ಸಹೋದರನಿಂದ್ಲೇ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ: 7 ತಿಂಗಳ ಭ್ರೂಣ ತೆಗೆಸಲು ಹೈಕೋರ್ಟ್ ಒಪ್ಪಿಗೆ

Published : May 22, 2023, 05:16 PM IST
ಸಹೋದರನಿಂದ್ಲೇ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ: 7 ತಿಂಗಳ ಭ್ರೂಣ ತೆಗೆಸಲು ಹೈಕೋರ್ಟ್ ಒಪ್ಪಿಗೆ

ಸಾರಾಂಶ

ಅಪ್ರಾಪ್ತ ಬಾಲಕಿಯ ತಂದೆ ಗರ್ಭಪಾತ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಬಳಿಕ, ಸತ್ಯವನ್ನು ಪರಿಗಣಿಸಿ, ಕೋರ್ಟ್‌ ಈ ತೀರ್ಮಾನಕ್ಕೆ ಬಂದಿದೆ. 

ನವದೆಹಲಿ (ಮೇ 22, 2023): ತನ್ನ ಸಹೋದರನಿಂದ ಗರ್ಭಧರಿಸಿದ ಅಪ್ರಾಪ್ತ ಬಾಲಕಿಯ ಏಳು ತಿಂಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಗರ್ಭಪಾತಕ್ಕೆ ಕೇರಳ ಹೈಕೋರ್ಟ್‌ ಅವಕಾಶ ನೀಡಿದೆ. ಇದರಿಂದ ಅಪ್ರಾಪ್ತ ಬಾಲಕಿಗೆ ಆಗಬಹುದಾದ ಯಾವುದೇ ದೈಹಿಕ ಮತ್ತು ಸಾಮಾಜಿಕ ತೊಡಕುಗಳನ್ನು ತಪ್ಪಿಸಲು ಕೋರ್ಟ್‌ ಈ ಅನುಮತಿ ನೀಡಿದೆ. ಗರ್ಭಪಾತವನ್ನು ಅನುಮತಿಸದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ" ಎಂದು ಗರ್ಭಪಾತದ ಪರವಾಗಿ ತೀರ್ಪು ನೀಡುವಾಗ ನ್ಯಾಯಾಲಯವು’’ ಅಭಿಪ್ರಾಯ ನೀಡಿದೆ.

ಅಪ್ರಾಪ್ತ ಬಾಲಕಿಯ ತಂದೆ ಗರ್ಭಪಾತ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಬಳಿಕ, ಸತ್ಯವನ್ನು ಪರಿಗಣಿಸಿ, ಮಗು ತನ್ನ ಸ್ವಂತ ಒಡಹುಟ್ಟಿದವರಿಂದ ಹುಟ್ಟಿದೆ. ಈ ಹಿನ್ನೆಲೆ, ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ. ಅಂತಹ ಸಂದರ್ಭಗಳಲ್ಲಿ, ಗರ್ಭಪಾತವನ್ನು ಅಂತ್ಯಗೊಳಿಸಲು ಅರ್ಜಿದಾರರು ಕೋರಿರುವ ಅನುಮತಿ ಅನಿವಾರ್ಯವಾಗಿದೆ" ಎಂದೂ ಸಹ ತೀರ್ಪು ನೀಡುವಾಗ ಕೇರಳ ಹೈಕೋರ್ಟ್‌ ತಿಳಿಸಿದೆ.

ಇದನ್ನು ಓದಿ: ಗರ್ಭಪಾತ ನಿರ್ಧರಿಸುವ ಹಕ್ಕು ಮಹಿಳೆಗಿದೆ; 32 ವಾರದ ಗರ್ಭಿಣಿಯ ಅಬಾರ್ಷನ್‌ಗೆ ಹೈಕೋರ್ಟ್‌ ಅಸ್ತು..!

 "ವೈದ್ಯಕೀಯ ವರದಿಯನ್ನು ಪರಿಶೀಲಿಸಿದಾಗ, ಮಗುವು ದೈಹಿಕವಾಗಿ ಮತ್ತು ಮಾನಸಿಕವಾಗಿ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯಕ್ಕೆ ಯೋಗ್ಯವಾಗಿದೆ ಎಂಬುದು ಸ್ಪಷ್ಟವಾಗಿದೆ. ಗರ್ಭಧಾರಣೆಯ ಮುಂದುವರಿಕೆ ಮಗುವಿನ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಗಾಯವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ ಎಂದೂ ಸಹ ಹೈಕೋರ್ಟ್‌ ಮಾಹಿತಿ ನೀಡಿದೆ.

ನಂತರ, ನ್ಯಾಯಾಲಯವು ಯಾವುದೇ ವಿಳಂಬವಿಲ್ಲದೆ ಅಪ್ರಾಪ್ತ ಬಾಲಕಿಯ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಭ್ರೂಣವನ್ನು ವೈದ್ಯಕೀಯವಾಗಿ ಅಂತ್ಯಗೊಳಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ವೈದ್ಯಾಧಿಕಾರಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿತು ಎಂದು ವರದಿಯಾಗಿದೆ. ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿಯನ್ನು ಆಧರಿಸಿ ಕೇರಳ ಹೈಕೋರ್ಟ್‌ ನ್ಯಾಯಮೂರ್ತಿ ಜಿಯಾದ್ ರಹಮಾನ್ ಅವರ ಏಕ ಸದಸ್ಯತ್ವ ಪೀಠ ಈ ನಿರ್ಧಾರ ಕೈಗೊಂಡಿದೆ ಎಂದೂ ತಿಳಿದುಬಂದಿದೆ. 

ಇದನ್ನೂ ಓದಿ: ಅಯ್ಯೋ ಪಾಪಿ! ಹೆಣ್ಣು ಶಿಶುವಿಗೆ ಜನ್ಮ ಕೊಟ್ಟು ಕಿಟಕಿಯಿಂದ ಎಸೆದು ಕೊಂದ 19 ವರ್ಷದ ಯುವತಿ

32 ವಾರದ ಗರ್ಭಿಣಿಯ ಅಬಾರ್ಷನ್‌ಗೆ ಅಸ್ತು ಎಂದಿದ್ದ ಹೈಕೋರ್ಟ್‌ 
ಭ್ರೂಣಕ್ಕೆ ತೀವ್ರ​ವಾದ ಸ​ಮ​ಸ್ಯೆ​ಗ​ಳು ಇರು​ವು​ದ​ರಿಂದ ವಿವಾ​ಹಿತ ಮಹಿ​ಳೆಗೆ 32ನೇ ವಾರದಲ್ಲಿ ಗರ್ಭ​ಪಾತ ಮಾಡಿ​ಕೊ​ಳ್ಳಲು ಕೋರ್ಟ್‌ ಅನು​ಮತಿ ನೀಡಿದ್ದ ಘಟನೆ ಜನವರಿಯಲ್ಲಿ ನಡೆದಿತ್ತು. ಗರ್ಭ​ದ​ಲ್ಲಿ​ರುವ ಮಗು​ವಿಗೆ ಆರೋಗ್ಯ ಸಮ​ಸ್ಯೆ​ಗ​ಳಿ​ರು​ವು​ದ​ರಿಂದ ಗರ್ಭ​ಪಾ​ತಕ್ಕೆ ಅವ​ಕಾಶ ನೀಡ​ಬೇಕು ಎಂದು ಕೋರಿ ಮಹಿಳೆಯೊ​ಬ್ಬರು ಬಾಂಬೆ ಹೈಕೋರ್ಟ್‌ ಮೆಟ್ಟಿ​ಲೇ​ರಿ​ದ್ದರು. ಈ ಅರ್ಜಿಯ ವಿಚಾ​ರಣೆ ನಡೆ​ಸಿದ್ದ ನ್ಯಾಯಮೂರ್ತಿ ಗೌತಮ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಎ​ಸ್‌.​ಜಿ.​ ದಿಗೆ ಅವ​ರಿದ್ದ ಪೀಠ, ಭ್ರೂಣಕ್ಕೆ ತೀವ್ರ ಆರೋಗ್ಯ ಸಮ​ಸ್ಯೆ​ಗ​ಳಿ​ದ್ದಾಗ ಗರ್ಭ​ಪಾ​ತಕ್ಕೆ ನಿಗದಿಪಡಿ​ಸಿ​ರುವ ಅವ​ಧಿ​ಯನ್ನು ಪರಿ​ಗ​ಣಿ​ಸ​ಬಾ​ರದು ಎಂದು ಹೇಳಿತು.

‘ಗರ್ಭ​ಪಾತ ಮಾಡಿ​ಸಿ​ಕೊ​ಳ್ಳ​ಬೇಕು ಎಂಬುದು ಮಹಿ​ಳೆ ತಾನಾ​ಗಿಯೇ ತೆಗೆ​ದು​ಕೊಂಡಿ​ರುವ ನಿರ್ಧಾರ. ಗರ್ಭ​ಪಾ​ತಕ್ಕೆ ಸಂಬಂಧಿ​ಸಿ​ದಂತೆ ನಿರ್ಧ​ರಿ​ಸುವ ಹಕ್ಕು ಮಹಿ​ಳೆ​ಗಿ​ದೆಯೇ ಹೊರತು ವೈದ್ಯ​ಕೀಯ ಸಂಸ್ಥೆ​ಗಲ್ಲ. ಆರೋಗ್ಯ ಸಮ​ಸ್ಯೆ ಇರುವ ಮಕ್ಕ​ಳನ್ನು ಬೆಳೆ​ಸು​ವುದು ತಾಯಿಗೆ ಜೀವನ ಪೂರ್ತಿ ಕಷ್ಟ​ವಾ​ಗು​ತ್ತದೆ. ಹಾಗಾಗಿ ಈ ಗರ್ಭ​ಪಾ​ತಕ್ಕೆ ಅನು​ಮತಿ ನೀಡ​ಲಾ​ಗಿದೆ’ ಎಂದು ಕೋರ್ಟ್‌ ಅಭಿ​ಪ್ರಾಯ ವ್ಯಕ್ತ​ಪ​ಡಿ​ಸಿತು. ಸರ್ಕಾರದ ನಿಯಮದ ಪ್ರಕಾರ 20 ವಾರದೊಳಗೆ ಗರ್ಭಪಾತ ಮಾಡಿಸಿಕೊಳ್ಳಬೇಕು. ಆದರೆ, ವಿಶೇಷ ಕೆಟಗರಿಗೆ 24 ವಾರದ ಮಿತಿ ಹಾಕಲಾಗಿದೆ ಎಂಬ ಕಾನೂನು ಇದೆ. 

ಇದನ್ನೂ ಓದಿ: ಅಯ್ಯೋ ಪಾಪ..! 3 ತಿಂಗಳ ಕಂದಮ್ಮನನ್ನು ಕೊಂದು ನೇಣು ಬಿಗಿದುಕೊಂಡ ದಂಪತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Cobra snake in CM House: ನೂತನ ಮುಖ್ಯಮಂತ್ರಿ ಮನೆಗೆ ಬಂದ ನಾಗರಹಾವು; ಉರಗ ತಜ್ಞರಿಂದ ರಕ್ಷಣೆ!
India Tour: ಭಾರತದ ಪ್ರಸಿದ್ಧ ಪ್ರವಾಸಿ ತಾಣವಾದ ಕಸೋಲ್‌ನಲ್ಲಿ ಪ್ರವಾಸಿಗರ ಮೈ ಜುಮ್ಮೆನಿಸುವ ಹುಚ್ಚಾಟ!