ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್‌ ತೆಗೆಯುವ ಪದ್ಧತಿ ರದ್ದು? ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ

Published : Jan 02, 2025, 07:23 AM IST
ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್‌ ತೆಗೆಯುವ ಪದ್ಧತಿ ರದ್ದು? ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ

ಸಾರಾಂಶ

ಕೇರಳದಲ್ಲಿ ದೇವಸ್ಥಾನ ಪ್ರವೇಶಿಸುವಾಗ ಪುರುಷರು ಮೇಲಂಗಿ ತೆಗೆಯುವುದನ್ನು ಕಡ್ಡಾಯಗೊಳಿಸುವ ಪದ್ಧತಿಯನ್ನು ರದ್ದುಗೊಳಿಸಲು ಕೇರಳ ದೇವಸ್ವಂ ಮಂಡಳಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. 

ತಿರುವನಂತಪುರ (ಜ.02): ಕೇರಳದಲ್ಲಿ ದೇವಸ್ಥಾನ ಪ್ರವೇಶಿಸುವಾಗ ಪುರುಷರು ಮೇಲಂಗಿ ತೆಗೆಯುವುದನ್ನು ಕಡ್ಡಾಯಗೊಳಿಸುವ ಪದ್ಧತಿಯನ್ನು ರದ್ದುಗೊಳಿಸಲು ಕೇರಳ ದೇವಸ್ವಂ ಮಂಡಳಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಕೇರಳ ಸರ್ಕಾರದ ಈ ನಿರ್ಧಾರ ಭಾರೀ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಮಂಗಳವಾರ ಶಿವಗಿರಿ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಠದ ಮುಖ್ಯಸ್ಥ ಸಚ್ಚಿದಾನಂದ ಸ್ವಾಮಿ, ‘ಪುರುಷರು ಜನಿವಾರ ಧರಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಮೇಲಂಗಿ ತೆಗೆಯಲು ಹೇಳಲಾಗುತ್ತಿತ್ತು. 

ಇದು ಸಾಮಾಜಿಕ ಪಿಡುಗು. ಇನ್ನಾದರೂ ಈ ಪದ್ಧತಿ ಕೊನೆಗೊಳಿಸಬೇಕಿದೆ’ ಎಂದು ಆಗ್ರಹಿಸಿದ್ದರು. ಜತೆಗೆ, ಶ್ರೀ ನಾರಾಯಣ ಗುರುಗಳಿಗೆ ಸಂಬಂಧಿಸಿದ ದೇವಸ್ಥಾನಗಳಲ್ಲಿ ಇದನ್ನು ನಿಷೇಧಿಸಲಾಗುವುದು ಎಂದೂ ಹೇಳಿದ್ದರು. ಅದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಶ್ರೀಗಳ ಹೇಳಿಕೆ ಬೆಂಬಲಿಸಿದ್ದರು. ಅದರ ಬೆನ್ನಲ್ಲೇ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಿಣರಾಯಿ ವಿಜಯನ್‌, ‘ಇಂದು ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ನನ್ನನ್ನು ಭೇಟಿಯಾಗಿ ಮೇಲಂಗಿ ತೆಗೆಯುವ ಪದ್ಧತಿ ನಿಷೇಧಿಸುವ ನಿರ್ಧಾರ ಕೈಗೊಳ್ಳುವ ಬಗ್ಗೆ ತಿಳಿಸಿದರು. 

ನನಗೂ ಇದು ಉತ್ತಮ ಸಲಹೆಯಂತೆ ಕಂಡಿತು’ ಎಂದರು. ಆದರೆ ರಾಜ್ಯದಲ್ಲಿರುವ 5 ದೇವಸ್ವಂ ಮಂಡಳಿಗಳಾದ ಗುರುವಾಯೂರು, ತಿರುವಾಂಕೂರು, ಮಲಬಾರ್‌, ಕೊಚ್ಚಿನ್‌ ಮತ್ತು ಕೂಡಲಮಾಣಿಕ್ಯಂ ಪೈಕಿ ಯಾವ ಮಂಡಳಿಯವರು ಈ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ವಿಜಯನ್‌ ಸ್ಪಷ್ಟಪಡಿಸಿಲ್ಲ. ಈ ನಡುವೆ ದೇಗುಲ ಪ್ರವೇಶದ ವೇಳೆ ಮೇಲಂಗಿ ತೆಗೆವ ಕುರಿತು ಚರ್ಚೆಗೆ ಬಿಜೆಪಿ ಆಗ್ರಹಿಸುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ‘ಇದನ್ನು ಚರ್ಚಿಸುವುದು ಮಂಡಳಿಗಳ ಕೆಲಸ, ಸರ್ಕಾರದ್ದಲ್ಲ’ ಎಂದು ವಿಜಯನ್‌ ತಿರುಗೇಟು ನೀಡಿದರು.

ದೇಗುಲದಲ್ಲಿ ಶರ್ಟ್‌ ತೆಗೆವ ಪದ್ಧತಿ ಸಾಮಾಜಿಕ ಅನಿಷ್ಠ: ಶಿವಗಿರಿ ಶ್ರೀ

ಸಾಮಾಜಿಕ ಅನಿಷ್ಠ: ಕೇರಳದ ಹಲವು ದೇವಾಲಯಗಳಲ್ಲಿ ದೇಗುಲ ಪ್ರವೇಶಕ್ಕೂ ಮುನ್ನ ಪುರುಷರು ಮೇಲಂಗಿ ತೆಗೆಯುವ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಕರೆ ನೀಡಿದ್ದಾರೆ. ಶ್ರೀಗಳ ಮಾತಿಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಕೂಡ ಬೆಂಬಲ ಸೂಚಿಸಿದ್ದು, 'ಸ್ವಾಮೀಜಿ ತಮ್ಮ ಮಾತಿನ ಮೂಲಕ ಸಾಮಾಜಿಕ ಸುಧಾರಣೆಯ ಸಂದೇಶ ಸಾರಿದ್ದಾರೆ' ಎಂದಿದ್ದಾರೆ. 'ದೇವಾಲಯ ಗಳಿಗೆ ಪ್ರವೇಶಿಸುವ ಸಂದರ್ಭದಲ್ಲಿ ಪುರುಷರಿಗೆ ಶರ್ಟ್ ತೆಗೆಯುವಂತೆ ಹೇಳುವುದು ನಾರಾಯಣ ಗುರುಗಳ ಸಂದೇಶಕ್ಕೆ ವಿರುದ್ಧವಾಗಿದೆ. ಇದು ಸಾಮಾಜಿಕ ಅನಿಷ್ಟ. ಇದನ್ನು ತೆಗೆದು ಹಾಕಬೇಕಾಗಿದೆ. ದೇವಾಲಯಗಳಿಗೆ ಪ್ರವೇಶಿಸುವವರು ಪನೂಲ್ (ಹಿಂದೂಮೇಲ್ಪಾತಿಯವರು ಧರಿಸುವ ಪವಿತ್ರ ದಾರ) ಧರಿಸುತ್ತಾರೆಯೇ ಎಂದು ಪರೀಕ್ಷಿಸಲು ಮೇಲಂಗಿ ತೆಗೆಯುವ ಅಭ್ಯಾಸ ರೂಢಿಯಾಯಿತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?
Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು