ಚೀನಿಯರಿಗೆ ಲಂಚ ಪ್ರಕರಣ, ಕಾರ್ತಿ ಚಿದಂಬರಂ ವಿರುದ್ಧದ ತೀರ್ಪು ಕಾಯ್ದಿರಿಸಿದ ಕೋರ್ಟ್!

Published : Feb 23, 2025, 06:20 PM ISTUpdated : Feb 23, 2025, 07:16 PM IST
ಚೀನಿಯರಿಗೆ ಲಂಚ ಪ್ರಕರಣ, ಕಾರ್ತಿ ಚಿದಂಬರಂ ವಿರುದ್ಧದ ತೀರ್ಪು ಕಾಯ್ದಿರಿಸಿದ ಕೋರ್ಟ್!

ಸಾರಾಂಶ

ಚೀನಾ ವೀಸಾ ಹಗರಣದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ತಡೆ ಕೋರಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯವು ಮಾರ್ಚ್ 5 ರಂದು ನೀಡಲಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ವಾದಗಳನ್ನು ಆಲಿಸಿ ಆದೇಶವನ್ನು ಕಾಯ್ದಿರಿಸಿದ್ದಾರೆ. 2011 ರಲ್ಲಿ ನಡೆದ ವೀಸಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಕಾರ್ತಿ ವಿರುದ್ಧ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಚೀನಾದ ವೀಸಾ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ತಡೆ ಕೋರಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ನ್ಯಾಯಾಲಯವು ಮಾರ್ಚ್ 5 ರಂದು ತನ್ನ ಆದೇಶವನ್ನು  ನೀಡುವ ನಿರೀಕ್ಷೆ ಇದೆ

ಕಾರ್ತಿ ಅವರ ಅರ್ಜಿಯ ಮೇಲಿನ ವಾದಗಳನ್ನು ಆಲಿಸಿದ ನಂತರ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಶನಿವಾರ ಆದೇಶವನ್ನು ಕಾಯ್ದಿರಿಸಿದರು. ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಇಲ್ಲದ ಕಾರಣ ವಿಚಾರಣೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಚೀನಿಯರಿಗೆ ವೀಸಾ ಕೊಡಿಸಲು ಲಂಚ : ಚಿದಂಬರಂ ಪುತ್ರನ ವಿರುದ್ಧ ಸಿಬಿಐ ಚಾರ್ಜ್‌ಶೀಟ್

2011 ರಲ್ಲಿ 263 ಚೀನೀ ಪ್ರಜೆಗಳಿಗೆ ವೀಸಾ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ED) ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿತ್ತು . ಆ ಸಮಯದಲ್ಲಿ ಅವರ ತಂದೆ ಪಿ. ಚಿದಂಬರಂ ಕೇಂದ್ರ ಗೃಹ ಸಚಿವರಾಗಿದ್ದರು.

ಪಂಜಾಬ್ ರಾಜ್ಯದಲ್ಲಿ ಟಿಎಸ್‌ಪಿಎಲ್ ಕಂಪನಿಯ ಉಷ್ಣ ವಿದ್ಯುತ್ ಸ್ಥಾವರ ಯೋಜನೆಯ ಕೆಲಸಗಳನ್ನು ಮಾಡಲು ಚೀನಾ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಈ ಯೋಜನೆಗೆ ಸಂಬಂಧಿಸಿದಂತೆ ಚೀನಿಯರಿಗೆ ವೀಸಾ ಕೊಡಿಸಲು 50 ಲಕ್ಷ ಲಂಚ ಪಡೆದಿದ್ದಾರೆಂಬ ಆರೋಪ ಕಾರ್ತಿ ಮೇಲಿದೆ.

ರಾಹುಲ್ ಗಾಂಧಿಗಿಂತ ಮೋದಿ ಜನಪ್ರಿಯ ಹೇಳಿಕೆ, ಕಾರ್ತಿ ಚಿದಂಬರಂಗೆ ಕಾಂಗ್ರೆಸ್ ನೋಟಿಸ್!

ಇದಾದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಕಾರ್ತಿ ಮತ್ತು ಅವರ ಆಡಿಟರ್ ವಿರುದ್ಧ ಕೇಸ್ ದಾಖಲಿಸಿತ್ತು. ತನ್ನ ವಿರುದ್ಧದ ಕೇಸ್ ರದ್ದು ಕೋರಿ ಕಾರ್ತಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಮಾರ್ಚ್ 5ಕ್ಕೆ ಕೋರ್ಟ್ ಮುಂದೂಡಲಾಗಿದೆ.  

ದೆಹಲಿ ನ್ಯಾಯಾಲಯವು ಮಾರ್ಚ್ 5 ರಂದು ತನ್ನ ತೀರ್ಪನ್ನು ಪ್ರಕಟಿಸಲಿದ್ದು , ರಾಜಕೀಯ ಮತ್ತು ಕಾನೂನು ವಲಯಗಳಲ್ಲಿ ಈ ಪ್ರಕರಣವು ಪ್ರಮುಖ ಚರ್ಚೆಯ ವಿಷಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

CCTVಗಾದ್ರೂ ಸ್ವಲ್ಪ ಮರ್ಯಾದೆ ಕೊಡಿ: ಮನೆಯಲ್ಲಿ ಏನೂ ಸಿಗದೆ ರೊಚ್ಚಿಗೆದ್ದ ಕಳ್ಳ ಬರೆದ ಪತ್ರದಲ್ಲಿ ಏನಿದೆ?
ಸಾಕುನಾಯಿಯ ಅನಾರೋಗ್ಯದಿಂದ ಖಿನ್ನತೆ: ಫಿನಾಯಿಲ್ ಸೇವಿಸಿ ಸೋದರಿಯರಿಬ್ಬರು ಸಾವಿಗೆ ಶರಣು