
ತಿರುವನಂತಪುರಂ (ಮೇ 4): ದೇವರ ನಾಡು ಕೇರಳದ ಹಣೆಬರಹ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 8 ಗಂಟೆಗೆ 43 ಮತ ಎಣಿಕೆ ಕೇಂದ್ರಗಳಲ್ಲಿ ಅಂಚೆ ಮತಗಳ ಎಣಿಕೆಯೊಂದಿಗೆ ಪ್ರಕ್ರಿಯೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಸಣ್ಣ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯದ ಅತ್ಯಂತ ಹೈ-ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಪಾಲಕ್ಕಾಡ್ನಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ನ ರಮೇಶ್ ಪೆಶಾರೋಡಿ ಅವರ ವಿರುದ್ಧ ಶೋಭಾ ಮೇಲುಗೈ ಸಾಧಿಸಿದ್ದು, ಎಲ್ಡಿಎಫ್ ಅಭ್ಯರ್ಥಿ ಸದ್ಯಕ್ಕೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಕಳೆದ ಮೂರು ಚುನಾವಣೆಗಳಲ್ಲಿ ಇಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಬಿಜೆಪಿಗೆ ಈ ಆರಂಭಿಕ ಟ್ರೆಂಡ್ ಆಶಾದಾಯಕವಾಗಿದೆ.
ಬೆಳಿಗ್ಗೆ 8:20ರ ಸುಮಾರಿನ ಆರಂಭಿಕ ವರದಿಗಳ ಪ್ರಕಾರ, ಯುಡಿಎಫ್ (UDF) 5 ಕ್ಷೇತ್ರಗಳಲ್ಲಿ ಮುನ್ನಡೆ ಕಂಡಿದ್ದರೆ, ಎಲ್ಡಿಎಫ್ (LDF) 3 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಕಳೆದ 10 ವರ್ಷಗಳಿಂದ ಅಧಿಕಾರದಿಂದ ದೂರವಿರುವ ಯುಡಿಎಫ್ ಈ ಬಾರಿ ಹೇಗಾದರೂ ಮಾಡಿ ಮರಳಿ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿದೆ.
ಎಲ್ಡಿಎಫ್ ಸಂಚಾಲಕ ಟಿ.ಪಿ. ರಾಮಕೃಷ್ಣನ್ ಅವರು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವೇ ಮುಂದುವರಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. "ನಾವು ಈ ಬಾರಿ ಮತ್ತಷ್ಟು ದೊಡ್ಡ ಬಹುಮತದೊಂದಿಗೆ ಗೆಲ್ಲುತ್ತೇವೆ. ನಾನು ಪೆರಂಬ್ರ ಕ್ಷೇತ್ರದಿಂದ ಗೆಲ್ಲುವುದು ಖಚಿತ. ಕಾಂಗ್ರೆಸ್ ಮಾಡುವ ಹಕ್ಕು ಪ್ರತಿಪಾದನೆಗಳಿಗೆ ಯಾವುದೇ ಆಧಾರವಿಲ್ಲ" ಎಂದು ಅವರು ಹೇಳಿದ್ದಾರೆ.
ವಿಝಿಂಜಂ (ಕೋವಲಂ) ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎಂ. ವಿನ್ಸೆಂಟ್ ಅವರು ತಾವು ಹ್ಯಾಟ್ರಿಕ್ ಗೆಲುವು ಸಾಧಿಸುವುದು ಮಾತ್ರವಲ್ಲದೆ, 10 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಯುಡಿಎಫ್ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಕಳೆದ 2021ರ ಚುನಾವಣೆಯಲ್ಲಿ ಎಲ್ಡಿಎಫ್ 140 ಸ್ಥಾನಗಳ ಪೈಕಿ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಜಯ ದಾಖಲಿಸಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ 41 ಸ್ಥಾನಗಳಿಗೆ ಸೀಮಿತವಾಗಿತ್ತು. ಈ ಬಾರಿ ಆಡಳಿತಾರೂಢ ಸಿಪಿಎಂ ಮೈತ್ರಿಕೂಟ ತನ್ನ ಕೋಟೆ ಉಳಿಸಿಕೊಳ್ಳುತ್ತದೆಯೇ ಅಥವಾ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರ ಹಿಡಿಯುತ್ತದೆಯೇ ಎಂಬುದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ