Palakkad mangalore train row: ಮೈಸೂರು ವಿಭಾಗಕ್ಕೆ ಮಂಗಳೂರು ರೈಲು ಸೇರಿದ್ರೆ ಕಾಂಗ್ರೆಸ್‌ಗೇನು ಕಷ್ಟ?: ಆರ್‌ಸಿ

Kannadaprabha News   | Kannada Prabha
Published : Aug 25, 2026, 11:32 AM IST
BJP State Chief Rajeev Chandrasekhar Palakkad mangalore train row

ಸಾರಾಂಶ

ಕೇರಳದ ಪಾಲಕ್ಕಾಡ್ ರೈಲ್ವೆ ವಿಭಾಗದಿಂದ ಮಂಗಳೂರನ್ನು ಬೇರ್ಪಡಿಸಿ ಮೈಸೂರು ವಿಭಾಗಕ್ಕೆ ಸೇರಿಸುವ ಪ್ರಸ್ತಾಪ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸಮರ್ಥಿಸಿಕೊಂಡಿದ್ದಾರೆ. ಇದು ಆಡಳಿತಾತ್ಮಕ ನಿರ್ಧಾರ, ಯುಡಿಎಫ್ ಸರ್ಕಾರ ತನ್ನ ವೈಫಲ್ಯ ಮುಚ್ಚಲು ವಿವಾದ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

ನವದೆಹಲಿ (ಆ.25): ಕೇರಳಂನ ಪಾಲಕ್ಕಾಡ್‌ ರೈಲ್ವೆ ವಿಭಾಗವನ್ನು ವಿಭಜಿಸಿ ಅದರ ವ್ಯಾಪ್ತಿಯಲ್ಲಿದ್ದ ಮಂಗಳೂರನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇರಳ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ರಾಜೀವ್‌ ಚಂದ್ರಶೇಖರ್‌ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಅಲ್ಲದೆ ರಾಜ್ಯದ ಯುಡಿಎಫ್‌ ಸರ್ಕಾರ 100 ದಿನಗಳ ಆಡಳಿತದಲ್ಲಿ ವೈಫಲ್ಯ ಕಂಡಿದೆ. ಇದರಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಈ ವಿಷಯದಲ್ಲಿ ಕಾಂಗ್ರೆಸ್‌ ವಿವಾದ ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.

ರೈಲ್ವೆ ಇಲಾಖೆಯ ಪ್ರಸ್ತಾಪ ಆಡಳಿತಾತ್ಮಕ ಉದ್ದೇಶದ್ದು

ಸೋಮವಾರ ದಿಲ್ಲಿಯಲ್ಲಿ ಮಾತನಾಡಿದ ರಾಜೀವ್‌ ಚಂದ್ರಶೇಖರ್‌, ‘ರೈಲ್ವೆ ಇಲಾಖೆಯ ಪ್ರಸ್ತಾಪ ಆಡಳಿತಾತ್ಮಕ ಉದ್ದೇಶದ್ದು. ಇದರಿಂದ ಕೇರಳಂ ಆತಂಕ ಪಡಬೇಕಾದ ಯಾವುದೇ ಪ್ರಮೇಯವೂ ಇಲ್ಲ. ರೈಲ್ವೆ, ರಾಷ್ಟ್ರೀಯ ಸಂಸ್ಥೆಯಾಗಿದೆ. ಹೀಗಿರುವಾಗ ಮಂಗಳೂರನ್ನು ಪಾಲಕ್ಕಾಡ್‌ ವಿಭಾಗದಿಂದ ಬೇರ್ಪಡಿಸಿ, ಕರ್ನಾಟಕದಲ್ಲೇ ಇರುವ ಮೈಸೂರು ವಿಭಾಗಕ್ಕೆ ಸೇರಿಸಿದರೆ ಅದರಿಂದ ಕಾಂಗ್ರೆಸ್‌ಗೆ ಏನು ಸಮಸ್ಯೆ?’ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನಿಂದ ರಾಜಕೀಯ ವಿವಾದ

ಜೊತೆಗೆ, ‘ಮಂಗಳೂರು ಈಗಾಗಲೇ ಮೂರು ರೈಲ್ವೆ ವಿಭಾಗಗಳೊಂದಿಗೆ ಸಂಪರ್ಕ ಹೊಂದಿದೆ. ಹೀಗಾಗಿರುವ ಮುಖ್ಯಮಂತ್ರಿ ವಿ.ಡಿ,ಸತೀಶನ್‌, ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ಇದನ್ನು ರಾಜಕೀಯ ವಿವಾದ ಮಾಡುತ್ತಿರುವುದೇಕೆ? ರಾಜ್ಯದಲ್ಲಿ ಯುಡಿಎಫ್‌ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳ ತುಂಬಿವೆ. ನೀಡಿದ ಭರವಸೆಗಳನ್ನು ಅದು ಈಡೇರಿಸಿಲ್ಲ. ಹೀಗಾಗಿ ಈ ವಿಷಯದಿಂದ ಜನರ ಗಮನ ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ಅವರು ಪಾಲಕ್ಕಾಡ್ ರೈಲ್ವೆ ವಿಭಾಗ ವಿಭಜನೆ ವಿವಾದ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಇದೇ ವೇಳೆ, ‘ರೈಲ್ವೆ ವಿಭಾಗ ವಿಭಜನೆಯಿಂದ ಕೇರಳದ ರೈಲ್ವೆ ಅಭಿವೃದ್ಧಿ ಯೋಜನೆಯ ಹೂಡಿಕೆಗೆ ಯಾವುದೇ ಅಡ್ಡಿ ಆಗುವುದಿಲ್ಲ. ಈಗಾಗಲೇ ರಾಜ್ಯಕ್ಕೆ ರೂಪಿಸಲಾಗಿರುವ ಎಲ್ಲಾ ಯೋಜನೆಗಳನ್ನು ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ. ನರೇಂದ್ರ ಮೋದಿ ಸರ್ಕಾರದ ಪರವಾಗಿ ನಾನು ಈ ಭರವಸೆ ನೀಡುತ್ತೇನೆ. ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ ಜಾರಿಗೊಳಿಸಬೇಕಾದ ಯೋಜನೆಗಳ ಬಗ್ಗೆ ಈಗಾಗಲೇ ನೀಲನಕ್ಷೆ ಸಿದ್ದಗೊಂಡಿದೆ. ಅದನ್ನು ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ. ರೈಲ್ವೆ ವಲಯ ವಿಭಜನೆಯಿಂದ ರಾಜ್ಯದ ಯಾವುದೇ ಯೋಜನೆ ಅಡ್ಡಿಯಾಗದು ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 7 ನಿಲ್ದಾಣಗಳನ್ನು ಆಧುನೀಕರಣಗೊಳಿಸಲಾಗಿದೆ, ಹೊಸ ವಂದೇ ಭಾರತ್‌ ರೈಲುಗಳ ಸೇವೆಯನ್ನು ರಾಜ್ಯಕ್ಕೆ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲದ ಹೊರತಾಗಿಯೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಈ ಸವಲತ್ತುಗಳನ್ನು ಕಲ್ಪಿಸಿಲ್ಲವೇ’ ಎಂದು ರಾಜೀವ್‌ ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪೆರೋಲ್! 2020-26 ರವರೆಗೆ ಎಷ್ಟು ಬಾರಿ ಜೈಲಿನಿಂದ ಹೊರಬಂದಿದ್ದಾರೆ ಗೊತ್ತಾ?
50 ವರ್ಷದ ಅವಧಿಗೆ ಹುಬ್ಬಳ್ಳಿ ಸೇರಿ 11 ಏರ್‌ಪೋರ್ಟ್‌ ಖಾಸಗಿಗೆ ನೀಡಲು ನಿರ್ಧಾರ Hubballi