತಿಯ ಸಂಸ್ಕಾರ ಮುಸ್ಲಿಂ ಮದುವೆಯಲ್ಲಿ ಇಲ್ಲ. ಮುಸ್ಲಿಂ ಮದುವೆ ಒಪ್ಪಂದ ಮಾತ್ರ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
10 ವರ್ಷ ಚಿಕ್ಕವನ ಜೊತೆ ವಿವಾಹಪೂರ್ವ ಸಮ್ಮತಿ ಸೆಕ್ಸ್ : ಅತ್ಯಾಚಾರ ಕೇಸ್ಗೆ ಮಹತ್ವದ ತೀರ್ಪು
ಮುಸ್ಲಿಂ ಮದುವೆ ಹಲವು ಅರ್ಥಗಳ ಒಪ್ಪಂದವಾಗಿದೆ. ಹಿಂದೂ ವಿವಾಹದಂತೆ ಒಂದು ಸಂಸ್ಕಾರವಲ್ಲ. ಹೀಗಾಗಿ ವಿಚ್ಚೇದನ ವೇಳೆ ಉದ್ಭವಿಸವು ಹಕ್ಕುಗಳು ಹಾಗೂ ಬಾಧ್ಯತೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಅಡೆತಡೆಗಳಿವೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಎಜಾಜುರ್ ರೆಹಮಾನ್ ಹಾಗೂ ಸಾಯಿರಾ ಬಾನು ಪ್ರಕರಣ ವಿಚಾರ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಆಗಸ್ಟ್ 12, 2011ರಂದು ಬೆಂಗಳೂರಿನ ಕೌಂಟುಂಬಿಕ ನ್ಯಾಯಾಲಯದ ಅಡೀಶನಲ್ ಪ್ರಿನ್ಸಿಪಲ್ ಜಡ್ಜ್ ನೀಡಿದ ಆದೇಶವನ್ನು ರದ್ದು ಗೊಳಿಸುವಂತೆ ಕೋರಿ ಎಜಾಜೂರ್ ರೆಹಮಾನ್ (52) ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಈ ಮಹತ್ವದ ಅಂಶವನ್ನು ಉಲ್ಲೇಖಿಸಿದೆ.
1991ರ ನವೆಂಬರ್ 25 ರಂದು ರೆಹಮಾನ್ ಪತ್ನಿ ಸಾಯಿರಾ ಬಾನುಗೆ ತಲಾಖ್ ಮೂಲಕ ವಿಚ್ಚೇದನ ನೀಡಿದ್ದರು. ಮುಸ್ಲಿಂ ಸಂಪ್ರದಾಯದಂತೆ 5,000 ರೂಪಾಯಿ ಮೆಹರ ನೀಡಿ ವಿಚ್ಚೇದನ ಪಡೆದುಕೊಂಡಿದ್ದರು. ಬಳಿಕ ರಹೆಮಾನ್ ಮತ್ತೊಂದು ವಿವಾಹವಾಗಿದ್ದಾರೆ. ವರ್ಷಗಳ ಬಳಿಕ ಮಗುವಿನ ತಂದೆಯಾಗಿದ್ದಾರೆ. ಇತ್ತ ಸಾಯಿರಾ ಬಾನು ಆಗಸ್ಟ್ 24, 2002ರಂದು ನಿರ್ವಹಣೆ ವೆಚ್ಚ ನೀಡಬೇಕು ಎಂದು ಸಿವಿಲ್ ಮೊಕದ್ದಮೆ ಹೊಡಿದ್ದರು. ಸಾಯಿರಾ ಬಾನು ಪ್ರಕರಣ ವಿಚಾರಣೆ ನಡೆಸಿದ ಕೌಟುಂಬಿಕ ನ್ಯಾಯಾಲಯ ಮಾಸಿಕ ನಿರ್ವಹಣೆಗೆ ಮಾಸಿಕ 3,000 ರೂಪಾಯಿ ನೀಡಬೇಕು ಎಂದು ಸೂಚಿಸಿತ್ತು. ಸಾಯಿರಾ ಬಾನು ಮರು ವಿವಾಹವಾಗು ವರೆಗೆ ಅಥವಾ ಸಾಯಿರಾ ಬಾನು ಮರಣದ ವರೆಗೆ ಮಾಸಿಕ ನಿರ್ವಹಣೆ ವೆಚ್ಚ ನೀಡಬೇಕು ಎಂದು ಆದೇಶಿಸಿತ್ತು.
ಕುದುರೆ ಸವಾರಿ ಗೆಳೆಯನ ಮದುವೆಯಾದ ದಿಗ್ಗಜ್ ಬಿಲ್ ಗೇಟ್ಸ್ ಮಗಳು!
ಆದೇಶ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ದೀಕ್ಷಿತ್, ಮುಸ್ಲಿಂ ವಿವಾಹ ಒಂದು ಸಂಸ್ಕಾರವಲ್ಲ, ವಿಚ್ಚೇದನದಿಂದ ವಿವಾಹದ ಎಲ್ಲಾ ಕಟ್ಟುಪಾಡುಗಳು ಮುರಿದುಬೀಳುತ್ತದೆ. ಮುಸ್ಲಿಮರ ವಿವಾಹವೂ ಒಪ್ಪಂದವಾಗಿದೆ. ಹೀಗಾಗಿ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಿಂದೂ ಸಂಪ್ರದಾಯದಂತೆ ಸಂಸ್ಕಾರಯುತ ಮದುವೆ ಅಲ್ಲದ ಕಾರಣ, ಕೆಲ ನ್ಯಾಯಯುತ ಬಾಧ್ಯತೆಗಿಗೆ ಕಾರಣವಾಗುತ್ತಿದೆ. ಜೊತೆಗೆ ಹೊಸ ಬಾಧ್ಯತೆಗಳು ಕೂಡ ಉದ್ಭವಿಸವು ಸಾಧ್ಯತೆಗಳಿವೆ. ವಿಚ್ಚೇದನದಿಂದ ನಿರ್ಗತಿಕರಾಗಿರುವ ಮಾಜಿ ಪತ್ನಿಕೆ ಜೀವನಾಂಶ ನೀಡುವುದು ವ್ಯಕ್ತಿಯ ಕರ್ತವ್ಯವಾಗಿದೆ. ಆದರೆ ಮುಸ್ಲಿಂ ತಲಾಖ್ ಇಲ್ಲಿ ಕೆಲ ತೊಡಕುಗಳನ್ನು ಮುಂದಿಡುತ್ತದೆ ಎಂದು ಜಸ್ಚೀಸ್ ದೀಕ್ಷಿತ್ ಹೇಳಿದ್ದಾರೆ.
ಮಾಜಿ ಪತ್ನಿಯ ನಿರ್ವಹಣಾ ಹಕ್ಕು ಇದ್ದತ್ಗಿಂತ ವಿಸ್ತರಿಸುವುದಿಲ್ಲ. ಇಸ್ಲಾಮಿಕ್ ನ್ಯಾಯಾಶಾಸ್ತ್ರ ಇದನ್ನು ಹೆಬ್ಬೆರಳಿನ ನಿಮಯ ಎಂದು ಪರಿಗಣಿಸುವುದಿಲ್ಲ. ಮಾಜಿ ಪತ್ನಿಗೆ ಪಾವತಿಸುವ ಮೆಹರ್ ಮೊತ್ತದ ಆಧಾರದ ಮೇಲೆ ಅರ್ಹವಾದ ಮೊತ್ತವಾಗಿರಲಿ ಅಥವಾ ಅಸಮರ್ಪಕ ಮೊತ್ತವಾಗಬಲ್ಲದು ಎಂದು ನ್ಯಾಯಮೂರ್ತಿ ದೀಕ್ಷಿತ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ