
ಶ್ರೀನಗರ(ಜೂ.14): ಜಮ್ಮು- ಕಾಶ್ಮೀರಕ್ಕೆ ಪುನಃ ರಾಜ್ಯದ ಸ್ಥಾನಮಾನ ಕಲ್ಪಿಸುವ ಹಾಗೂ ಚುನಾವಣೆಗಳನ್ನು ನಡೆಸುವ ನಿಟ್ಟಿನಿಂದ ಕೇಂದ್ರ ಸರ್ಕಾರ ರಾಜಕೀಯ ಪಕ್ಷಗಳ ಜೊತೆ ಸದ್ಯದಲ್ಲೇ ಮಾತುಕತೆಯನ್ನು ಆರಂಭಿಸುವ ಸಾಧ್ಯತೆ ಇದೆ.
ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ. ಆದರೆ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಮರಳಿ ಸ್ಥಾಪಿಸುವ ನಿಟ್ಟಿನಿಂದ ರಚನೆಯಾದ 7 ರಾಜಕೀಯ ಪಕ್ಷಗಳನ್ನು ಒಳಗೊಂಡ ಗುಪ್ಕಾರ್ ಮೈತ್ರಿಕೂಟ ಚುನಾವಣೆ ಪ್ರಕ್ರಿಯೆ ಆರಂಭಿಸುವ ನಿಟ್ಟಿನಲ್ಲಿ ಮಾತುಕತೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಸುಳಿವು ನೀಡಿದೆ. ಪ್ರಮುಖ ರಾಜಕೀಯ ಪಕ್ಷ ನ್ಯಾಷನಲ್ ಕಾÜ್ಫರೆನ್ಸ್ ಕೂಡ ಕೇಂದ್ರದ ಜೊತೆಗೆ ಮಾತುಕತೆಗೆ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.
2018ರಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿತ್ತು. ಬಳಿಕ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದುಗೊಳಿಸಿತ್ತು. ತದನಂತರದಲ್ಲಿ ರಾಜ್ಯದ ಸ್ಥಾನಮಾನ ಕಳೆದುಕೊಂಡ ಜಮ್ಮು- ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ