
ತಿರುವನಂತಪುರಂ(ಮಾ.07): ಕೇರಳದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಕ್ರಾಂತಿ ಮಾಡಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ಸೇರಿದಂತೆ ಸರ್ಕಾರದ ಭ್ರಷ್ಟಾಚಾರದ ಪಟ್ಟಿ ದೊಡ್ದದಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಕೇರಳದ ತಿರುವನಂತಪುರಂದಲ್ಲಿ ಆಯೋಜಿಸಿದ್ದ ಕೇರಳ ವಿಜಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಮಿತ್ ಶಾ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಚಿನ್ನ ಸ್ಮಗ್ಲಿಂಗ್ನಲ್ಲಿ ಕೇರಳದ ಸಿಎಂ ಭಾಗಿ, ಆರೋಪಿ ಸ್ವಪ್ನಾ ಸ್ಫೋಟಕ ಹೇಳಿಕೆ!.
ಕೇರಳ ಸಾಮಾಜಿಕ ಕ್ರಾಂತಿಯಿಂದಲೇ ಹೆಸರುವಾಸಿಯಾಗಿದೆ. ಆದರೆ ಇದೀಗ ಕೇರಳ ಭ್ರಷ್ಟಾಚಾರ, ರಾಜಕೀಯ ಹಿಂಸೆ ಮತ್ತು ಕೆಟ್ಟ ಆಡಳಿತಕ್ಕೆ ಗುರಿಯಾಗಿದೆ ಎಂದು ಅಮಿತ್ ಶಾ ಹೇಳಿದರು. ಕೇರಳ ಸಂಪೂರ್ಣ ಸಾಕ್ಷರತೆ ಹೊಂದಿದ ಮೊದಲ ರಾಜ್ಯವಾಗಿದೆ. ಆದರೆ ಇದೀಗ ಅಭಿವೃದ್ಧಿಯೇ ನಶಿಸಿಹೋಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಕೇರಳದಲ್ಲಿ ನಿಂತು ಅಮೇಥಿ, ಉತ್ತರ ಭಾರತ ತೆಗಳಿದ ರಾಹುಲ್ ಗಾಂಧಿಗೆ ಮಂಗಳಾರತಿ!
UDF ಅಧಿಕಾರಕ್ಕೆ ಬಂದಾಗ ಸೌರ ಹಗರಣ ಮಾಡಿತು, LDF ಅಧಿಕಾರಕ್ಕೆ ಬಂದಾಗ ಗೋಲ್ಡ್ ಸ್ಮಗ್ಮಿಂಗ್, ಡಾಲರ್ ಹಗರಣ ಮಾಡುತ್ತಿದೆ. ಪೈಪೋಟಿಯಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಮೂಲಕ ಸೌಕರ್ಯ ಅಭಿವೃದ್ಧಿ ಹರಿಕಾರ, ಮೆಟ್ರೋಮ್ಯಾನ್ ಇ ಶ್ರೀಧರನ್ ಅಭಿವೃದ್ಧಿಗಾಗಿ ಬಿಜೆಪಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದರು. ಇದರ ಜೊತೆಗೆ ಗೋಲ್ಡ್ ಸ್ಮಗ್ಮಿಂಗ ಕೇಸ್, ನಿಮ್ಮ ಕಚೇರಿಯಲ್ಲಿ ಈ ಭ್ರಷ್ಟಾಚಾರಕ್ಕೆ 3 ಲಕ್ಷ ವೇತನ ಬೇರೆ ನೀಡಿದ್ದೀರಾ? ಸೇರಿದಂತೆ ಹಲವು ಪ್ರಶ್ನೆಗಳನ್ನು ಪಿರಣರಾಯಿ ವಿಜಯನ್ಗೆ ಕೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ