ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಬಳಿಕ SC ಸರ್ಟಿಫಿಕೇಟ್‌ಗೆ ಬೆಲೆ ಇಲ್ಲ: ಈ ಕ್ಷೇತ್ರದ ಚುನಾವಣೆ ಅಸಿಂಧುಗೊಳಿಸಿದ ಹೈಕೋರ್ಟ್..!

Published : Mar 21, 2023, 11:18 AM ISTUpdated : Mar 21, 2023, 12:24 PM IST
ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಬಳಿಕ SC ಸರ್ಟಿಫಿಕೇಟ್‌ಗೆ ಬೆಲೆ ಇಲ್ಲ: ಈ ಕ್ಷೇತ್ರದ ಚುನಾವಣೆ ಅಸಿಂಧುಗೊಳಿಸಿದ ಹೈಕೋರ್ಟ್..!

ಸಾರಾಂಶ

ಎ. ರಾಜಾ ಕ್ರೈಸ್ತರಾಗಿದ್ದು, ಚರ್ಚ್‌ನಲ್ಲಿ ಮತಾಂತರಗೊಂಡಿದ್ದಾರೆ ಮತ್ತು ಅವರು ಯಾವುದೇ ಪರಿಶಿಷ್ಟ ಜಾತಿಗೆ ಸೇರಿದವರಲ್ಲ ಎಂದು ಡಿ. ಕುಮಾರ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಗೂ, ರಾಜಾ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ವಾದಿಸಿದ್ದರು.

ತಿರುವನಂತಪುರಂ (ಮಾರ್ಚ್‌ 21, 2023): ಕೇರಳದ  ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಶಾಸಕ ಎ ರಾಜಾ ಅವರು ನಕಲಿ ಜಾತಿ ಪ್ರಮಾಣ ಪತ್ರದ ಮೂಲಕ ಆಯ್ಕೆಯಾಗಿದ್ದ ಹಿನ್ನೆಲೆ ಕೇರಳ ಹೈಕೋರ್ಟ್ ಸೋಮವಾರ ಆ ವಿಧಾನಸಭೆ ಚುನಾವಣೆಯನ್ನೇ ಅಸಿಂಧುಗೊಳಿಸಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಮೀಸಲಾದ ದೇವಿಕುಲಂ ಸ್ಥಾನಕ್ಕೆ ಸ್ಪರ್ಧಿಸಲು ಸಿಪಿಐ(ಎಂ) ನಾಯಕನಿಗೆ ಅರ್ಹತೆ ಇಲ್ಲ ಎಂದು ಆರೋಪಿಸಿ ಶಾಸಕರಾಗಿದ್ದ ಎ. ರಾಜಾ ವಿರುದ್ಧ ಸ್ಪರ್ಧಿಸಿ ಎರಡನೇ ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಮುಖಂಡ ಡಿ. ಕುಮಾರ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ರು. 
 
ಎ. ರಾಜಾ ಕ್ರೈಸ್ತರಾಗಿದ್ದು, ಚರ್ಚ್‌ನಲ್ಲಿ ಮತಾಂತರಗೊಂಡಿದ್ದಾರೆ ಮತ್ತು ಅವರು ಯಾವುದೇ ಪರಿಶಿಷ್ಟ ಜಾತಿಗೆ ಸೇರಿದವರಲ್ಲ ಎಂದು ಡಿ. ಕುಮಾರ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಹಾಗೂ, ರಾಜಾ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ವಾದಿಸಿದ್ದರು. ನಂತರ ನ್ಯಾಯಾಲಯವು ಅರ್ಜಿಯನ್ನು ಆಲಿಸಿತು ಮತ್ತು ದೇವಿಕುಲಂ ಚುನಾವಣಾ ಫಲಿತಾಂಶವನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿತು. ಎ ರಾಜಾ 2021ರ ಚುನಾವಣೆಯಲ್ಲಿ ಡಿ. ಕುಮಾರ್ ಅವರನ್ನು 7,848 ಮತಗಳ ಅಂತರದಿಂದ ಸೋಲಿಸಿದ್ದರು.

ಇದನ್ನು ಓದಿ: ಕೋರ್ಟ್‌ನಲ್ಲಿ ಪಾರದರ್ಶಕತೆ ಹೆಚ್ಚಿಸಲು ಮುಚ್ಚಿದ ಲಕೋಟೆ ವ್ಯವಹಾರ ನಿಲ್ಲಿಸಿ: ಕೇಂದ್ರದ ವಿರುದ್ಧ ಸುಪ್ರೀಂ ಸಿಜೆಐ ಕಿಡಿ

ದೇವಿಕುಲಂ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಮೀಸಲಾದ ಸ್ಥಾನವಾಗಿದ್ದು ಮತ್ತು ನಾಮನಿರ್ದೇಶನದ ಸಮಯದಲ್ಲಿ ರಾಜಾ ಕ್ರೈಸ್ತ ಧರ್ಮವನ್ನು ಪ್ರತಿಪಾದಿಸುತ್ತಿದ್ದ ಕಾರಣ, ಅವರು ಎಸ್‌ಸಿ ಸಮುದಾಯಕ್ಕೆ ಮೀಸಲಾದ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಪಿ. ಸೋಮರಾಜನ್ ತೀರ್ಪಿನಲ್ಲಿ ಹೇಳಿದ್ದಾರೆ. 
 
ರಾಜಾ ಅವರ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಡಿ. ಕುಮಾರ್ ಅವರು ಸಲ್ಲಿಸಿದ ಚುನಾವಣಾ ಅರ್ಜಿಯ ಆಧಾರದ ಮೇಲೆ ತೀರ್ಪು ನೀಡಲಾಗಿದೆ. ಏಕೆಂದರೆ ಅವರು ಭರ್ತಿ ಮಾಡಿದ ಕ್ಷೇತ್ರವು ಕೇರಳ ರಾಜ್ಯದ ಹಿಂದೂಗಳ ಎಸ್‌ಸಿಗೆ ಮೀಸಲಾದ ಕ್ಷೇತ್ರವಾಗಿದೆ. ಎ. ರಾಜಾ ಕ್ರಿಶ್ಚಿಯನ್ ಆಗಿರುವುದರಿಂದ ಹಿಂದೂಗಳಿಗೆ ಮೀಸಲಾದ ಸ್ಥಾನವನ್ನು ಆಕ್ರಮಿಸುವ ಮೂಲಕ ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳ ಮುಂದೆ ಆಕ್ಷೇಪಣೆ ಸಲ್ಲಿಸಿದ್ದರೂ, ಅವರು ನಮ್ಮ ವಾದವನ್ನು ತಿರಸ್ಕರಿಸಿದ್ದರು ಎಂದೂ ಹೇಳಿದ್ದರು.

ಇದನ್ನೂ ಓದಿ: ಆಂಧ್ರದಿಂದ ಮತ್ತೆ ಕ್ಯಾತೆ..! ಭದ್ರಾ ಮೇಲ್ದಂಡೆ ಯೋಜನೆಗೆ ತಡೆ ನೀಡಲು ಸುಪ್ರೀಂಕೋರ್ಟ್‌ನಲ್ಲಿ ರಿಟ್‌ ಅರ್ಜಿ

ಆದರೆ, ಅವರು ತಮಿಳುನಾಡಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯಾದ ಹಿಂದೂ ಪರಾಯಣ ಸಮುದಾಯಕ್ಕೆ ಸೇರಿದವರು ಮತ್ತು ಅವರ ಅಜ್ಜಿಯರು ಕೇರಳಕ್ಕೆ ವಲಸೆ ಹೋಗಿದ್ದರಿಂದ ಮತ್ತು 1950 ಕ್ಕಿಂತ ಮೊದಲು ಹಿಂದೂಗಳಾಗಿ ಮುಂದುವರಿದ ಕಾರಣ ಕೇರಳದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾತಿಗೆ ಅರ್ಹರಾಗಿರುತ್ತಾರೆ ಎಂದು ರಾಜಾ ಪರ ವಕೀಲರು ವಾದಿಸಿದರು. ಹಾಗೂ, ಅವರ ಪೋಷಕರು ವಾಸ್ತವವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರಲಿಲ್ಲ ಎಂದೂ ವಾದ ಮಾಡಿದ್ದರು.

ಆದರೂ, ರಾಜಾ ಅವರ ವಿವಾಹದ ಛಾಯಾಚಿತ್ರಗಳು, ಸಿಎಸ್‌ಐ ಚರ್ಚ್‌ನ ಕುಟುಂಬ ನೋಂದಣಿ, ಚರ್ಚ್‌ನ ಬ್ಯಾಪ್ಟಿಸಮ್ ರಿಜಿಸ್ಟರ್‌ಗಳು ಮುಂತಾದ ವಿವಿಧ ದಾಖಲೆಗಳನ್ನು ನ್ಯಾಯಾಲಯವು ಪರಿಶೀಲಿಸಿತು. ಮತ್ತು ರಾಜಾ ಅವರು ನಾಮಪತ್ರ ಸಲ್ಲಿಸಿದ ಸಮಯದಲ್ಲಿ ಕ್ರಿಶ್ಚಿಯನ್ ಧರ್ಮವನ್ನು ಪ್ರತಿಪಾದಿಸುತ್ತಿದ್ದರು ಮತ್ತು ನಾಮಪತ್ರ ಸಲ್ಲಿಕೆಗೂ ಬಹಳ ಮೊದಲೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು ಎಂದು ತೀರ್ಮಾನಿಸಿತು. ಆದ್ದರಿಂದ, ನ್ಯಾಯಾಲಯವು ಚುನಾವಣಾ ಅರ್ಜಿಯನ್ನು ಅಂಗೀಕರಿಸಿತು ಮತ್ತು ಎ. ರಾಜಾ ಅವರ 2021 ರ ಚುನಾವಣೆಯನ್ನು ಅಸಿಂಧು ಎಂದು ಘೋಷಿಸಿತು.

ಇದನ್ನೂ ಓದಿ: ಉದ್ಧವ್‌ ಠಾಕ್ರೆ ವಿಶ್ವಾಸಮತಕ್ಕೆ ಸೂಚಿಸಿದ ಗೌರ್ನರ್‌ ಬಗ್ಗೆ ಸುಪ್ರೀಂ ಕಿಡಿ: ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದ ಕೋರ್ಟ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು