ಆಪರೇಷನ್ ಸಿಂಧೂರ ಹಿನ್ನೆಲೆ: ಕಾಶ್ಮೀರ ತೀತ್ವಾಲ್ ಗಡಿಯಲ್ಲಿ ಶಾಂತಿಯುತ ಗಣೇಶ ವಿಸರ್ಜನೆ!

Published : Aug 31, 2025, 08:39 PM IST
Ganesha

ಸಾರಾಂಶ

ಭಾರತ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ಗ್ರಾಮ ತೀತ್ವಾಲ್ ನಲ್ಲಿ ಭಾನುವಾರ ಗಣಪತಿ ವಿಗ್ರಹ ಸಾರ್ವಜನಿಕ ಮೆರವಣಿಗೆ ವಿಜೃಂಭಣೆಯಿಂದ ಶಾಂತಿಯುತವಾಗಿ ಯಶಸ್ವಿಯಾಗಿ ನಡೆಯಿತು.

ಭಾರತ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ಗ್ರಾಮ ತೀತ್ವಾಲ್ ನಲ್ಲಿ ಭಾನುವಾರ ಗಣಪತಿ ವಿಗ್ರಹ ಸಾರ್ವಜನಿಕ ಮೆರವಣಿಗೆ ವಿಜೃಂಭಣೆಯಿಂದ ಶಾಂತಿಯುತವಾಗಿ ಯಶಸ್ವಿಯಾಗಿ ನಡೆಯಿತು. ಗಣೇಶನ ಮಣ್ಣಿನ ಮೂರ್ತಿಯನ್ನು ಬೆಂಗಳೂರಿನ ಶೃಂಗೇರಿ ಶಂಕರಮಠ ದಿಂದ ಒಯ್ದು ಅಲ್ಲಿ ಪ್ರತಿಷ್ಠಾಪಿಸಿದ್ದರು.

ಮುಂಜಾನೆ ಕುಪ್ವಾರಾ ಜಿಲ್ಲಾಧಿಕಾರಿ ಶ್ರೀಕಾಂತ್ ಬಾಳಾ ಸಾಹೇಬ್ ಸೂಸೆ ಮತ್ತು ಭಾರತೀಯ ಸೇನೆಯ ಅನೇಕ ಅಧಿಕಾರಿಗಳ ನಡುವೆ ಜರುಗಿದ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪಂಡಿತರ ವೇದ ಘೋಷಣೆಗಳ ನಡುವೆ ಪೂಜೆ ಆರತಿ ನಂತರ ಜಿಲ್ಲಾಧಿಕಾರಿಗಳು ಖುದ್ದು ಗಣೇಶ ಮೂರ್ತಿಯನ್ನು ಹೊತ್ತು ಗ್ರಾಮದ ಮುಖ್ಯ ರಸ್ತೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಕೂಡಾ ಮೆರವಣಿಗೆಯಲ್ಲಿ ಸಾಗಿದರು.

ಇದಕ್ಕೂ ಮುನ್ನ ಗ್ರಾಮದ ನಡುವೆ ಶೃಂಗೇರಿ ಮಠದ ವತಿಯಿಂದ ನಿರ್ಮಿಸಲಾದ ಶಿಲಾಮಯ ಶಾರದಾ ಮಂದಿರದಲ್ಲಿ ಆಪರೇಶನ್ ಸಿಂಧೂರ ಹಿನ್ನೆಲೆಯಲ್ಲಿ ತಯಾರಿಸಿದ ಮಣ್ಣಿನ ಗಣಪತಿಯನ್ನು ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಲಾಗಿತ್ತು.

ಕಾಶ್ಮೀರಿ ಪಂಡಿತ ಸಮುದಾಯದ ಅನೇಕರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಮೆರವಣಿಗೆಯು ಊರಿನ ಬೀದಿಗಳಲ್ಲಿ ನಡೆದು ಸಾಗಿದ ಮೆರವಣಿಗೆ ಭಾರತ ಪಾಕಿಸ್ತಾನದ ನಡುವೆ ಸಂಪರ್ಕಕ್ಕೆ ಇರುವ ಕ್ರಾಸಿಂಗ್ ಬ್ರಿಡ್ಜ್ ಮೇಲೆ ತೆರಳಿ ಶಾಂತಿ ಮಂತ್ರ ಪಠಣದ ನಂತರ ಜೈ ಹಿಂದ್ ಭಾರತ ಮಾತಾ ಜೈ, ಗಣಪತಿ ಬಪ್ಪ ಮೋರಿಯ, ಜೈ ಗಣೇಶ ಘೋಷಣೆಗಳ ನಡುವೆ ಕಿಶನ್ ಗಂಗಾ ನದಿಯಲ್ಲಿ ವಿಸರ್ಜಿಸಲಾಯಿತು. ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸ್ ಬಿಗಿ ಭದ್ರತೆ ಒದಗಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧಾರ್ಮಿಕ ಪ್ರಾರ್ಥನೆಗೆ ಧ್ವನಿವರ್ಧಕ ಕಡ್ಡಾಯವಲ್ಲ : ಹೈಕೋರ್ಟ್‌
ಭಾರತ ಎಂದಿಗೂ ಶಾಂತಿ ಪರ : ಪುಟಿನ್‌ಗೆ ಮೋದಿ