
ಶ್ರೀನಗರ(ಅ. 13) ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ವಾಸನೆ ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಧಾರ್ಮಿಕ ಶಾಲೆಯೊಂದರ ಮೂವರು ಶಿಕ್ಷಕರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಪೊಲೀಸರು ಬಂಧಿಸಿದ ಒಂದು ದಿನದ ನಂತರ ಆತಂಕಕಾರಿ ಮಾಹಿತಿಗಳು ಹೊರಕ್ಕೆ ಬಂದಿವೆ.
ಸಿರಾಜ್-ಉಲೂಮ್ ಇಮಾಮ್ ಸಾಹಿಬ್ (ಶಾಲೆ) ಇದೀಗ ತನಿಖೆಯನ್ನು ಎದುರಿಸಬೇಕಾಗಿದೆ. ಇದೇ ಸಂಸ್ಥೆಯ ಹಳೆ ವಿದ್ಯಾರ್ಥಿ ಸಜ್ಜಾದ್ ಭಟ್ ಎಂಬ 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವುದಕ್ಕೆ ದಾಖಲೆಗಳು ಲಭ್ಯವಾಗಿದೆ.
ಪುಲ್ವಾಮಾ ದಾಳಿ ಮತ್ತು ಸರ್ಜಿಕಲ್ ದಾಳಿ.. ಏನೇನಾಯ್ತು?
ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ನಲವತ್ತು ಜನ ಸೈನಿಕರು ಹುತಾತ್ಮರಾಗಿದ್ದರು. ಇದಾದ ಮೇಲೆ ಉಗ್ರರ ಮೇಲೆ ನಡೆದ ಸರ್ಜಿಕಲ್ ದಾಳಿ ಈಗ ಇತಿಹಾಸ. ಈ ಶಾಲೆಯ ಹದಿಮೂರು ಜನ ಉಗ್ರ ಸಂಘಟನೆಗೆ ಸೇರಿದ್ದಾರೆ ಎನ್ನುವುದರ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ನಿಷೇಧಕ್ಕೆ ಒಳಗಾಗಿರುವ ಜಮಾತೆ ಇ ಇಸ್ಲಾಮಿ ಸಂಘಟನೆ ಜತೆ ಇವರು ಗುರುತಿಸಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ