ನೌಕರರಿಗೆ ಸಂಬಳ, ಪಿಂಚಣಿ ನೀಡಲು ಕೇರಳದಲ್ಲಿ ತತ್ವಾರ

Kannadaprabha News   | Kannada Prabha
Published : Dec 19, 2025, 05:22 AM IST
kerala Govt employees

ಸಾರಾಂಶ

ಕೇರಳ ಸರ್ಕಾರದ ಆರ್ಥಿಕ ನಿರ್ವಹಣೆ ಹಳಿ ತಪ್ಪಿದ ಕಾರಣ ನೀಡಿ, 2025-26ನೇ ಆರ್ಥಿಕ ವರ್ಷದ ಕೊನೆಯ 3 ತಿಂಗಳಲ್ಲಿ ರಾಜ್ಯ ಸಾಲ ಪಡೆಯಬಹುದಾದ ಮೊತ್ತದ ಮಿತಿಯಲ್ಲಿ ಕೇಂದ್ರ ಸರ್ಕಾರ ಸುಮಾರು 6,000 ಕೋಟಿ ರು.ಗಳಷ್ಟು ಕಡಿತ ಮಾಡಿದೆ. ಇದು ಕೇರಳ ಮತ್ತು ಕೇಂದ್ರದ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

ತಿರುವನಂತಪುರಂ: ಕೇರಳ ಸರ್ಕಾರದ ಆರ್ಥಿಕ ನಿರ್ವಹಣೆ ಹಳಿ ತಪ್ಪಿದ ಕಾರಣ ನೀಡಿ, 2025-26ನೇ ಆರ್ಥಿಕ ವರ್ಷದ ಕೊನೆಯ 3 ತಿಂಗಳಲ್ಲಿ (ಜನವರಿ, ಫೆಬ್ರವರಿ, ಮಾರ್ಚ್) ರಾಜ್ಯ ಸಾಲ ಪಡೆಯಬಹುದಾದ ಮೊತ್ತದ ಮಿತಿಯಲ್ಲಿ ಕೇಂದ್ರ ಸರ್ಕಾರ ಸುಮಾರು 6,000 ಕೋಟಿ ರು.ಗಳಷ್ಟು ಕಡಿತ ಮಾಡಿದೆ. ಇದು ಕೇರಳ ಮತ್ತು ಕೇಂದ್ರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

12,500 ಕೋಟಿ ರು. ಸಾಲ ಮಾಡಿಕೊಳ್ಳಲು ಅನುಮತಿ

ಈ ಹಿಂದೆ ಕೇರಳಕ್ಕೆ ಈ ಅವಧಿಗೆ ಸುಮಾರು 12,500 ಕೋಟಿ ರು. ಸಾಲ ಮಾಡಿಕೊಳ್ಳಲು ಅನುಮತಿ ಇತ್ತು. ಆದರೆ ಈಗ ಕೇಂದ್ರದ ಹೊಸ ನಿರ್ಧಾರದಿಂದ ಆ ಮೊತ್ತ ಗಣನೀಯವಾಗಿ ಇಳಿದಿದೆ. ಇದರಿಂದ ಸರ್ಕಾರದ ಯೋಜನೆಗಳು, ಸಂಬಳ-ಪಿಂಚಣಿ ವೆಚ್ಚಗಳು ತೀವ್ರ ತೊಂದರೆಗೀಡಾಗಲಿವೆ.

ಸಚಿವ ಕೆ.ಎನ್. ಬಾಲಗೋಪಾಲ್ ಆಕ್ರೋಶ

‘ಕೇಂದ್ರ ಇದನ್ನು ಚುನಾವಣೆಗೆ ಮುಂಚಿತವಾಗಿ ಮಾಡುತ್ತಿದೆ. ಇದು ನಮ್ಮ ಸರ್ಕಾರದ ಕೊನೆಯ ಬಜೆಟ್ ಅವಧಿ. ಕಲ್ಯಾಣ ಯೋಜನೆಗಳನ್ನು ನಡೆಸಲು ಹಣವಿಲ್ಲದಂತೆ ಮಾಡುವ ಉದ್ದೇಶ ಇದರ ಹಿಂದಿದೆ’ ಎಂದು ಕೇರಳ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ಕೇರಳದ ಕೇರಳ ಸೋಷಿಯಲ್ ಸೆಕ್ಯುರಿಟಿ ಪಿಂಚಣಿ ಕಂಪನಿಯಂತಹ ಸಂಸ್ಥೆಗಳು ಮಿತಿ ಮೀರಿ ಸಾಲ ಮಾಡಿಕೊಂಡಿವೆ. ಅದನ್ನು ರಾಜ್ಯದ ಒಟ್ಟು ಸಾಲದ ಜೊತೆ ಸೇರಿಸಿ ಲೆಕ್ಕ ಹಾಕಿ ಕೇಂದ್ರ ಈ ಕ್ರಮ ಕೈಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ
ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ