ವಿಶೇಷ ಅಧಿವೇಶನದಲ್ಲಿ ಕೇಂದ್ರ ಕೃಷಿ ಕಾನೂನು ವಿರುದ್ಧ ನಿರ್ಣಯಕ್ಕೆ ಕೇರಳ ಸಜ್ಜು!

Published : Dec 21, 2020, 02:43 PM IST
ವಿಶೇಷ ಅಧಿವೇಶನದಲ್ಲಿ ಕೇಂದ್ರ ಕೃಷಿ ಕಾನೂನು ವಿರುದ್ಧ ನಿರ್ಣಯಕ್ಕೆ ಕೇರಳ ಸಜ್ಜು!

ಸಾರಾಂಶ

ಕೇಂದ್ರ ಕೃಷಿ ಕಾನೂನು ವಿರುದ್ಧ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಕೇರಳ ಇದೀಗ ವಿಶೇಷ ಅಧಿವೇಶನ ಕರೆದಿದೆ. ಇಷ್ಟೇ ಅಲ್ಲ ಕೇಂದ್ರ ಕೃಷಿ ಮಸೂದೆ ವಿರುದ್ಧ ನಿರ್ಣಯ ಅಂಗೀಕರಿಸಲು ನಿರ್ಧರಿಸಿದೆ.  

ತಿರುವನಂತಪುರಂ(ಡಿ.21): ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ವಿರೋಧ ಹೆಚ್ಚಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಕೃಷಿ ಮಸೂದೆ ಆತಂಕಗಳನ್ನು ನಿವಾರಿಸುವ ಪ್ರಯತ್ನ ಮಾಡಿದ್ದರು. ಆಧರೆ ಈ ಪ್ರಯತ್ನ ಕೈಗೊಂಡಂತೆ ಕಾಣುತ್ತಿಲ್ಲ. ಕಾರಣ ಅತ್ತ ರೈತರ ಪ್ರತಿಭಟನೆ ತೀವ್ರಗೊಂಡರೆ, ಇತ್ತ ಕೇರಳ ಕೇಂದ್ರದ ಕೃಷಿ ಮಸೂದೆ ವಿರುದ್ಧ ನಿರ್ಣಯ ಅಂಗೀಕರಿಸಲು ಸಜ್ಜಾಗಿದೆ.

ನೂತನ ಕೃಷಿ ಮಸೂದೆ ಒಂದೇ ರಾತ್ರಿಯಲ್ಲಿ ಜಾರಿಗೆ ಬಂದಿಲ್ಲ; ರೈತರ ಹಾದಿ ತಪ್ಪಿಸಬೇಡಿ; ಮೋದಿ.

ಸೋಮವಾರ(ಡಿ.21) ಕರೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಕೇಂದ್ರದ ಕೃಷಿ ಮಸೂದೆ ವಿರುದ್ಧ ಬುಧವಾರ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದೆ. ಈ ವೇಳೆ ಕೇಂದ್ರದ ಕೃಷಿ ಮಸೂದೆ ವಿರುದ್ಧ ನಿರ್ಣಯ ಅಂಗೀಕರಿಸಲು ಕೇರಳ ಸರ್ಕಾರ ರೆಡಿಯಾಗಿದೆ. ಕೇರಳದಲ್ಲಿ ಆಡಳಿತಾರೂಢ LDF ಹಾಗೂ ಕಾಂಗ್ರೆಸ್ ನೇತೃತ್ವದ UDF ಕೇಂದ್ರದ ಕೃಷಿ ಕಾನೂನು ವಿರೋಧಿಸುತ್ತಿದೆ.

ಸಿಖ್ ಧರ್ಮ ಗುರು ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ರೈತ ಪ್ರತಿಭಟನೆಯ ಸ್ಫೋಟಕ ಮಾಹಿತಿ!.

ನಿಗದಿತ ಬಜೆಟ್ ಅಧಿವೇಶನಕ್ಕೂ ಮುನ್ನ ಕೇರಳ ವಿಶೇಷ ಕ್ಯಾಬಿನೆಟ್ ಅಧಿವೇಶನ ಕರೆದಿದೆ. ಈ ಅಧಿವೇಶನದಲ್ಲಿ ಕೇರಳ ವಿವಾದಾತ್ಮಕ ಕೃಷಿ ಮಸೂದೆ ಕುರಿತು ಚರ್ಚೆ ಹಾಗೂ ತಿರಸ್ಕರಿಸಲು ನಿರ್ಧರಿಸಲಾಗಿದೆ ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ಹೇಳಿದ್ದಾರೆ.

ವಿಶೇಷ ಅಧಿವೇಶನ ಕೃಷಿ  ಕಾನೂನು ಕುರಿತ ಚರ್ಚೆಗೆ ಮಾತ್ರ ಸೀಮಿತವಾಗಿದೆ. ಇನ್ನು ಕೇರಳ ಬಜೆಟ್ ಅಧಿವೇಶನ ಜನವರಿ 8 ರಿಂದ ನಡೆಯಲಿದೆ ಎಂದು ಥಾಮಸ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್