ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ 24 ವರ್ಷದ ಯುವಕ ನಿಫಾ ವೈರಸ್‌ಗೆ ಬಲಿ, ಎಲ್ಲೆಡೆ ಅಲರ್ಟ್!

Published : Sep 15, 2024, 07:43 PM IST
ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ 24 ವರ್ಷದ ಯುವಕ ನಿಫಾ ವೈರಸ್‌ಗೆ ಬಲಿ, ಎಲ್ಲೆಡೆ ಅಲರ್ಟ್!

ಸಾರಾಂಶ

ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್‌ಗೆ ಯುವಕ ಬಲಿಯಾಗಿರುವುದು ಖಚಿತಗೊಂಡಿದೆ. ಆದರೆ ಈ ಯುವಕ ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದ ಅನ್ನೋ ಮಾಹಿತಿಯೂ ಬಯಲಾಗಿದ್ದು, ಆತಂಕ ಹೆಚ್ಚಿಸಿದೆ.

ಮಲಪ್ಪುರಂ(ಸೆ.15) ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು ಮಾತ್ರವಲ್ಲ, 24ರ ಹರೆಯದ ಯುವಕನೋರ್ವ ಬಲಿಯಾಗಿರವುದು ಖಚಿತಗೊಂಡಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ನಿಫಾ ವೈರಸ್‌ನಿಂದ ಯುವಕ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಆದರೆ ಜ್ವರದಿಂದ ಬಳಲುತ್ತಿದ್ದ ಈ ಯುವಕ ಬೆಂಗಳೂರಿನಿಂದ ಕೇರಳದ ಮಲಪ್ಪುರಂಗೆ ತೆರಳಿದ್ದ.ಅಸ್ವಸ್ಥಗೊಂಡು ಆಸ್ಪತ್ರೆ ದಾಖಲಾಗಿದ್ದ ಯುವಕ ಇದೀಗ ನಿಫಾ ವೈರಸ್‌ನಿಂದ ಮೃತಪಟ್ಟಿದ್ದಾನೆ. ನಿಫಾ ವೈರಸ್ ಖಚಿತಗೊಳ್ಳುತ್ತಿದ್ದಂತೆ ಇದೀಗ ಕೇರಳ ಮಾತ್ರವಲ್ಲ ಬೆಂಗಳೂರಿನಲ್ಲಿ ಆತಂಕ ಸೃಷ್ಟಿಯಾಗಿದೆ.

ಕೇರಳದ ಮಲಪ್ಪುರಂ ನಿವಾಸಿಯಾಗಿರುವ ಈ ಯುವಕ ಆರೋಗ್ಯದ ಕಾರಣದಿಂದ ತವರಿಗೆ ಮರಳಿದ್ದ. ಆಸ್ಪತ್ರೆ ದಾಖಲಾಗಿದ್ದ ಯುವಕನ ಮಾದರಿಗಳನ್ನು ಸಂಗ್ರಹಿಸಿ ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇತ್ತ ಚಿಕಿತ್ಸೆ ಮುಂದುವರಿದಿತ್ತು. ಆದರೆ ಸೆಪ್ಟೆಂಬರ್ 9 ರಂದು ಯುವಕ ಚಿಕಿತ್ಸೆ ಫಲಕಾರಿಯಾಗಿ ಮೃತಪಟ್ಟಿದ್ದ. ಯುವಕನ ಸಾವು ಪ್ರಕರಣ ವೈದ್ಯರ ತಂಡಕ್ಕೆ ಅನುಮಾನ ಮೂಡಿಸಿತ್ತು. ಈ ವೇಳೆ ಮತ್ತೊಮ್ಮೆ ಈತನ ಮಾದರಿ ಸಂಗ್ರಹಿಸಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿತ್ತು.

ಭಾರತದಲ್ಲಿ ಶಂಕಿತ ಮಂಕಿ ಪಾಕ್ಸ್ ಪ್ರಕರಣ ವರದಿ, ಐಸೋಲೇಶನ್‌ನಲ್ಲಿ ರೋಗಿ! 

ಈ ಮಾದರಿಯ ವರದಿ ಬಂದಿದ್ದು, ಯುವಕನಿಗೆ ನಿಫಾ ವೈರಸ್ ಪಾಸಿಟೀವ್ ಎಂದು ದೃಢಪಟ್ಟಿದೆ. ಈ ಮಾಹಿತಿ ಬಯಲಾಗುತ್ತಿದ್ದಂತೆ ಕೇರಳದಲ್ಲಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ನಿಫಾ ವೈರಸ್‌ಗೆ ಯುವಕ ಬಲಿಯಾಗಿರುವುದು ಜನರ ಆತಂಕ ಹೆಚ್ಚಿಸಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ತುರ್ತು ಸಭೆ ಕರೆದು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.

ನಿಫಾ ವೈರ್ ಪ್ರಕರಣದ ಕುರಿತು 16 ಸದಸ್ಯರ ಸಮಿತಿ ರಚಿಸಲಾಗಿದೆ. ಈ ಸಮಿತಿ ಹಾಗೂ ಅಧಿಕಾರಿಗಳು ಯುವಕನ ನೇರ ಸಂಪರ್ಕಿತರನ್ನು ಪತ್ತೆ ಹಚ್ಚಿದೆ. ಬೆಂಗಳೂರಿನಿಂದ ಕೇರಳದ ವರಗೆ 151 ಮಂದಿ ನೇರ ಸಂಪರ್ಕಿತರನ್ನು ಗುರುತಿಸಲಾಗಿದೆ. ಇದೀಗ ಅವರ ಮಾದರಿ ಸಂಗ್ರಹಿಸಲಾಗುತ್ತಿದೆ. ಇಷ್ಟೇ ಅಲ್ಲ ವರದಿ ಬರವು ವರೆಗೂ ಎಲ್ಲರನ್ನೂ ಐಸೋಲೇಶನ್ ಮಾಡಲಾಗುತ್ತದೆ ಎಂದು ವೀಣಾ ಜಾರ್ಜ್ ಹೇಳಿದ್ದಾರೆ.ಹಲವರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಈ ಪೈಕಿ ಐವರಲ್ಲಿ ಸಣ್ಣ ಪ್ರಮಾಣದಲ್ಲಿ ಜ್ವರ, ಮೈಕೈನೋವು, ಶೀತ ಕಾಣಿಸಿಕೊಂಡಿದೆ. 

ಈ ವರ್ಷ ಕೇರಳದಲ್ಲಿ ನಿಫಾ ವೈರಸ್‌ಗೆ ಬಲಿಯಾಗುತ್ತಿರುವ 2ನೇ ಪ್ರಕರಣ ಇದಾಗಿದೆ. ಇದಕ್ಕೂ ಮೊದಲು ಚಿಕಿತ್ಸೆ ಪಡೆಯುತ್ತಿದ್ದ ಬಾಲಕನೊಬ್ಬ ಜುಲೈ 21ರಂದು ನಿಫಾ ವೈರಸ್‌ಗೆ ಬಲಯಾಗಿದ್ದ.

ನಿಫಾ ವೈರಸ್ ಖಚಿತಗೊಂಡ ಬೆನ್ನಲ್ಲೇ ಕೇರಳದ 14ರ ಬಾಲಕ ಸಾವು, ಕರ್ನಾಟಕದಲ್ಲಿ ಅಲರ್ಟ್!
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹಬೂಬಾ...ಹಾಡಿಗೆ ನೃತ್ಯದ ವೇಳೆ ಗೋವಾ ಪಬ್‌ ದುರಂತ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ