
ವಾರಾಣಸಿ: ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲಿರುವ ಗ್ಯಾನವಾಪಿ ಮಸೀದಿಗೆ ಕೋರ್ಚ್ ಕಮಿಷನರ್ ತಂಡದ ಸದಸ್ಯರು ಶನಿವಾರ ಭೇಟಿಕೊಟ್ಟಿದ್ದರು. ಆದರೆ ಮುಸ್ಲಿಂ ಸಮುದಾಯದವರ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುಮಾರು 2 ಗಂಟೆಗಳ ಕಾಲ ದೇವಾಲಯದಲ್ಲೇ ಕಾದ ಅಧಿಕಾರಿಗಳು ವಿಡಿಯೋ ಚಿತ್ರೀಕರಣ ಹಾಗೂ ಸಮೀಕ್ಷೆಗೆ ನಡೆಸಲಾಗದೇ ಮರಳಿದ್ದಾರೆ.
ಗ್ಯಾನವಾಪಿ ಮಸೀದಿ ಆವರಣದಲ್ಲಿ ಶೃಂಗಾರ ಗೌರಿ, ಗಣೇಶ ಹಾಗೂ ನಂದಿ ವಿಗ್ರಹಗಳು ಇದ್ದು, ಇವುಗಳ ಪೂಜೆಗೆ ಅವಕಾಶ ನೀಡಬೇಕೆಂದು ವಾರಾಣಸಿ ಸ್ಥಳೀಯ ನ್ಯಾಯಾಲಯದಲ್ಲಿ ಸುಮಾರು 2 ವರ್ಷಗಳ ಹಿಂದೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಚ್ ಸ್ಥಳದ ವಿಡಿಯೋ ಚಿತ್ರೀಕರಣ ಹಾಗೂ ಸಮೀಕ್ಷೆಗೆ ಆದೇಶಿಸಿತ್ತು.
ಪ್ರಸ್ತುತ ಕೋರ್ಚ್ ಕಮಿಷನರ್ ಆಗಿರುವ ಅಜಯ ಕುಮಾರ್ ಮಿಶ್ರಾ ಅವರ ಬದಲಾಗಿ ಬೇರೊಬ್ಬ ಅಧಿಕಾರಿಯನ್ನು ನೇಮಿಸುವಂತೆ ಗ್ಯಾನವಾಪಿ ಮಸೀದಿ ನಿರ್ವಹಣಾ ಸಮಿತಿಯ ಸದಸ್ಯರು ಸೇರಿದಂತೆ ಮುಸ್ಲಿಂ ಸಮುದಾಯವರು ವಾರಾಣಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವನ್ನು ಆಲಿಸಿದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು ಆದೇಶವನ್ನು ಮೇ 9 ರವರೆಗೆ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಚ್ ಮಿಶ್ರಾ ಅವರೊಂದಿಗೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ವಕೀಲರ ತಂಡವನ್ನು ನೇಮಕ ಮಾಡಿತ್ತು. ಆದರೆ ಮುಸ್ಲಿಂ ಸಮುದಾಯದವರ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೇವಾಲಯ ಪ್ರವೇಶಿಸಿದ ಅಧಿಕಾರಿಗಳಿಗೆ ವಿಡಿಯೋ ಚಿತ್ರೀಕರಿಸಲು ಸಾಧ್ಯವಾಗಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ