
ಇಡುಕ್ಕಿ(ಅ.19): ಕೇರಳದಲ್ಲಿ(Kerala) ಸುರಿದ ಭಾರೀ ಮಳೆ(Rain), ಪ್ರವಾಹ(Flood), ಭೂಕುಸಿತದಿಂದ(Landslide) ಭಾರೀ ಸಾವು ನೋವು ಉಂಟಾಗಿದೆ. ಕೇರಳ ರಣಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜ್ಯ ಮತ್ತು ಕೇಂದ್ರ ರಕ್ಷಣಾ ತಂಡಗಳು(Rescue Teams) ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ವೇಳೆ ಮಳೆ ಸೃಷ್ಟಿಸಿರುವ ಭೀಕರತೆ ಗೋಚರವಾಗುತ್ತಿದೆ. ಅವಶೇಷ ತೆರವು ವೇಳೆ ಪತ್ತೆಯಾಗಿರುವ ಶವಗಳು ಮನಕಲಕುವ ಕತೆಗಳನ್ನು ಹೇಳುತ್ತಿವೆ.
ಭಾನುವಾರ ಮೂರು ಮಕ್ಕಳು ಪರಸ್ಪರ ಕೈ ಹಿಡಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿತ್ತು. ಸೋಮವಾರ ತಾಯಿ(Mother) ಹಾಗೂ ಮಗುವಿನ ಶವವು ತಪ್ಪಿಕೊಂಡ ಸ್ಥಿತಿಯಲ್ಲೇ ಪತ್ತೆಯಾಗಿದೆ. ಈ ದೃಶ್ಯವನ್ನು ಕಂಡು ಖುದ್ದು ರಕ್ಷಣಾ ತಂಡಗಳೇ ಕಣ್ಣೀರು ಹಾಕಿವೆ.
ಸಂಬಂಧಿಕರ ಮದುವೆಗೆ ಬಂದಿದ್ದ ತಾಯಿ ಹಾಗೂ ಮಳೆಗೆ ಕುಸಿದ ಮನೆಯ ಅವಶೇಷಗಳ ಅಡಿ ಸಿಲುಕಿ ಸಾವನ್ನಪ್ಪಿರುವ ಈ ದಾರುಣ ಘಟನೆ ಕೇರಳದ ಇಡುಕ್ಕಿ(Idukki) ಜಿಲ್ಲೆಯಲ್ಲಿ ನಡೆದಿದೆ. ಅವಶೇಷಗಳನ್ನು ತೆಗೆಯುವ ಸಮಯದಲ್ಲಿ ತಾಯಿ-ಮಗ ಇಬ್ಬರೂ ತಬ್ಬಿಕೊಂಡು ಮಲಗಿರುವ ಸ್ಥಿತಿಯಲ್ಲಿದ್ದರು. ಇದೇ ವೇಳೆ, ಮತ್ತೊಂದು ಮಗು ತೊಟ್ಟಿಲಿನಲ್ಲೇ ಸಾವನ್ನಪ್ಪಿರುವ ದಾರುಣ ದೃಶ್ಯ ಕಂಡುಬಂತು.
ಮೃತ ತಾಯಿ ಮಗನನ್ನು ಫೌಝಿಯಾ (28) ಮತ್ತು ಅಮೀನ್(10) ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿಯುವ ಮೊದಲು ಮನೆಯ ಒಳಗೆ ನೀರು ನುಗ್ಗುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿ ಸಂಬಂಧಿಕರೊಬ್ಬರಿಗೆ ಇವರು ಕಳಿಸಿದ್ದರು. ಆದರೆ ಕೆಲವು ಹೊತ್ತಿನಲ್ಲೇ ಜಲಪ್ರಳಯವು ಇವರನ್ನು ಆಪೋಶನ ತೆಗೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ