ಕಾಶ್ಮೀರದ ರಾಜ್ಯ ಸ್ಥಾನಮಾನ ಇಂದು ವಾಪಸ್‌ : ಭಾರೀ ವದಂತಿ

Kannadaprabha News   | Kannada Prabha
Published : Aug 05, 2025, 06:48 AM IST
Kashmir

ಸಾರಾಂಶ

ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ ಮೊಟಕುಗೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಾಜ್ಯದ ಸ್ಥಾನಮಾನ ಮಂಗಳವಾರ ಮರುಸ್ಥಾಪನೆ ಆಗಲಿದೆಯೇ? ಇಂಥದ್ದೊಂದು ವದಂತಿ ದೆಹಲಿ ಮತ್ತು ಜಮ್ಮು ಮತ್ತು ರಾಜಕೀಯ ವಲಯದಲ್ಲಿ ಬಹುದೊಡ್ಡದಾಗಿ ಕೇಳಿಬಂದಿದೆ.

 ನವದೆಹಲಿ: ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ ಮೊಟಕುಗೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಾಜ್ಯದ ಸ್ಥಾನಮಾನ ಮಂಗಳವಾರ ಮರುಸ್ಥಾಪನೆ ಆಗಲಿದೆಯೇ? ಇಂಥದ್ದೊಂದು ವದಂತಿ ದೆಹಲಿ ಮತ್ತು ಜಮ್ಮು ಮತ್ತು ರಾಜಕೀಯ ವಲಯದಲ್ಲಿ ಬಹುದೊಡ್ಡದಾಗಿ ಕೇಳಿಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಬಳಿಕ ಏನೋ ದೊಡ್ಡ ಬೆಳವಣಿಗೆಯ ಸಾಧ್ಯತೆ ಇದೆ ಎನ್ನಲಾಗಿತ್ತು. ಅದರ ಬೆನ್ನಲ್ಲೇ ಸೋಮವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌, ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಗುಪ್ತಚರ ಇಲಾಖೆ ಮುಖ್ಯಸ್ಥರು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ವಿದೇಶಾಂಗ ಸಚಿವ ಜೈಶಂಕರ್‌, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ಕಾಶ್ಮೀರದ ಕುರಿತಾಗಿದ್ದು ಎಂಬ ವದಂತಿ ಹಬ್ಬಿದೆ.

ಆ.5, 2019ರಂದು ಕೇಂದ್ರ ಸರ್ಕಾರವು ಲಡಾಖ್‌ ಮತ್ತು ಜಮ್ಮು ಕಾಶ್ಮೀರವನ್ನು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿತ್ತು. ಇದಕ್ಕೆ ಮಂಗಳವಾರ 6 ವರ್ಷ. ಹೀಗಾಗಿ ಆ.6ರಂದೇ ಕೇಂದ್ರ ಸರ್ಕಾರ ಈ ಕುರಿತು ಘೋಷಣೆ ಮಾಡಬಹುದು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ