ಕೇರಳ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ, ಐವರ ಸ್ಥಿತಿ ಚಿಂತಾಜನಕ!

Published : Oct 29, 2023, 11:48 PM ISTUpdated : Oct 30, 2023, 12:27 PM IST
ಕೇರಳ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ, ಐವರ ಸ್ಥಿತಿ ಚಿಂತಾಜನಕ!

ಸಾರಾಂಶ

ಕೇರಳ ಕಳಮಶೇರಿಯ ಕನ್ವೇಶನ್ ಹಾಲ್‌ನಲ್ಲಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 2ಕ್ಕೆ ಏರಿಕೆಯಾಗಿದೆ. ಐವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಸಣ್ಣ ಪುಟ್ಟ ಗಾಯಗೊಂಡ ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  

ಎರ್ನಾಕುಲಂ(ಅ.29): ಕೇರಳದಲ್ಲಿನ ಬಾಂಬ್ ಸ್ಫೋಟದ ತನಿಖೆ ಆರಂಭಗೊಂಡಿದೆ. ಕೇಂದ್ರದ ತನಿಖಾ ಸಂಸ್ಥೆ ತಂಡ ಕೇರಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದೆ. ಕಳಮಶೇರಿಯ ಕನ್ವೆಶನ್ ಹಾಲ್‌ನಲ್ಲಿ ನಡೆದ ಸ್ಫೋಟದಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಹಲವು ಸ್ಥಿತಿ ಗಂಭೀರವಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 

ಸ್ಪೋಟದಲ್ಲಿ ಗಾಯಗೊಂಡ 41 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐವರು ಸೇರಿದಂತೆ ಒಟ್ಟ 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 12 ವರ್ಷದ ಬಾಲಕಿ ಹಾಗೂ 53 ವರ್ಷದ ಮಹಿಳೆ ಶೇಕಡಾ 95 ರಷ್ಟು ಸುಟ್ಟ ಗಾಯಗಳಿಂದ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ.

ಕೇರಳ ಸ್ಫೋಟದ ಹೊಣೆಹೊತ್ತು ಪೊಲೀಸರಿಗೆ ಶರಣಾದ ಶಂಕಿತ, ಪ್ರಕರಣಕ್ಕೆ ಟ್ವಿಸ್ಟ್!

ಸಹನೆಯನ್ನು ಗಳಿಸಿಕೊಳ್ಳುವುದರ ಕುರಿತಾಗಿ ಕೇರಳದಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿಯೇ ಬಾಂಬ್‌ ಸ್ಫೋಟ ಸಂಭವಿಸಿತ್ತು. ಸಹನೆಯ ಕುರಿಯಾಗಿ ತರಬೇತಿ ನೀಡಲು ಕಲಮಶ್ಶೇರಿಯಲ್ಲಿ 3 ದಿನಗಳ ಅಂತಾರಾಷ್ಟ್ರೀಯ ಕ್ರಿಶ್ಚಿಯನ್‌ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲ ದಿನ ಎಲ್ಲರೂ ಪ್ರಾರ್ಥನೆ ನಡೆಸುತ್ತಿದ್ದ ಸಮಯದಲ್ಲೇ ಸ್ಪೋಟ ಸಂಭವಿಸಿದೆ. ಈ ವಿಚಾರ ಸಂಕಿರಣವನ್ನು ಪ್ರಮುಖವಾಗಿ ಜಗತ್ತಿನಲ್ಲಿ ಸಹನೆ ಕಡಿಮೆಯಾಗುತ್ತಿರುವ ಕಾರಣ ಹಲವು ವಿಧ್ವಂಸಕ ಕೃತ್ಯಗಳು ನಡೆಯುತ್ತಿದ್ದು ಇದನ್ನು ತಡೆಗಟ್ಟುವ ಉದ್ದೇಶದಿಂದ ಸಹನೆಯನ್ನು ಬೆಳೆಸುವ ಸಲುವಾಗಿ ಏರ್ಪಡಿಸಲಾಗಿ್ತು.

ಕೇರಳದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದ ಬಳಿಕ ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌, ಕಾಂಗ್ರೆಸ್‌ ಮತ್ತು ಸಿಪಿಎಂನ ಅತಿಯಾದ ಓಲೈಕೆ ರಾಜಕಾರಣಕ್ಕೆ ಇತರ ಮುಗ್ಧ ಜನರು ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬಾಂಬ್ ಸ್ಫೋಟದಿಂದ ಅಲ್ಲ, ಬೆಂಕಿಯಿಂದ ಮಹಿಳೆ ಸಾವು: ಸಣ್ಣ ಘಟನೆ ಎಂದು ಬಿಂಬಿಸಲು ಹೊರಟಿತಾ ಕೇರಳ?

‘ಇದರ ಬಗ್ಗೆ ಇತಿಹಾಸ ನಮಗೆ ತಿಳಿಹೇಳಿದೆ. ಕೇರಳವನ್ನು ಲವ್ ಜಿಹಾದ್ ನ ನಾಡನ್ನಾಗಿಸಲು ಹಾಗೂ ದ್ವೇಷವನ್ನು ಹಬ್ಬಿಸಲು ಭಯೋತ್ಪಾದಕ ಹಮಾಸ್ ಸಂಘಟನೆಯನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್/ಸಿಪಿಎಂ/ಯು.ಪಿ.ಎ ಮೈತ್ರಿಕೂಟದ ಲಜ್ಜೆಗೆಟ್ಟ ತುಷ್ಟೀಕರಣದ ರಾಜಕಾರಣಕ್ಕೆ ನಾಚಿಕೆಯಾಗಬೇಕು. ಇದು ಬೇಜವಾಬ್ದಾರಿ ಹುಚ್ಚು ರಾಜಕಾರಣದ ಪರಮಾವಧಿ, ಇದನ್ನು ಸಾಕು ಮಾಡಿ’ ಎಂದು ಅವರು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು