
ತಿರುವನಂತಪುರಂ [ಮಾ.20]: ಮಾರಕ ಕೊರೋನಾ ತಡೆಗೆ ಗಮನಾರ್ಹ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇರಳ ಸರ್ಕಾರ, ಗುರುವಾರ ವ್ಯಾಧಿ ನಿಯಂತ್ರಣಕ್ಕೆ 20 ಸಾವಿರ ಕೋಟಿ ರುಪಾಯಿಗಳ ವಿಶೇಷ ಪ್ಯಾಕೇಕ್ ಘೋಷಣೆ ಮಾಡಿದೆ.
ಇದರಡಿ ಎಪಿಎಲ್ ಬಿಪಿಎಲ್ ವ್ಯತ್ಯಾಸ ಇಲ್ಲದೇ ಎಲ್ಲರಿಗೂ ಒಂದು ತಿಂಗಳ ಆಹಾರ ಧಾನ್ಯ ಉಚಿತವಾಗಿ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ. ಸಭೆ ಬಳಿಕ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಒಟ್ಟಿಗೆ ಕುಳಿತು ಪತ್ರಿಕಾಗೋಷ್ಟಿನಡೆಸಿದ್ದು ವಿಶೇಷವಾಗಿತ್ತು.
ಕಾಸರಗೋಡು ಪ್ರಯಾಣಿಕರ ಗಡಿ ದಾಟಿಸಲು ವಿಶೇಷ ಬಸ್...
- ಒಂದು ತಿಂಗಳ ಆಹಾರ ಧಾನ್ಯ ಉಚಿತ
- ನರೇಗಾ ಕಾರ್ಮಿಕರಿಗೆ 2000 ಕೋಟಿ
-ವಿವಿಧ ಪಿಂಚಣಿಗಳನ್ನು ಎರಡು ತಿಂಗಳು ಮೊದಲೇ ಪಾವತಿಸುವುದು
-ಸಾಮಾಜಿಕ ಭದ್ರತಾ ಪಿಂಚಣಿ ಪಡೆಯದ ಕುಟುಂಬಗಳಿಗೆ 1000 ರು.
-ಏಪ್ರಿಲ್ನಲ್ಲಿ ಇಂದಿರಾ ಕ್ಯಾಂಟೀನ್ ಮಾದರಿ 1,000 ರೆಸ್ಟೋರೆಂಟ್
- ಮುಂದಿನ ಮೂರು ತಿಂಗಳು ಬಸ್ಗಳಿಗೆ ತೆರಿಗೆ ಮನ್ನಾ
- ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಸಲು ಒಂದು ತಿಂಗಳ ರಜೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ