ವ್ಯಕ್ತಿಯ ಶ್ವಾಸಕೋಶದಲ್ಲಿದ್ದ 4 ಸೆಂ.ಮೀ. ಉದ್ದ ಜಿರಳೆ ಹೊರತೆಗೆದ ಕೇರಳದ ವೈದ್ಯರು

Published : Feb 29, 2024, 02:43 PM IST
ವ್ಯಕ್ತಿಯ ಶ್ವಾಸಕೋಶದಲ್ಲಿದ್ದ 4 ಸೆಂ.ಮೀ. ಉದ್ದ ಜಿರಳೆ ಹೊರತೆಗೆದ ಕೇರಳದ ವೈದ್ಯರು

ಸಾರಾಂಶ

ಕೇರಳದಲ್ಲಿ ವ್ಯಕ್ತಿಯೋರ್ವನ ಶ್ವಾಸಕೋಶದಲ್ಲಿದ್ದ 4 ಸೆಂಟಿ ಮೀಟರ್ ಉದ್ದದ ಜಿರಳೆ ಸೇರಿಕೊಂಡ ಘಟನೆ ನಡೆದಿದ್ದು, ವೈದ್ಯರು ಈ ಜಿರಳೆಯನ್ನು ಹೊರತೆಗೆದು ರೋಗಿಯ ಜೀವ ಉಳಿಸಿದ್ದಾರೆ. 


ಕೊಚ್ಚಿ: ಕೇರಳದಲ್ಲಿ ವ್ಯಕ್ತಿಯೋರ್ವನ ಶ್ವಾಸಕೋಶದಲ್ಲಿದ್ದ 4 ಸೆಂಟಿ ಮೀಟರ್ ಉದ್ದದ ಜಿರಳೆ ಸೇರಿಕೊಂಡ ಘಟನೆ ನಡೆದಿದ್ದು, ವೈದ್ಯರು ಈ ಜಿರಳೆಯನ್ನು ಹೊರತೆಗೆದು ರೋಗಿಯ ಜೀವ ಉಳಿಸಿದ್ದಾರೆ. ಕೊಚ್ಚಿಯ ಅಮೃತಾ ಆಸ್ಪತ್ರೆಯ ವೈದ್ಯರು ರೋಗಿಯ ಶ್ವಾಸಕೋಶ ಸೇರಿದ್ದ ಜಿರಳೆಯನ್ನು ಹೊರತೆಗೆಯಲು ಶತತ 8 ಗಂಟೆಗಳ ಕಾಲ ಶ್ರಮಿಸಿದ್ದಾರೆ. 

ಕೇರಳದ 55 ವರ್ಷದ ವ್ಯಕ್ತಿಯೊಬ್ಬರಿಗೆ ಉಸಿರಾಡುವಾಗ ಉಸಿರು ಕಟ್ಟಿದಂತಹ ಅನುಭವವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಪರೀಕ್ಷಿಸಿಕೊಂಡಿದ್ದಾರೆ. ಡಾ ಟಿಂಕು ಜೋಸೆಫ್ ಅವರ ನೇತೃತ್ವದ ಶ್ವಾಸಕೋಶ ತಜ್ಞರು ಈ 55 ವರ್ಷದ ವ್ಯಕ್ತಿಗೆ ಎಕ್ಸರೇ ಹಾಗೂ ಸ್ಕ್ಯಾನಿಂಗ್ ಮಾಡಿದ ವೇಳೆ ಅವರ ಶ್ವಾಸಕೋಶದಲ್ಲಿ ಜಿರಳೆ ಇರುವುದು ಕಾಣಿಸಿದೆ.  ನಂತರ ಜಿರಳೆ ಹೊರಬರುವುದಕ್ಕಾಗಿ ಚಿಕಿತ್ಸೆ ನೀಡಲು ಆರಂಭಿಸಿದಾಗ ಜಿರಳೆ ಅಲ್ಲಿಯೇ ವಿಭಜನೆಯಾಗಿದ್ದು, ಇದು ರೋಗಿಯ ಆರೋಗ್ಯವನ್ನು ಮತ್ತಷ್ಟು ಕೆಡಿಸಿತ್ತು.

ಪರಿಣಾಮ ಚಿಕಿತ್ಸೆ ಮತ್ತಷ್ಟು ಕಠಿಣವಾದರೂ ಛಲ ಬಿಡದ ವೈದ್ಯರು ಸತತ ಎಂಟು ಗಂಟೆಗಳ ಕಾಲ ನಿರಂತರ ಪ್ರಯತ್ನ ಮಾಡಿ ವ್ಯಕ್ತಿಯ ಶ್ವಾಸಕೋಶದಲ್ಲಿದ್ದ ಜಿರಳೆಯನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಈ ರೋಗಿಗೆ ಈ ಹಿಂದೆಯೂ ಉಸಿರಾಟದ ಸಮಸ್ಯೆ ಇದಿದ್ದರಿಂದ ಶಸ್ತ್ರಚಿಕಿತ್ಸೆ ಸಂಪೂರ್ಣ ಸಂಕೀರ್ಣವಾಗಿತ್ತು. 

ಬೆಂಗಳೂರು: ಸ್ಟಾರ್ ಹೋಟೆಲ್‌ ಊಟದಲ್ಲಿ ಜಿರಳೆ ಕಂಡು ಬೆಚ್ಚಿಬಿದ್ದ ಹೈಕೋರ್ಟ್ ವಕೀಲೆ!

ಜಿರಳೆ ಶ್ವಾಸಕೋಶ ಸೇರಿದ್ದು ಹೇಗೆ? 

ಸಾಮಾನ್ಯವಾಗಿ ಸಣ್ಣ ಇರುವೆ ಮೈ ಮೇಲೆ ಹರಿದಾಡಿದರು ಮನುಷ್ಯರು ಯಾರೂ ಸುಮ್ಮನೇ ಕೂರುವುದಿಲ್ಲ, ಹೀಗಿರುವಾಗ ಇವರ ಶ್ವಾಸಕೋಶವನ್ನು ಜಿರಳೆ ಸೇರಿದ್ದು ಹೇಗೆ ಎಂಬ ಕುತೂಹಲ ಹಲವರದ್ದು, ಆದರೆ ಈ ಹಿಂದೆಯೇ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಇಈ ರೋಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ ಕುತ್ತಿಗೆ ಮೂಲಕ ಉಸಿರಾಟದ ಕೊಳವೆಯೊಂದನ್ನು ಅವರಿಗೆ ಅಳವಡಿಸಲಾಗಿತ್ತು. ಅದರ ಮೂಲಕ ಈ ಜಿರಳೆ ಅವರ ಶ್ವಾಸಕೊಶವನ್ನು ಪ್ರವೇಶಿಸಿತ್ತು ಎಂದು ವೈದ್ಯರು ಹೇಳಿದ್ದಾರೆ. ಪ್ರಸ್ತುತ ಈ ರೋಗಿ ಸಂಪೂರ್ಣವಾಗಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. 


ಸಾಂಬಾರು ಹಾಕುವಾಗ ವಿದ್ಯಾರ್ಥಿಯ ಅನ್ನದ ತಟ್ಟೆಗೆ ಬಿತ್ತು ಸತ್ತ ಜಿರಳೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು