
ನವದೆಹಲಿ(ಮೇ.19): ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ವಿಷಯವೆಂದು ಬಿಂಬಿಸಲು ಪಾಕಿಸ್ತಾನ ಯತ್ನಿಸುತ್ತಿರುವಾಗಲೇ, ಕಾಶ್ಮೀರ ಭಾರತದ ಆಂತರಿಕ ವಿಚಾರ. ಕಾಶ್ಮೀರದಲ್ಲಿನ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಗೆ ತಾನು ಕೈಜೋಡಿಸುವುದಿಲ್ಲ ಎಂದು ಕುಖ್ಯಾತ ಉಗ್ರಗಾಮಿ ಸಂಘಟನೆ ತಾಲಿಬಾನ್ ಘೋಷಿಸಿದೆ.
ಭಯೋತ್ಪಾದನಾ ಚಟುವಟಿಕೆ ನಿಲ್ಲಿಸಿ; ಪಾಕ್ಗೆ ಎಚ್ಚರಿಕೆ ನೀಡಿದ ಭಾರತೀಯ ವಾಯುಸೇನೆ ಮುಖ್ಯಸ್ಥ!
ಕಾಶ್ಮೀರದಲ್ಲಿ ತಾಲಿಬಾನ್ ಜಿಹಾದಿ ಕೃತ್ಯಕ್ಕೆ ಕೈಜೋಡಿಸುತ್ತಿದೆ ಎಂಬುದು ಸುಳ್ಳು. ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ನಾವು ಮೂಗು ತೂರಿಸುವುದಿಲ್ಲ ಎಂದು ತಾಲಿಬಾನ್ ಸಂಘಟನೆಯ ವಕ್ತಾರ ಸುಹೇಲ್ ಶಹೀನ್ ಸೋಮವಾರ ಸಂಜೆ ಟ್ವೀಟ್ ಮಾಡಿದ್ದಾರೆ.
ಮೊದಲು ಫೇಲ್ ಆದ ನಿನ್ನ ದೇಶ ನೋಡ್ಕೋ: ಕಾಶ್ಮೀರ ಎಂದ ಅಫ್ರಿದಿಗೆ ಬಡಿದ ರೈನಾ!
ಭಾರತಕ್ಕೆ ಸಂಬಂಧಿಸಿದ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ವರದಿಗಳನ್ನು ದೃಢೀಕರಿಸಲು ಭಾರತವು ಪರೋಕ್ಷವಾಗಿ ಕೆಲಸ ಮಾಡಿದ ನಂತರ ತಾಲಿಬಾನ್ ವಕ್ತಾರರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ ಎಂದು ಕಾಬೂಲ್ ಮತ್ತು ದೆಹಲಿ ಮೂಲದ ರಾಜತಾಂತ್ರಿಕರು ಹಿಂದೂಸ್ತಾನ್ ಟೈಮ್ಸ್ಗೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ