
ಮಲಪ್ಪುರಂ (ಕೇರಳ): ಕೇರಳದ ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಬಳಿ ತ್ರಿಶೂರ್-ಕೋಝಿಕ್ಕೋಡ್ ಮಾರ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ, ಆಟೋರಿಕ್ಷಾಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮಗುಚಿಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು, ಸುಮಾರು 20ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೊಳಗಾದ ಬಸ್ ನಿಯಂತ್ರಣ ತಪ್ಪಿದ ರಭಸಕ್ಕೆ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ. ಆ ನಂತರ, ಈಗಾಗಲೇ ಮತ್ತೊಂದು ಅಪಘಾತಕ್ಕೆ ಈಡಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮಗುಚಿಬಿದ್ದಿದೆ. ಗಾಯಗೊಂಡ ಪ್ರಯಾಣಿಕರ ಪೈಕಿ ಮೂವರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿದ್ದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆಯಾಗಿದೆ. ಬಸ್ ನಿಯಂತ್ರಣ ತಪ್ಪಿ ಸುಮಾರು 25 ಮೀಟರ್ಗೂ ಹೆಚ್ಚು ದೂರ ರಸ್ತೆಯಲ್ಲಿ ಸ್ಕಿಡ್ ಆಗಿ, ಸರ್ವಿಸ್ ರಸ್ತೆಯ ಡಿವೈಡರ್ಗೆ ಭೀಕರವಾಗಿ ಡಿಕ್ಕಿ ಹೊಡೆದು ಮಗುಚಿಬಿದ್ದಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ಕಂಡುಬಂದಿದೆ.
ಅಪಘಾತ ನಡೆದ ತಕ್ಷಣವೇ ಸ್ಥಳೀಯ ನಿವಾಸಿಗಳು, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ ಮಗುಚಿಬಿದ್ದಿದ್ದರಿಂದ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಬಸ್ನ ಕೆಲವು ಭಾಗಗಳನ್ನು ಕತ್ತರಿಸಿ ಸಾಹಸಪಟ್ಟು ರಕ್ಷಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಕುಟ್ಟಿಪ್ಪುರಂ, ವಳಂಚೇರಿ ಹಾಗೂ ಕೊಟ್ಟಕ್ಕಲ್ನಲ್ಲಿರುವ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
மழையால் வழுக்கிய சாலை - பேருந்து கவிழ்ந்து ஒருவர் பலி
கேரளம் : திருச்சூர் - கோழிக்கோடு வழித்தட பேருந்து இன்று மலப்புறம் மாவட்டம், குட்டிபுரத்தில் கட்டுப்பாட்டை இழந்து டிவைடரில் மோதி தலைகீழாக கவிழ்ந்தது.
விபத்தில் ஒருவர் சம்பவ இடத்திலேயே உயிரிழந்தார். பலர் காயமடைந்து வளாஞ்சேரி… pic.twitter.com/YBDWQGu0fx— Kᴀʙᴇᴇʀ - தக்கலை கபீர் (@Autokabeer) July 26, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ