ಕೊರೋನಾ ನಿಯಂತ್ರಿಸಲು ಕೇರಳದಲ್ಲಿ ಕಮಾಂಡೋಗಳ ಬಳಕೆ..!

Suvarna News   | Asianet News
Published : Jul 09, 2020, 06:08 PM IST
ಕೊರೋನಾ ನಿಯಂತ್ರಿಸಲು ಕೇರಳದಲ್ಲಿ ಕಮಾಂಡೋಗಳ ಬಳಕೆ..!

ಸಾರಾಂಶ

ಆರಂಭದಲ್ಲಿ ಕೊರೋನಾ ನಿಯಂತ್ರಿಸಿ ಸೈ ಎನಿಸಿಕೊಂಡಿದ್ದ ಕೇರಳದಲ್ಲಿ ಮತ್ತೆ ಹೆಮ್ಮಾರಿ ವಕ್ಕರಿಸಿದೆ. ಕೇರಳದ ಪಾಲಿಗೆ ಸೂಪರ್ ಸ್ಪ್ರೆಡರ್ ಕಾಟ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇವರ ನಿಯಂತ್ರಣಕ್ಕಾಗಿ ಕಮಾಂಡೋಗಳನ್ನು ಬಳಸಿಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ತಿರುವನಂತಪುರಂ(ಜು.09): ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿದ್ದು, ಬೇಕಾಬಿಟ್ಟಿ ತಿರುಗಾಡುವವರಿಗೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಕಮಾಂಡೋಗಳನ್ನು ಬಳಸಿಕೊಳ್ಳುತ್ತಿದೆ.

ಹೌದು, ಇಲ್ಲಿನ ಕರಾವಳಿ ಭಾಗಗಳಲ್ಲಿ ಇರುವ ಹಳ್ಳಿಗಳಲ್ಲಿ ಇದರ ಅನುಭವವಾಗಿದ್ದು, ಪೂಂತೂರಾ ಹಳ್ಳಿಯ ವಿವಿಧ ವಾರ್ಡ್‌ಗಳಲ್ಲಿ ಆಂಬುಲೆನ್ಸ್, ಪೊಲೀಸ್ ಹಾಗೂ ಕಮಾಂಡೋಗಳ ವಾಹನ ಓಡಾಟ ಕಂಡು ಬಂದಿದ್ದು, ಧ್ವನಿವರ್ಧಕಗಳ ಮೂಲಕ ಜನರಿಗೆ ಜಾಗೃತಿ ಹಾಗೆಯೇ ಎಚ್ಚರಿಕೆ ನೀಡುವ ಕೆಲಸ ಮಾಡಿವೆ. ಒಂದು ವೇಳೆ ಸುಖಾಸುಮ್ಮನೆ ಓಡಾಡುವವರು ಕಂಡು ಬಂದರೆ ಅವರನ್ನು ಕಮಾಂಡೋಗಳ ನೆರವಿನಿಂದ ಆಂಬುಲೆನ್ಸ್‌ಗಳಲ್ಲಿ ತುಂಬಿಕೊಂಡು ಹೋಗಿ ಕ್ವಾರಂಟೈನ್ ಕೇಂದ್ರಗಳಲ್ಲಿ ಬಿಡಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜಧಾನಿ ರಕ್ಷಣೆಗೆ ' ಅಷ್ಟ ದಿಕ್ಪಾಲಕರು'; ಕೊರೊನಾ ತಡೆಗೆ ಸಿಎಂ ಹೊಸ ಪ್ಲಾನ್

ಒಬ್ಬ ವ್ಯಕ್ತಿಯಿಂದ ಆರು ಜನರಿಗೆ ಕೊರೋನಾ ಸೋಂಕು ತಗುಲಿದರೆ ಅಂತವರನ್ನು ಸೂಪರ್ ಸ್ಪ್ರೆಡರ್ಸ್ ಎನ್ನಲಾಗುತ್ತದೆ. ಪೂಂತೂರಾ ಹಳ್ಳಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೂಪರ್ ಸ್ಪ್ರೆಡರ್ಸ್ ಇರುವುದು ಬೆಳಕಿಗೆ ಬಂದಿದೆ. ಮೀನು ಮಾರುಕಟ್ಟೆಯಿಂದ ಇಲ್ಲಿ ಕೊರೋನಾ ಸೋಂಕು ಹಬ್ಬಲಾರಂಭಿಸಿತು. ಕಳೆದ 5 ದಿನಗಳಲ್ಲಿ ಪೂಂತೂರಾ ಹಳ್ಳಿಯಲ್ಲಿ 600 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, 119 ಮಂದಿಯಲ್ಲಿ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಮುಖ್ಯಮಂತ್ರಿ ಕಚೇರಿಗಳು ಖಚಿತಪಡಿಸಿವೆ.

ಈ ಹಳ್ಳಿಯಲ್ಲಿ ಬಹುತೇಕ ಕುಟುಂಬಗಳು ಮೀನುಗಾರಿಕೆಯನ್ನೇ ಅವಲಂಬಿಸಿವೆ. ಇದೀಗ ತಿರುವನಂತಪುರ ವ್ಯಾಪ್ತಿಯ ಕರಾವಳಿ ತೀರದಲ್ಲಿ ಮೀನುಗಾರಿಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಜತೆಗೆ ಕರಾವಳಿ ಕಾವಲುಪಡೆಗೂ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಪೂಂತೂರಾ ಹಳ್ಳಿಯ ಮನೆಗಳಿಗೆ ಸ್ಯಾನಿಟೈಸಿಂಗ್ ಮಾಡಲಾಗಿದ್ದು, ಇಡೀ ಹಳ್ಳಿಯನ್ನೇ ಸೀಲ್‌ಡೌನ್ ಮಾಡಲಾಗಿದ್ದು, ಪ್ರತಿ ಮನೆಗೆ 5 ಕೆ.ಜಿ ಅಕ್ಕಿಯನ್ನು ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?