ಮಂಡಿ ನೋವಿನ ಚಿಕಿತ್ಸೆ ಪೂರ್ಣ: ಕೇರಳದಿಂದ ದಿಲ್ಲಿಗೆ ರಾಹುಲ್‌ ಗಾಂಧಿ ವಾಪಸ್‌

Published : Jul 30, 2023, 03:16 PM IST
ಮಂಡಿ ನೋವಿನ ಚಿಕಿತ್ಸೆ ಪೂರ್ಣ: ಕೇರಳದಿಂದ ದಿಲ್ಲಿಗೆ ರಾಹುಲ್‌ ಗಾಂಧಿ ವಾಪಸ್‌

ಸಾರಾಂಶ

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ ‘ಕೋಟಕ್ಕಲ್‌ ಆರ್ಯ ವೈದ್ಯ ಶಾಲೆಯಲ್ಲಿ ತಂಗಿದ್ದು ನನಗೆ ಹೊಸ ಚೈತನ್ಯದ ಅನುಭವವಾಗಿದೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಹಂಚಿಕೊಂಡ ಪ್ರೀತಿ ಮತ್ತು ಕಾಳಜಿಗಾಗಿ ಡಾ. ಪಿ.ಎಂ.ವಾರಿಯರ್‌ ಮತ್ತು ಇತರ ವೈದ್ಯ ಹಾಗೂ ಸಿಬ್ಬಂದಿಗಳಿಗೆ ನನ್ನ ಧನ್ಯವಾದಗಳು’ ಎಂದಿದ್ದಾರೆ.

ಮಲಪ್ಪುರಂ (ಜುಲೈ 30, 2023): ಮಂಡಿನೋವಿಗೆ ಕೇರಳದ ಕೋಟಕ್ಕಲ್‌ ಆರ್ಯುವೇದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಚಿಕಿತ್ಸೆ ಶನಿವಾರ ಮುಕ್ತಾಯವಾಗಿದ್ದು, ಅವರು ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ ‘ಕೋಟಕ್ಕಲ್‌ ಆರ್ಯ ವೈದ್ಯ ಶಾಲೆಯಲ್ಲಿ ತಂಗಿದ್ದು ನನಗೆ ಹೊಸ ಚೈತನ್ಯದ ಅನುಭವವಾಗಿದೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಹಂಚಿಕೊಂಡ ಪ್ರೀತಿ ಮತ್ತು ಕಾಳಜಿಗಾಗಿ ಡಾ. ಪಿ.ಎಂ.ವಾರಿಯರ್‌ ಮತ್ತು ಇತರ ವೈದ್ಯ ಹಾಗೂ ಸಿಬ್ಬಂದಿಗಳಿಗೆ ನನ್ನ ಧನ್ಯವಾದಗಳು’ ಎಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಡಿನೋವಿನ ಸಮಸ್ಯೆಗೆ ಒಳಗಾಗಿದ್ದು, ಕೇರಳದಲ್ಲಿ ಆಯುರ್ವೇದಿಕ್‌ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರು ಜುಲೈ 30ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದರು. ಆದರೆ, ಒಂದು ದಿನ ಮೊದಲೇ ಅವರು ಡಿಸ್ಚಾರ್ಜ್‌ ಆಗಿದ್ದಾರೆ ಎಂದು ತಿಳಿದುಬಂದಿದೆ. 

ಇದನ್ನು ಓದಿ: ರಾಹುಲ್ ಗಾಂಧಿಗೆ ಸೂಕ್ತವಾದ ಹುಡುಗಿ ಹುಡುಕಿ ಕೊಡಿ: ಮಹಿಳೆಯರಿಗೆ ಸೋನಿಯಾ ಮನವಿ

ಮಂಡಿನೋವಿನ ಸಮಸ್ಯೆಯಿಂದಾಗಿ ಜುಲೈ 21ರಂದು ರಾಹುಲ್‌ ಕೊಟ್ಟೈಕಲ್‌ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದರು. ಈ ವೇಳೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ಶಾಸಕ ಎ.ಪಿ.ಅನಿಲ್‌ ಕುಮಾರ್‌ ರಾಹುಲ್‌ ಅವರನ್ನು ಸ್ವಾಗತಿಸಿದ್ದರು. ರಾಹುಲ್‌ ಅವರಿಗಾಗಿ ಆಸ್ಪತ್ರೆಯಲ್ಲಿ ಪಿಎಸ್‌ವಿ ನಾಟ್ಯ ಸಂಘದಿಂದ ಕಥಕ್ಕಳಿ ಆಧಾರದ ದಕ್ಷಯಜ್ಞ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಅಲ್ಲದೇ ಈ ವೇಳೆ ಅವರು ಮಲಯಾಳಂ ಕವಿ ವಾಸುದೇವನ್‌ ನಾಯರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಭಾರತ್‌ ಜೋಡೋ ಯಾತ್ರೆಯ ಬಳಿಕ ರಾಹುಲ್‌ ಮಂಡಿನೋವು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಅಧಿಕಾರಕ್ಕಾಗಿ ಸ್ತ್ರೀ ಸ್ವಾಭಿಮಾನದ ಜತೆ ಬಿಜೆಪಿ ಆಟ: ರಾಹುಲ್‌ ಟೀಕೆ; ಬ್ರಿಜ್‌ಭೂಷಣ್‌, ನಗ್ನ ಪರೇಡ್‌ ಘಟನೆ ಉಲ್ಲೇಖ
ನವದೆಹಲಿ: ಅಧಿಕಾರದ ದುರಾಸೆಯಿಂದ ‘ಮಹಿಳೆಯರ ಗೌರವ’ ಹಾಗೂ ದೇಶದ ಸ್ವಾಭಿಮಾನದ ಜತೆ ಬಿಜೆಪಿ ಆಟವಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಆರೋಪಿಸಿದ್ದರು. ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ಅವರು, ಇತ್ತೀಚೆಗೆ ವರದಿಯಾದ ಒಲಿಂಪಿಕ್‌ ಸಮಿತಿ ಮುಖ್ಯಸ್ಥ ಬ್ರಿಜ್‌ಭೂಷಣ್‌ ಪ್ರಕರಣ, ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಸೇರಿದಂತೆ ಹಲವು ಲೈಂಗಿಕ ದೌರ್ಜನ್ಯಗಳ ಘಟನೆಗಳ ವಿಡಿಯೋ ಮಾಂಟೇಜ್‌ ಅನ್ನು ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ ಬಳಿಕ ರಾಹುಲ್‌ ಗಾಂಧಿಗೆ ಮಂಡಿನೋವು: ಕೇರಳದಲ್ಲಿ ಆಯುರ್ವೇದಿಕ್‌ ಚಿಕಿತ್ಸೆ

‘ಮಹಿಳೆಯರನ್ನು ಗೌರವಿಸದ ದೇಶವು ಎಂದಿಗೂ ಪ್ರಗತಿ ಹೊಂದಲು ಸಾಧ್ಯವಿಲ್ಲ. ಅಧಿಕಾರದ ದುರಾಸೆಯಿಂದ ಬಿಜೆಪಿಯು ಮಹಿಳೆಯರ ಗೌರವ ಮತ್ತು ದೇಶದ ಸ್ವಾಭಿಮಾನ - ಎರಡರಲ್ಲೂ ಆಟವಾಡುತ್ತಿದೆ’ ಎಂದು ರಾಹುಲ್‌ ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರ ದೋಷಿಗಳ ಬಿಡುಗಡೆ ಬಗ್ಗೆ ಕೂಡ ವಿಡಿಯೋದಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: ರೈತರನ್ನು ನಾವು ಅರ್ಥ ಮಾಡಿಕೊಂಡ್ರೆ ದೇಶದ ಸಮಸ್ಯೆಗೆ ಪರಿಹಾರ: ರಾಹುಲ್‌ ಗಾಂಧಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ