ಕಲಾಮಂಡಲಂ ವಿವಿ ಕುಲಾಧಿಪತಿ ಹುದ್ದೆಯಿಂದ ಕೇರಳ ರಾಜ್ಯಪಾಲರ ವಜಾ

Published : Nov 11, 2022, 10:09 AM IST
ಕಲಾಮಂಡಲಂ ವಿವಿ ಕುಲಾಧಿಪತಿ ಹುದ್ದೆಯಿಂದ ಕೇರಳ ರಾಜ್ಯಪಾಲರ ವಜಾ

ಸಾರಾಂಶ

ವಿವಿಗಳ ಮೇಲಿನ ರಾಜ್ಯಪಾಲರ ಅಧಿಕಾರ ಕತ್ತರಿಗೆ ಸುಗ್ರೀವಾಜ್ಞೆ ಜಾರಿಗೆ ತರಲು ಬುಧವಾರ ಕೇರಳದ ಎಲ್‌ಡಿಎಫ್‌ ಸರ್ಕಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಸರ್ಕಾರವು ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದಿದ್ದು, ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ರನ್ನು ಗುರುವಾರ ವಜಾಗೊಳಿಸಿದೆ.

ತಿರುವನಂತಪುರ: ವಿವಿಗಳ ಮೇಲಿನ ರಾಜ್ಯಪಾಲರ ಅಧಿಕಾರ ಕತ್ತರಿಗೆ ಸುಗ್ರೀವಾಜ್ಞೆ ಜಾರಿಗೆ ತರಲು ಬುಧವಾರ ಕೇರಳದ ಎಲ್‌ಡಿಎಫ್‌ ಸರ್ಕಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಸರ್ಕಾರವು ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದಿದ್ದು, ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ರನ್ನು ಗುರುವಾರ ವಜಾಗೊಳಿಸಿದೆ. ಅವರ ಸ್ಥಾನಕ್ಕೆ ಕಲೆ ಹಾಗೂ ಸಂಸ್ಕೃತಿ ಕ್ಷೇತ್ರದ ತಜ್ಞರನ್ನು ನೇಮಿಸಿಕೊಳ್ಳಲಾಗುವುದು ಎಂದು ತಿಳಿಸಿದೆ. ಹೀಗಾಗಿ ಇನ್ನು ಕಲಾಮಂಡಲಂ ವಿವಿಯ ಉಪ ಕುಲಪತಿ ಸೇರಿದಂತೆ ಮಹತ್ವದ ನೇಮಕಾತಿ ವಿಚಾರದಲ್ಲಿ ರಾಜ್ಯಪಾಲರಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಆಡಳಿತ ಹಾಗೂ ನಿರ್ವಹಣಾ ವ್ಯವಸ್ಥೆಯು ರಾಜ್ಯ ಸರ್ಕಾರದಿಂದ ನಿರ್ವಹಿಸಲ್ಪಡುತ್ತದೆ ಎಂದು ಹೊಸ ತಿದ್ದುಪಡಿ ನಿಯಮಗಳಲ್ಲಿ ತಿಳಿಸಲಾಗಿದೆ. ಈ ಮೂಲಕ ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಕಿತ್ತಾಟ ಮತ್ತೊಂದು ಮಜಲು ಮುಟ್ಟಿದಂತಾಗಿದೆ.

ತಮಿಳುನಾಡು ಕೇರಳದಲ್ಲಿ ಸರ್ಕಾರ, ರಾಜ್ಯಪಾಲರ ಮಧ್ಯೆ ಜಟಾಪಟಿ ತೀವ್ರ

Hijab Row:ಹಿಜಾಬ್‌ ಅಡಿ ಮುಸ್ಲಿಂ ಮಹಿಳೆಯರ ಸಮಾಧಿ: ಕೇರಳ ಗವರ್ನರ್‌

Tamil Nadu Politics: ರಾಜ್ಯಪಾಲರನ್ನು ವಜಾ ಮಾಡಿ ಎಂದು ರಾಷ್ಟ್ರಪತಿಗಳಿಗೆ ಪತ್ರ ಬರೆದ ಡಿಎಂಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!