
ತಿರುವನಂತಪುರ: ಮುಂದಿನ ವರ್ಷದ ಮಾರ್ಚ್ ವೇಳೆಗೆ ಕಸಮುಕ್ತ ರಾಜ್ಯವಾಗಬೇಕು ಎಂಬ ಗುರಿ ಹೊಂದಿರುವ ಕೇರಳ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರಿಗೆ 10 ಸಾವಿರ ರು. ದಂಡ ವಿಧಿಸಲು ನಿರ್ಧರಿಸಿದೆ. ಅಲ್ಲದೇ ಜಲ ಮೂಲಗಳನ್ನು ಕಲುಷಿತಗೊಳಿಸುವುದನ್ನು ಜಾಮೀನು ರಹಿತ ಅಪರಾಧ ಎಂದು ಘೋಷಿಸಲಾಗಿದೆ. ಪಂಚಾಯತ್ ರಾಜ್ ಮತ್ತು ಮುನ್ಸಪಲ್ ಕಾಯ್ದೆಗಳಿಗೆ ತಿದ್ದುಪಡಿ ತರುವ 2 ಸುಗ್ರೀವಾಜ್ಞೆಗಳಿಗೆ ರಾಜ್ಯ ಸಚಿವ ಸಂಪುಟ ಇತ್ತೀಚೆಗೆ ಒಪ್ಪಿಗೆ ಸೂಚಿಸಿದ್ದು, ಇದರಲ್ಲಿ ದಂಡದ ಪ್ರಮಾಣವನ್ನು ಹೆಚ್ಚು ಮಾಡುವ ಪ್ರಸ್ತಾಪ ಮಾಡಲಾಗಿದೆ.
ಈ ಸುಗ್ರೀವಾಜ್ಞೆಗಳು ರಾಜ್ಯದಲ್ಲಿನ ಕಸ ವಿಲೇವಾರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲಿದೆ. 2024ರ ಮಾ.31ರ ವೇಳೆಗೆ ರಾಜ್ಯವನ್ನು ಘನ ತ್ಯಾಜ್ಯ ಮುಕ್ತ (Solid waste free) ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಇದನ್ನು ಸಾಧಿಸುವುದಕ್ಕಾಗಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದ್ದು ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ.
ಬೆಂಗಳೂರು ಕಸ ರಾಮನಗರಕ್ಕೆ ವಿಲೇವಾರಿಯಾಗುವ ಆತಂಕ: ಕಸದಿಂದ ವಿದ್ಯುತ್ ಉತ್ಪಾದನೆ?
100ಕ್ಕೂ ಹೆಚ್ಚು ಜನ ಭಾಗಿಯಾಗುವ ಸಮಾರಂಭಗಳಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಇಂಥ ಕಾರ್ಯಕ್ರಮ ಆಯೋಜಿಸುವವರು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಸಚಿವ ಎಂ.ಬಿ.ರಾಜೇಶ್ (M B Rajesh)ಹೇಳಿದ್ದಾರೆ. ಈ ಮೊದಲು ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕಿದರೆ ದಂಡದ ಪ್ರಮಾಣ 250 ರು. ಇತ್ತು. ಇದನ್ನು 10 ಸಾವಿರ ರು.ಗೆ ಏರಿಕೆ ಮಾಡಲಾಗಿದೆ.
ಕಸದಿಂದ ಗೊಬ್ಬರ ತಯಾರಿಸುವ ಯಂತ್ರಗಳಿಗೆ ಚಾಲನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ