ಕೇದಾರನಾಥಕ್ಕೆ ತೆರಳಲು ಮೋದಿ ನೆರವು ಕೋರಿದ ಕನ್ನಡಿಗ ಮುಖ್ಯ ಅರ್ಚಕ| ಕರ್ನಾಟಕ ಮೂಲದ ಶ್ರೀ ಭೀಮಾಶಂಕರ ಶಿವಾಚಾರ್ಯರು, ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದಾರೆ
ಡೆಹ್ರಾಡೂನ್(ಏ.15): ಉತ್ತರಾಖಂಡ್ನ ಪ್ರಸಿದ್ಧ ಕೇದಾರನಾಥ ದೇವಸ್ಥಾನದ ಮುಖ್ಯ ಅರ್ಚಕ, ಕರ್ನಾಟಕ ಮೂಲದ ಶ್ರೀ ಭೀಮಾಶಂಕರ ಶಿವಾಚಾರ್ಯರು, ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ, ಏಪ್ರಿಲ್ 29ರಂದು ಕೇದಾರನಾಥ ದೇಗುಲದ ಬಾಗಿಲುಗಳು ತೆರೆಯುವ ವೇಳೆಗೆ ದೇವಸ್ಥಾನಕ್ಕೆ ತೆರಳಲು ನೆರವಾಗಲು ಕೋರಿ ಮುಖ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.
ದೇವಸ್ಥಾನದ ಬಾಗಿಲು ತೆರೆಯುವ ವೇಳೆ ಹಾಗೂ ಬಂಗಾರದ ಕಲಶದ ಮೆರವಣಿಗೆ ವೇಳೆ ದೇಗುಲದ ಮುಖ್ಯ ಅರ್ಚಕ ಇರಲೇಬೇಕು ಎಂಬುದು ಶತಮಾನಗಳ ಹಿಂದಿನಿಂದಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹೀಗಾಗಿ, ರಸ್ತೆ ಮಾರ್ಗವಾಗಿ ಕೇದಾರನಾಥ ದೇವಸ್ಥಾನಕ್ಕೆ ಹೋಗಲು ತನಗೆ ಮತ್ತು ತನ್ನ ಜತೆಗಿನ ಇತರ ನಾಲ್ವರಿಗೆ ವಿಶೇಷ ಅವಕಾಶ ಕಲ್ಪಿಸಬೇಕು ಎಂದು ಅವರು ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ