ಕೇರಳ ಸಿಎಂ ಜತೆ 'ಸಂಪರ್ಕ' ಒಪ್ಪಿಕೊಂಡ ಸ್ವಪ್ನಾ ಸುರೇಶ್

Kannadaprabha News   | Asianet News
Published : Aug 07, 2020, 12:28 PM ISTUpdated : Aug 07, 2020, 12:49 PM IST
ಕೇರಳ ಸಿಎಂ ಜತೆ 'ಸಂಪರ್ಕ' ಒಪ್ಪಿಕೊಂಡ ಸ್ವಪ್ನಾ ಸುರೇಶ್

ಸಾರಾಂಶ

ಚಿನ್ನ ಕಳ್ಳಸಾಗಣೆ ಹಗರಣದ ರೂವಾರಿ ಸ್ವಪ್ನ ಸುರೇಶ್ ತನಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಸಾಮಾನ್ಯ ಸಂಪರ್ಕವಿದೆ ಎಂದು ಎನ್‌ಐಎ ಎದುರು ಬಾಯಿ ಬಿಟ್ಟಿದ್ದಾಳೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಕೊಚ್ಚಿ(ಆ.07): ಕೇರಳದ ಬಹುಕೋಟಿ ಚಿನ್ನ ಕಳ್ಳಸಾಗಣೆ ಹಗರಣದ ರೂವಾರಿ ಸ್ವಪ್ನಾ ಸುರೇಶ್‌ ತನಗೆ ಮುಖ್ಯಮಂತ್ರಿ ಪಿಣರಾಯಿ ವಿಜಯ್‌ ಜೊತೆ ‘ಸಾಮಾನ್ಯ ಸಂಪರ್ಕ’ ಇದೆ ಎಂದು ಒಪ್ಪಿಕೊಂಡಿದ್ದಾಳೆ. 

ಈ ವಿಷಯವನ್ನು ಹಗರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ ಕೋರ್ಟ್‌ಗೆ ತಿಳಿಸಿದೆ. ಅದರೊಂದಿಗೆ, ಹಗರಣದಲ್ಲಿ ಕೇರಳದ ಮುಖ್ಯಮಂತ್ರಿ ಕೂಡ ಭಾಗಿಯಾದ್ದು, ಅವರು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಕೂಗಿಗೆ ಮತ್ತಷ್ಟು ಬಲ ಬಂದಂತಾಗಿದೆ.

ಸ್ವಪ್ನಾ ಗ್ಯಾಂಗ್‌ನಿಂದ 300 ಕೆ.ಜಿ. ಚಿನ್ನ ಕಳ್ಳ ಸಾಗಣೆ!

ಸ್ವಪ್ನಾ ತನಗೆ ಮುಖ್ಯಮಂತ್ರಿ ಜೊತೆ ‘ಸಾಮಾನ್ಯ ಸಂಪರ್ಕ’ ಇದೆ ಎಂದು ಹೇಳಿಕೆ ನೀಡಿದ್ದಾಳೆ. ಅಲ್ಲದೆ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್‌ ತನ್ನ ಮಾರ್ಗದರ್ಶಕ ಎಂದೂ ಹೇಳಿದ್ದಾಳೆ. ಕೊಚ್ಚಿ ವಿಮಾನನಿಲ್ದಾಣದಲ್ಲಿ ಜು.5ರಂದು ಸ್ವಪ್ನಾ ತಂದಿದ್ದ ರಾಜತಾಂತ್ರಿಕ ಬ್ಯಾಗೇಜ್‌ನಲ್ಲಿ 30 ಕೆ.ಜಿ. ಅಕ್ರಮ ಚಿನ್ನ ಪತ್ತೆಯಾಗಿ ಜಪ್ತಿ ಮಾಡಿದಾಗ ಆಕೆ ತನ್ನ ನೆರವಿಗೆ ಬರುವಂತೆ ಶಿವಶಂಕರ್‌ ಅವರ ಫ್ಲ್ಯಾಟ್‌ಗೆ ಹೋಗಿ ಕೇಳಿದ್ದಳು. ಆದರೆ, ಶಿವಶಂಕರ್‌ ನೆರವು ನೀಡಿರಲಿಲ್ಲ ಎಂದು ಎನ್‌ಐಎ ತಿಳಿಸಿದೆ.

ಮೈ ಮಾಟದಿಂದ ಅಧಿಕಾರಿಗಳನ್ನು ಬಲೆಗೆ ಹಾಕಿ ಕೊಳ್ಳುತ್ತಿದ್ದ ಸ್ವಪ್ನಾ ಸುರೇಶ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌
ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ