Published : Dec 12, 2025, 07:12 AM ISTUpdated : Dec 12, 2025, 10:59 PM IST

Karnataka News Live: ಭದ್ರಾವತಿ - ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ - ಇಬ್ಬರು ದುರ್ಮರಣ!

ಸಾರಾಂಶ

ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್‌ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳ ಲಾಗಿದೆ. ಕಳೆದ 4 ವರ್ಷಗಳಿಂದ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದಿರಲಿಲ್ಲ. ಜತೆಗೆ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದೆ.

Two Dead in Bhadravathi After Brawl Over Eloping Lovers Five Arrested

10:59 PM (IST) Dec 12

ಭದ್ರಾವತಿ - ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ - ಇಬ್ಬರು ದುರ್ಮರಣ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಪ್ರೇಮಿಗಳ ವಿಚಾರವಾಗಿ ನಡೆದ ಜಗಳವು ಇಬ್ಬರ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳ ಬಿಡಿಸಲು ಮಧ್ಯಪ್ರವೇಶಿಸಿದ ಸ್ಥಳೀಯರಾದ ಮಂಜುನಾಥ್ ಮತ್ತು ಕಿರಣ್ ಎಂಬುವವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. 

Read Full Story

10:29 PM (IST) Dec 12

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!

ಬೆಂಗಳೂರಿನ ಆಟೋ ಚಾಲಕರೊಬ್ಬರು ತಮ್ಮ ಆಟೋದಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ 'ನಾನೊಬ್ಬ ತಂದೆ, ಅಣ್ಣ.. ನಿಮ್ಮ ಸುರಕ್ಷತೆ ನನಗೂ ಮುಖ್ಯ' ಎಂಬ ಸಂದೇಶ ಬರೆದುಕೊಂಡಿದ್ದಾರೆ. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸರು, ಈ ಚಾಲಕನನ್ನು ಗುರುತಿಸಿ ಗೌರವಿಸಲು ಸಾರ್ವಜನಿಕರ ಸಹಾಯ ಕೋರಿದ್ದಾರೆ.

Read Full Story

09:57 PM (IST) Dec 12

ಕಾರವಾರ - ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ

ಶಿರಸಿಯಲ್ಲಿ, ತನ್ನ ಮಾಲೀಕರ ಮನೆಯಿಂದಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕದ್ದಿದ್ದ ಮನೆಗೆಲಸದವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಕಲಿ ಕೀ ಬಳಸಿ, ಮನೆಯವರು ಗೋವಾಕ್ಕೆ ತೆರಳಿದ್ದಾಗ ಈ ಕೃತ್ಯ ಎಸಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆತನನ್ನು ಪತ್ತೆಹಚ್ಚಲಾಗಿದೆ.
Read Full Story

09:01 PM (IST) Dec 12

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!

ತುರ್ಕಮೆನಿಸ್ತಾನದಲ್ಲಿ ನಡೆದ ಅಂತರರಾಷ್ಟ್ರೀಯ ವೇದಿಕೆಯ ಸಭೆಯಲ್ಲಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗಾಗಿ 40 ನಿಮಿಷಗಳ ಕಾಲ ಕಾದ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್, ಕೊನೆಗೆ ಪುಟಿನ್ ಹಾಗೂ ಟರ್ಕಿಶ್ ಅಧ್ಯಕ್ಷ ಎರ್ಡೋಗನ್ ನಡೆಸುತ್ತಿದ್ದ ಸಭೆಗೆ ನುಗ್ಗಿದ್ದಾರೆ.

Read Full Story

09:01 PM (IST) Dec 12

ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!

ಬೆಂಗಳೂರಿನಲ್ಲಿ ಮುಂದಿನ ವಾರ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದ್ದು, ಹಗಲು ಬೆಚ್ಚಗಿರಲಿದೆ. ಬೆಳಗಿನ ಜಾವ ಮಂಜು ಕವಿಯಲಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read Full Story

08:33 PM (IST) Dec 12

Baba Vanga Prediction - 2026ರಿಂದ 5079 ರವರೆಗಿನ ಬಾಬಾ ವಂಗಾ ಭವಿಷ್ಯವಾಣಿ ಇಲ್ಲಿದೆ!

'ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್' ಎಂದೇ ಖ್ಯಾತರಾದ ಬಾಬಾ ವಂಗಾ ಅವರ 2026 ರಿಂದ 5079 ರವರೆಗೆ ಬೆಚ್ಚಿ ಬೀಳಿಸುವಂಥ ಭವಿಷ್ಯವಾಣಿಗಳನ್ನು ನೀಡಿದ್ದಾರೆ. ಅವುಗಳ ಪಟ್ಟಿ ಇಲ್ಲಿದೆ. ಇವು ಜಗತ್ತಿನ ಅಂತ್ಯದವರೆಗಿನ ಘಟನೆಗಳನ್ನು (Baba Vanga Prediction) ವಿವರಿಸುತ್ತವೆ.

Read Full Story

08:25 PM (IST) Dec 12

ತಾಳಿ ಕಟ್ಟುವ ಶುಭ ವೇಳೆ..., 'ಇವನು ನನ್ನ ಗಂಡ' ಎಂದವಳೊಂದಿಗೆ ಸಂಸಾರ ನಡೆಸುತ್ತೇನೆ ಎಂದ ಮದುಮಗ!

ರಾಯಚೂರಿನಲ್ಲಿ ನಡೆಯುತ್ತಿದ್ದ ಮದುವೆಯನ್ನು ಯುವತಿ ನಿಲ್ಲಿಸಿ ‘ಇವನು ನನ್ನ ಗಂಡ’ ಎಂದಿದ್ದರು. ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ ಇದೀಗ ಮಧ್ಯಸ್ಥಿಕೆಯ ನಂತರ, ಮದುಮಗನೇ ತನ್ನ ಮೊದಲ ಪ್ರೇಯಸಿಯೊಂದಿಗೆ ಸಂಸಾರ ನಡೆಸಲು ಒಪ್ಪಿಕೊಂಡಿದ್ದಾನೆ.

Read Full Story

08:15 PM (IST) Dec 12

ಬೆಂಗಳೂರು ಜನತೆಗೆ ಶೀಘ್ರವೇ ದೊಡ್ಡ ಮುಕ್ತಿ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮುಂದಿನ ತಿಂಗಳೊಳಗೆ ಸಂಚಾರ ಮುಕ್ತ!

ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿಯ ಡಬಲ್-ಡೆಕ್ಕರ್ ಫ್ಲೈಓವರ್ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಇದು ಎಚ್‌ಎಸ್‌ಆರ್-ಬಿಟಿಎಂ ಲೇಔಟ್ ನಡುವಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ.  

Read Full Story

07:50 PM (IST) Dec 12

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!

ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ, ಬಾಗಲಕೋಟೆಯಲ್ಲಿ ಸರಣಿ ಕಳ್ಳತನ, ಮತ್ತು ಬಸವಕಲ್ಯಾಣದಲ್ಲಿ ಪಿಡಿಓ ಮನೆ ಕಳ್ಳತನಕ್ಕೆ ಯತ್ನ ನಡೆದಿದೆ. ಈ ಘಟನೆಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಆತಂಕವನ್ನು ಸೃಷ್ಟಿಸಿದ್ದು, ಪೊಲೀಸ್ ಸಿಬ್ಬಂದಿಯ ಮನೆಗಳೇ ಸುರಕ್ಷಿತವಲ್ಲದಂತಾಗಿದೆ.
Read Full Story

07:44 PM (IST) Dec 12

ತ್ರಿಷಾಳ ಮಾಜಿ ಪ್ರಿಯಕರನ ಜೊತೆ ಸಿಕ್ಕಿಬಿದ್ದ ಮತ್ತೊಬ್ಬ ನಟಿ; ಸಂದರ್ಶನದಲ್ಲಿ ಅವರೇ ಒಪ್ಪಿಕೊಂಡರು!

ನಟಿ ತ್ರಿಷಾ 2015ರಲ್ಲಿ ಉದ್ಯಮಿ ವರುಣ್ ಮಣಿಯನ್ ಜೊತೆಗಿನ ನಿಶ್ಚಿತಾರ್ಥವನ್ನು ಮುರಿದುಕೊಂಡಿದ್ದರು. ಇದಾದ ಹಲವು ವರ್ಷಗಳ ನಂತರ, ಅದೇ ವರುಣ್ ಜೊತೆ ಬಿಗ್ ಬಾಸ್ ವಿಜೇತೆ ಡೇಟಿಂಗ್ ಮಾಡಿದ್ದಾಗಿ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದಾರೆ.

Read Full Story

07:19 PM (IST) Dec 12

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ಕೊಡಿ,ಇಲ್ಲವಾದರೆ ಪ್ರತ್ಯೇಕ ರಾಜ್ಯ ಕೊಡಿ - ಶಾಸಕ ರಾಜು ಕಾಗೆ

ಶಾಸಕ ರಾಜು ಕಾಗೆ ಅವರು ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಪ್ರತ್ಯೇಕ 'ಕಿತ್ತೂರು ಕರ್ನಾಟಕ' ರಾಜ್ಯಕ್ಕೆ ಆಗ್ರಹಿಸಿದ್ದಾರೆ. ಕಲ್ಯಾಣ ಕರ್ನಾಟಕದಂತೆ 5 ಸಾವಿರ ಕೋಟಿ ಅನುದಾನ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Read Full Story

07:17 PM (IST) Dec 12

ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?

ಯುಎಸ್‌ಬಿ ಕಾಂಡೋಮ್‌ಗಳು ಈಗ ಮಾರುಕಟ್ಟೆಯಲ್ಲಿ ಮತ್ತು ವಿವಿಧ ಇ-ಕಾಮರ್ಸ್‌ ವೇದಿಕೆಯಲ್ಲಿ ಮಾರಾಟಕ್ಕೆ ಲಭ್ಯವಿದೆ. ಇಂದು ಅವುಗಳನ್ನು ಹೇಗೆ ಬಳಸುವುದು ಮತ್ತು ಅವುಗಳ ಪ್ರಯೋಜನಗಳೇನು ಅನ್ನೋದರ ವಿವರ ತಿಳಿದುಕೊಳ್ಳೋಣ

 

Read Full Story

06:42 PM (IST) Dec 12

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

ಏಷ್ಯಾನೆಟ್ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ಅಂಗವಾಗಿ ಕೊಡಗಿನಲ್ಲಿ ಜಿಲ್ಲಾಮಟ್ಟದ ಸ್ಪರ್ಧೆ ನಡೆಯಿತು. 'ವನ್ಯಜೀವಿ ಮತ್ತು ಅರಣ್ಯ ಸಂರಕ್ಷಣೆ' ವಿಷಯದಡಿ ವಿದ್ಯಾರ್ಥಿಗಳು ತಮ್ಮ ಕಲ್ಪನೆಯನ್ನು ಚಿತ್ರಗಳ ಮೂಲಕ ಅದ್ಭುತಗೊಳಿಸಿದರು.

Read Full Story

06:39 PM (IST) Dec 12

ಉತ್ತರ ಕನ್ನಡ - ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!

ಅಂಕೋಲಾ ತಾಲೂಕಿನಲ್ಲಿ ಯುವಜನರಲ್ಲಿ, ವಿಶೇಷವಾಗಿ 22 ವರ್ಷದೊಳಗಿನವರಲ್ಲಿ ಎಚ್‌ಐವಿ ಸೋಂಕು ಆತಂಕಕಾರಿಯಾಗಿ ಹೆಚ್ಚುತ್ತಿದೆ. ಹದಿಹರೆಯದ ಕುತೂಹಲ, ಮೊಬೈಲ್ ಗೀಳು ಮತ್ತು ಅಸುರಕ್ಷಿತ ನಡವಳಿಕೆಗಳು ಇದಕ್ಕೆ ಪ್ರಮುಖ ಕಾರಣಗಳಾಗಿದೆ.

Read Full Story

06:34 PM (IST) Dec 12

ಏಷ್ಯಾನೆಟ್ ಸುವರ್ಣನ್ಯೂಸ್ ಸಿಬ್ಬಂದಿ ಲಲಿತಮ್ಮ ಸಾವು; ಟ್ರಕ್ ಚಕ್ರ ತಲೆ ಮೇಲೆ ಹರಿದು ಭೀಕರ ಅಂತ್ಯ

ಬೆಂಗಳೂರಿನ ಓಕಳೀಪುರಂ ರೈಲ್ವೇ ಪ್ಯಾರಲೆಲ್ ರಸ್ತೆ ಬಳಿ ಟ್ರಕ್ ಡಿಕ್ಕಿಯಾಗಿ ಏಷ್ಯಾನೆಟ್ ಸುವರ್ಣನ್ಯೂಸ್ ನ ಹೌಸ್ ಕೀಪಿಂಗ್ ಸಿಬ್ಬಂದಿ ಲಲಿತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೇಷಾದ್ರಿಪುರಂ ಸಂಚಾರ ಪೊಲೀಸರಿಂದ ತನಿಖೆ.

Read Full Story

06:33 PM (IST) Dec 12

ಇಲ್ಲಿ ಕುಳಿತವರೆಲ್ಲಾ ಶಿವನ ಪಾದ ಸೇರಿದ್ರು ಎನ್ನುತ್ತ ಅಲ್ಲಿಂದ್ಲೇ ವಿಡಿಯೋ ಮಾಡಿದ ಡಾ.ಬ್ರೋ! ಆತಂಕದಲ್ಲಿ ಫ್ಯಾನ್ಸ್​

ಯೂಟ್ಯೂಬ್‌ನಿಂದ ದೂರ ಉಳಿದಿದ್ದ ಕನ್ನಡಿಗರ ಕಣ್ಮಣಿ ಡಾ.ಬ್ರೋ, ಇದೀಗ ಮಾರಿಟೇನಿಯಾ ದೇಶದಿಂದ ಹೊಸ ವಿಡಿಯೋದೊಂದಿಗೆ ಮರಳಿದ್ದಾರೆ. ವಿಶ್ವದ ಅತಿ ಉದ್ದದ ಮತ್ತು ಅಪಾಯಕಾರಿ ಗೂಡ್ಸ್ ರೈಲಿನಲ್ಲಿ ಪ್ರಯಾಣಿಸಿ, ತಮ್ಮ ಜೀವವನ್ನೇ ಪಣಕ್ಕಿಟ್ಟು ಮಾಡಿದ ಈ ಸಾಹಸಮಯ ವಿಡಿಯೋ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
Read Full Story

06:08 PM (IST) Dec 12

Photos - 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!

ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ ಅವರು ಆರು ವರ್ಷಗಳ ನಂತರ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಟಿಬೆಟಿಯನ್ ಕಾಲೋನಿಗೆ ಆಗಮಿಸಿದ್ದು, ಕಾಲೋನಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. 

Read Full Story

05:35 PM (IST) Dec 12

Bigg Bossಗೆ ಬಂದ ಚೈತ್ರಾ ಕುಂದಾಪುರ, ರಜತ್​ ವಾಪಸ್​ ಹೋಗದ ಗುಟ್ಟು ರಟ್ಟಾಗೋಯ್ತು! ಕುಂಟೆಬಿಲ್ಲೆ ಆಟದಲ್ಲಿ ರಿವೀಲ್​!

ಬಿಗ್ ಬಾಸ್ ಸೀಸನ್ 12 ರಲ್ಲಿ ಚೈತ್ರಾ ಕುಂದಾಪುರ  ಮತ್ತು ರಜತ್​ ಇನ್ನೂ ಮನೆಯಲ್ಲಿದ್ದಾರೆ. ಇತ್ತೀಚಿನ ಪ್ರೊಮೋದಲ್ಲಿ, ಕುಂಟೆಬಿಲ್ಲೆ ಆಟದ ವೇಳೆ ಅವರಿಗೂ ಮತ್ತು ಅಶ್ವಿನಿ ಗೌಡ ಅವರಿಗೂ ನಡೆದ ಜಗಳವನ್ನು ತೋರಿಸಲಾಗಿದೆ. ಈ ಜಗಳದ ಮೂಲಕ, ಇವರಿನ್ನೂ ಯಾಕೆ ಇದ್ದಾರೆ ಎನ್ನುವುದನ್ನು ನೆಟ್ಟಿಗರು ತಿಳಿಸಿದ್ದಾರೆ.

Read Full Story

05:32 PM (IST) Dec 12

ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್ - ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ 'ಮಂಕಿ ಕ್ಯಾಪ್' ಧರಿಸಿದ ಕಳ್ಳರ ತಂಡವೊಂದು ಪೊಲೀಸರ ಮನೆಗಳೂ ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಮನೆಗಳಿಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದೆ. ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಸೆರೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story

05:31 PM (IST) Dec 12

ಸರ್ಕಾರಿ ಶಾಲೆಗಳ ಆಘಾತಕಾರಿ ಬೆಳವಣಿಗೆ, ಮಕ್ಕಳ ದಾಖಲಾತಿ 17 ಲಕ್ಷ ಕುಸಿತ ನಿಜವೆಂದು ಒಪ್ಪಿಕೊಂಡ ಸರ್ಕಾರ!

ಕಳೆದ 15 ವರ್ಷಗಳಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 17 ಲಕ್ಷ ಮಕ್ಕಳ ದಾಖಲಾತಿ ಕುಸಿದಿರುವುದನ್ನು ಸರ್ಕಾರ ಒಪ್ಪಿಕೊಂಡಿದೆ. ಆಂಗ್ಲ ಮಾಧ್ಯಮದತ್ತ ಒಲವು, ವಲಸೆ ಮತ್ತು ಖಾಸಗಿ ಶಾಲೆಗಳ ಹೆಚ್ಚಳವೇ ಇದಕ್ಕೆ ಕಾರಣವಾಗಿದ್ದು, ದಾಖಲಾತಿ ಹೆಚ್ಚಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. 

Read Full Story

05:29 PM (IST) Dec 12

ರೈತರಿಗೆ ಹೆಣ್ಣು ಸಿಗ್ತಿಲ್ಲ; ಬಾಸಿಂಗ ತೊಟ್ಟು, ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಯುವಕರು!

ಹೆಣ್ಣು ಸಿಗುತ್ತಿಲ್ಲವೆಂಬ ಬೇಸರದಿಂದ ಮಂಡ್ಯದ ರೈತರ ಮಕ್ಕಳು ಹಣೆಗೆ ಬಾಸಿಂಗ ಧರಿಸಿ, ತಲೆಗೆ ಪೇಟ ಹಾಕಿಕೊಂಡು, ತಾಂಬೂಲ ಸಮೇತವಾಗಿ ಜಿಲ್ಲಾಧಿಕಾರಿ ಕಚೇರಿಗೆ ಹೆಣ್ಣು ಕೇಳಲು ಬಂದಿದ್ದಾರೆ. ರೈತರ ಮದುವೆಯಾಗುವ ಹೆಣ್ಣು ಮಕ್ಕಳಿಗೆ ₹5 ಲಕ್ಷ ಸಹಾಯಧನ ನೀಡಲು ಮನವಿ ಮಾಡಿದ್ದಾರೆ.

Read Full Story

05:01 PM (IST) Dec 12

ಕೋಲಾರ ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್, ಅಲರ್ಟ್ ಆದ ಪೊಲೀಸರು ತೀವ್ರ ತಪಾಸಣೆ

ಕೋಲಾರ ಮತ್ತು ಬೀದರ್ ಜಿಲ್ಲಾಧಿಕಾರಿ ಕಚೇರಿಗಳಿಗೆ ಇಮೇಲ್ ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಬಂದಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಸ್ಫೋಟಿಸುವುದಾಗಿ ಹೇಳಲಾಗಿದ್ದು, ಚೆನ್ನೈ ಮೂಲದ ಬಾಲಕಿಯ ಹೆಸರಿನಲ್ಲಿ ಮೇಲ್ ಬಂದಿದ್ದು, ಎರಡೂ ಜಿಲ್ಲೆಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿ, ಬಾಂಬ್ ನಿಗ್ರಹ ದಳದಿಂದ ತಪಾಸಣೆ.

Read Full Story

04:31 PM (IST) Dec 12

ಮೈಸೂರು, ಮಂಡ್ಯದಲ್ಲಿ ಬಾಲ್ಯ ವಿವಾಹಕ್ಕೆ ಗಣನೀಯ ಇಳಿಕೆ, ಸರ್ಕಾರದಿಂದ ಸಿಕ್ಕಿತು ನೆಮ್ಮದಿಯ ಸುದ್ದಿ

ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವರ್ಷ ಬಾಲ್ಯ ವಿವಾಹ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ  ಸಾರ್ವಜನಿಕ ಜಾಗೃತಿ, ಪೊಲೀಸ್ ಇಲಾಖೆಯ ಕಠಿಣ ನಿಗಾ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ತಕ್ಷಣದ ಹಸ್ತಕ್ಷೇಪದಿಂದಾಗಿ ಈ ಯಶಸ್ಸು ಸಾಧ್ಯವಾಗಿದೆ.

Read Full Story

04:29 PM (IST) Dec 12

ಬೆಂಗಳೂರು - ತಿಂಡಿ ಎಸೆದು ಪಾತ್ರೆಯಿಂದ ಹಲ್ಲೆ ಮಾಡಿದ ಪುಂಡರಿಗೆ ಕುದಿಯುವ ಎಣ್ಣೆ ಎರಚಿದ ವ್ಯಾಪಾರಿ!

ಹೊಸೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬೀದಿ ಬದಿ ವ್ಯಾಪಾರಿಯೊಂದಿಗೆ ಜಗಳವಾಡಿದ ಇಬ್ಬರು ಯುವಕರು ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ, ವ್ಯಾಪಾರಿಯು ತನ್ನ ಮೇಲಿದ್ದ ಕುದಿಯುವ ಎಣ್ಣೆಯನ್ನು ಯುವಕನೊಬ್ಬನ ಮೇಲೆ ಎಸೆದು ಪ್ರತೀಕಾರ ತೀರಿಸಿಕೊಂಡಿದ್ದಾನೆ.

Read Full Story

04:09 PM (IST) Dec 12

ಕರುನಾಡಿಗೆ ಶೀತ ಕಂಟಕ ಖಚಿತ-ತಾಪಮಾನ 12°Cಗೆ ಕುಸಿತ-ಬೆಂಗಳೂರು ಜನತೆಗೆ ಮೈನಡುಕ ಉಚಿತ!

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿಯಲಿದ್ದು, ಬೆಂಗಳೂರಿನಲ್ಲೂ ಕನಿಷ್ಠ ತಾಪಮಾನ 12°C ವರೆಗೆ ಇಳಿಯುವ ಸಾಧ್ಯತೆಯಿದೆ.

Read Full Story

04:02 PM (IST) Dec 12

Bigg Boss - ಈಗ ಬಂತು ನೋಡಿ ಮಜಾ! ಅಶ್ವಿನಿ ಗೌಡ ತನ್ನಂತೇ ಮಾತಾಡೋ ಹಾಗೆ ಮಾಡಿದ ರಕ್ಷಿತಾ ಶೆಟ್ಟಿ!

ಬಿಗ್‌ಬಾಸ್‌ನಲ್ಲಿ ತನ್ನ ಅರೆಬರೆ ಕನ್ನಡದಿಂದಲೇ ಫೇಮಸ್ ಆಗಿರುವ ರಕ್ಷಿತಾ ಶೆಟ್ಟಿಯನ್ನು, ಅಶ್ವಿನಿ ಗೌಡ ನಿರಂತರವಾಗಿ ಟೀಕಿಸುತ್ತಿದ್ದರು. ಆದರೆ ಇದೀಗ ಅಶ್ವಿನಿ ಗೌಡ ಅವರೇ ರಕ್ಷಿತಾ ಶೈಲಿಯಲ್ಲಿ 'ಮಿನಿಷ' ಎಂದು ಕನ್ನಡ ಮಾತನಾಡಿ ಅಚ್ಚರಿ ಮೂಡಿಸಿದ್ದಾರೆ.
Read Full Story

03:26 PM (IST) Dec 12

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಪ್ರೌಢಶಾಲೆಯ ಪ್ರಾಂಶುಪಾಲ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೋಷಕರು ಮತ್ತು ಸ್ಥಳೀಯರಿಂದ ಧರ್ಮದೇಟು ತಿಂದಿದ್ದಾನೆ. ಘಟನೆಯ ನಂತರ, ಪೊಲೀಸರು ಆರೋಪಿ ಪ್ರಾಂಶುಪಾಲನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Read Full Story

03:19 PM (IST) Dec 12

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!

ಮೈಸೂರಿನಲ್ಲಿ ಉದ್ದೇಶಿತ ಏಕತಾ ಮಹಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಜಾಗವು ತಮ್ಮ ಪೂರ್ವಜರಿಗೆ ಸೇರಿದ್ದು ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಸಂಸದ ಯದುವೀರ್ ಒಡೆಯರ್ ಕಾಮಗಾರಿ ಪರಿಶೀಲಿಸಿದ್ದು, ಒಂದೇ ಕುಟುಂಬದಲ್ಲಿ ಭಿನ್ನ ನಿಲುವು ವ್ಯಕ್ತವಾಗಿದೆ.

Read Full Story

02:46 PM (IST) Dec 12

ಸೀರಿಯಲ್​ ನಾಯಕಿಯರು ಭಾರಿ ಸಂಕಷ್ಟದಲ್ಲಿ! ದೀಪಾ, ನಿಧಿ ಆಯ್ತು ಈಗ ಭಾರ್ಗವಿಯೂ ಜೈಲಿಗೆ- ಏನಾಗ್ತಿದೆ ಇಲ್ಲಿ? ​

ಕಲರ್ಸ್ ಕನ್ನಡದ 'ಭಾರ್ಗವಿ ಎಲ್ಎಲ್​ಬಿ'ಯ ಭಾರ್ಗವಿ, ಜೀ ಕನ್ನಡದ 'ಕರ್ಣ' ಸೀರಿಯಲ್​ನ ನಿಧಿ ಸುಳ್ಳು ಆರೋಪಗಳ ಮೇಲೆ ಜೈಲು ಸೇರಿದ್ದಾರೆ. ಈ ಹಿಂದೆ 'ಬ್ರಹ್ಮಗಂಟು' ಧಾರಾವಾಹಿಯ ದೀಪಾ ಕೂಡ ಇದೇ ರೀತಿ ಅರೆಸ್ಟ್ ಆಗಿದ್ದಳು. ಧಾರಾವಾಹಿಗಳಲ್ಲಿ ನಾಯಕಿಯರು ಸಂಕಷ್ಟಕ್ಕೆ ಸಿಲುಕುತ್ತಿರುವ ಪ್ರಸಂಗಗಳು ನಡೆಯುತ್ತಿವೆ.

Read Full Story

02:21 PM (IST) Dec 12

Amruthadhaare - ಬಲು ಕಿಲಾಡಿ ಈ ಅಜ್ಜಿ! ಕೊನೆ ಆಸೆ ಈಡೇರಿಸಿಕೊಳ್ತೇನಂತ ಸತ್ತೇ ಹೋಗೋದಾ? ಮಾಡಿದ್ದೇನು ನೋಡಿ!

ಶಕುಂತಲಾಳ ಭಯದಿಂದ ದೂರಾಗಿರುವ ಗೌತಮ್ ಮತ್ತು ಭೂಮಿಕಾರನ್ನು ಒಂದು ಮಾಡಲು, ಜೈದೇವ್‌ನಿಂದ ಮೋಸಹೋದ ಅಜ್ಜಿ ಸಾಯುವ ನಾಟಕವಾಡಿದ್ದಾಳೆ. ತನ್ನ ಕೊನೆಯಾಸೆಯ ನೆಪದಲ್ಲಿ ದಂಪತಿಯನ್ನು ಮತ್ತೆ ಒಂದು ಮಾಡಲು ಅಜ್ಜಿ ಪಣತೊಟ್ಟಿದ್ದು, ಈ ಪ್ಲ್ಯಾನ್ ಯಶಸ್ವಿಯಾಗುವುದೇ ಎಂದು ಕಾದುನೋಡಬೇಕಿದೆ.
Read Full Story

02:18 PM (IST) Dec 12

ತಾಳಿ ಕಟ್ಟುವ ಶುಭ ವೇಳೆ 'ಇವನು ನನ್ನ ಗಂಡ' ಎಂದ ಯುವತಿ; ಮಾಜಿ ಪ್ರೇಯಸಿ ರಾಕ್, ಮದುವೆ ಮನೇಲಿದ್ದವರು ಶಾಕ್!

ರಾಯಚೂರಿನಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಯೊಂದನ್ನು ಕೊಪ್ಪಳ ಮೂಲದ ಯುವತಿ ತಡೆದಿದ್ದಾಳೆ. ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿ ನಂತರ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಯತ್ನಿಸಿದ ಪ್ರಿಯಕರನ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
Read Full Story

01:58 PM (IST) Dec 12

2025ರಲ್ಲಿ ಸಿನಿಮಾ ಇಲ್ಲದಿದ್ದರೂ ಪ್ರಭಾಸ್ ಕ್ರೇಜ್ ಟಾಪ್ - 4000 ಕೋಟಿ ಬ್ಯುಸಿನೆಸ್ ಮಾಡುತ್ತಿರುವ ರೆಬೆಲ್ ಸ್ಟಾರ್!

ಈ ವರ್ಷ ಪ್ರಭಾಸ್ ಅವರಿಂದ ಒಂದೇ ಒಂದು ಸಿನಿಮಾ ಕೂಡ ಬಂದಿಲ್ಲ. 'ರಾಜಾ ಸಾಬ್' ಬಿಡುಗಡೆಯಾಗಬೇಕಿದ್ದರೂ ಮುಂದೂಡಲ್ಪಟ್ಟಿದೆ. 'ರಾಜಾ ಸಾಬ್' ಚಿತ್ರ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ. 'ರಾಜಾ ಸಾಬ್' ನಂತರ ಪ್ರಭಾಸ್ ನಟಿಸುತ್ತಿರುವ ಸಿನಿಮಾಗಳ ಬ್ಯುಸಿನೆಸ್ ಯಾವ ಮಟ್ಟದಲ್ಲಿದೆ.

Read Full Story

01:48 PM (IST) Dec 12

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ - ಶಾಸಕ ಉದಯ ಕದಲೂರು ಓಪನ್ ಹೇಳಿಕೆ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಗುಪ್ತ ಭೋಜನಕೂಟವು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಶೀಘ್ರದಲ್ಲೇ ದೆಹಲಿಯಿಂದ ಕರೆ ಬರಲಿದೆ ಎಂದು ಡಿಕೆಶಿ ತಮ್ಮ ಆಪ್ತರಿಗೆ ಸೂಚ್ಯವಾಗಿ ತಿಳಿಸಿದ್ದು, ಯಾವುದೇ ಕ್ಷಣದಲ್ಲಾದರೂ ಅವರು ಸಿಎಂ ಆಗುತ್ತಾರೆ ಎಂದು ಶಾಸಕ ಉದಯ ಕದಲೂರು ಹೇಳಿದ್ದಾರೆ.

Read Full Story

01:42 PM (IST) Dec 12

ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ

ಬೆಂಗಳೂರಿನ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರವರೆಗಿನ ಹೊರವರ್ತುಲ ರಸ್ತೆ ಅಭಿವೃದ್ಧಿಗೆ ಸಚಿವ ಸಂಪುಟ ₹307 ಕೋಟಿ ಅನುಮೋದನೆ ನೀಡಿದೆ. ಇದರೊಂದಿಗೆ, ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳ ಮೂಲಸೌಕರ್ಯಕ್ಕಾಗಿ ₹585 ಕೋಟಿ ಬಿಡುಗಡೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. 

Read Full Story

01:32 PM (IST) Dec 12

ಬಾಲಯ್ಯ ಮಾಸ್ ಶೋ, ಆಕ್ಷನ್ ಡೋಸ್ ಜಾಸ್ತಿ - ಇಲ್ಲಿದೆ ಅಘೋರನ ಕಥೆ 'ಅಖಂಡ 2' ಸಂಪೂರ್ಣ ವಿಮರ್ಶೆ!

ಬೋಯಪಟಿ ಶ್ರೀನು ನಿರ್ದೇಶನದಲ್ಲಿ ಬಾಲಯ್ಯ ಮತ್ತು ಗಾಡ್ ಆಫ್ ಮಾಸಸ್ ಎಂಬ ಹೆಸರುಗಳಿಂದ ನಂದಮೂರಿ ಬಾಲಕೃಷ್ಣ ನಟಿಸಿರುವ 'ಅಖಂಡ 2' ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಅದರ ವಿಮರ್ಶೆಯನ್ನು ನೋಡೋಣ.

Read Full Story

01:11 PM (IST) Dec 12

Bigg Boss - ಅಶ್ವಿನಿ ಗೌಡ ಮಾತಿಗೆ ಮಾಳು ಕೂದಲಿಗೆ ಬಿತ್ತು ಕತ್ತರಿ! ಈ ವಾರ ಮನೆಯಿಂದ ಹೋಗೋರು ಯಾರು?

ಬಿಗ್​ಬಾಸ್​ 74ನೇ ದಿನಕ್ಕೆ ಕಾಲಿಟ್ಟಿದ್ದು, ಟಾಸ್ಕ್​ಗಳು ತೀವ್ರಗೊಂಡಿವೆ. ಅಶ್ವಿನಿ ಗೌಡ ಅವರ ಸಲಹೆಯಂತೆ, ಟಾಸ್ಕ್​ವೊಂದರ ಭಾಗವಾಗಿ ಸ್ಪರ್ಧಿ ಮಾಳು ಅವರ ಕೂದಲಿಗೆ ಕತ್ತರಿ ಬಿದ್ದಿದೆ. ಈ ವಾರ ಏಳು ಮಂದಿ ನಾಮಿನೇಟ್ ಆಗಿರುವ ನಡುವೆಯೇ ಮಾಳು ಅವರ ಈ ಹೊಸ ಲುಕ್​ ಗಮನ ಸೆಳೆದಿದೆ.
Read Full Story

12:54 PM (IST) Dec 12

U19 Asia Cup - ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!

12ನೇ ಆವೃತ್ತಿಯ ಅಂಡರ್-19 ಏಷ್ಯಾಕಪ್ ಟೂರ್ನಿಯಲ್ಲಿ, ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಯುಎಇ ವಿರುದ್ಧ ಕೇವಲ 56 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ. 9 ಸಿಕ್ಸರ್‌ಗಳೊಂದಿಗೆ 163 ರನ್ ಬಾರಿಸಿದ ಅವರು, 10 ದಿನಗಳ ಅಂತರದಲ್ಲಿ ಎರಡನೇ ಶತಕ ಸಿಡಿಸಿ ತಮ್ಮ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದಾರೆ.
Read Full Story

12:53 PM (IST) Dec 12

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ವಿದೇಶದಿಂದ ಅಕ್ರಮವಾಗಿ ಎರಡು ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಪ್ರೈಮೇಟ್‌ಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.  ಈ ಅಪರೂಪದ ಜೀವಿಗಳನ್ನು ತಕ್ಷಣವೇ ಮರಳಿ ಬ್ಯಾಂಕಾಕ್‌ಗೆ ಕಳುಹಿಸಲಾಗಿದೆ.

Read Full Story

12:52 PM (IST) Dec 12

ಡೆವಿಲ್ ಇನ್ ಟ್ರಬಲ್ - ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳಿ ಪರವಾನಗಿ ಪಡೆದ ಎರಡು ಶಸ್ತ್ರಾಸ್ತ್ರಗಳಿದ್ದವು. ಬೆಂಗಳೂರು ಪೊಲೀಸರು ಪಿಸ್ತೂಲನ್ನು ವಶಪಡಿಸಿಕೊಂಡಿದ್ದರೂ, ಮೈಸೂರಿನಲ್ಲಿ ಪರವಾನಗಿ ಪಡೆದ .22 mm ರೈಫಲ್ ಮತ್ತು ಬುಲೆಟ್‌ಗಳು ಇನ್ನೂ ಸೀಜ್ ಆಗಿಲ್ಲ.

Read Full Story

12:42 PM (IST) Dec 12

'ನಾನ್​ ಬಂದಾಯ್ತು, ನಿಮ್​ ಕಥೆ ಮುಗೀತು, ಬಿಲದಲ್ಲಿ ಇದ್ರೂ ಬಿಡಲ್ಲ '! ದರ್ಶನ್​ ಫೋಟೋ ಹಿಡಿದ ಮಹಿಳೆ ಯಾರೀಕೆ?

ನಟ ದರ್ಶನ್ ಜೈಲಿನಲ್ಲಿದ್ದರೂ ಅವರ 'ದಿ ಡೆವಿಲ್' ಚಿತ್ರ ಬಿಡುಗಡೆಯಾಗಿದೆ. ಈ ನಡುವೆ, ದರ್ಶನ್ ಫೋಟೋ ಹಿಡಿದ ಮಹಿಳೆಯೊಬ್ಬರು ದೇವಾಲಯದ ಮುಂದೆ ನಿಂತು, ಹೆಣ್ಣುಮಕ್ಕಳನ್ನು ರಕ್ಷಿಸುವುದಾಗಿ ಮತ್ತು ಕೆಲವರ ಬಂಡವಾಳ ಬಯಲು ಮಾಡುವುದಾಗಿ ನಿಗೂಢವಾಗಿ ಎಚ್ಚರಿಕೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.
Read Full Story

More Trending News